ಬೆಂಗಳೂರು | ಕೋರ್ಟ್‌ ಆವರಣದಲ್ಲಿ ವಕೀಲನಿಗೆ ಚಾಕುವಿನಿಂದ ಇರಿದ ಮಹಿಳೆ

Date:

  • ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ ವಕೀಲ
  • ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಆವರಣದಲ್ಲಿ ಈ ಘಟನೆ ನಡೆದಿದೆ

ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಾದ ಮಂಡಿಸಿ ಹೊರ ಬಂದ ವಕೀಲರೊಬ್ಬರ ಮೇಲೆ ಮಹಿಳೆಯೊಬ್ಬರು ಹಲ್ಲೆ ಮಾಡಿದ್ದಾರೆ. ಕಾಂಚನಾ ಎಂಬ ಮಹಿಳೆ ಹಲ್ಲೆ ಮಾಡಿದ್ದು, ಇವರ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ವಕೀಲ ಕೃಷ್ಣಾರೆಡ್ಡಿ ಹಲ್ಲೆಗೊಳಗಾದವರು. ಶುಕ್ರವಾರ ಮಧ್ಯಾಹ್ನ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಆವರಣದಲ್ಲಿ ಈ ಘಟನೆ ನಡೆದಿದೆ.

ಏನಿದು ಹಿನ್ನೆಲೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಚನಾ ನಾಲ್ಕು ವರ್ಷಗಳ ಹಿಂದೆ ಪೀಣ್ಯದ ನಿವಾಸಿ ಹರೀಶ್ ಹತ್ತಿರ ನಾಲ್ಕು ಲಕ್ಷ ಹಣವನ್ನು ಕೈ ಸಾಲವಾಗಿ ಪಡೆದಿದ್ದರು. ಪರಿಚಯಸ್ಥೆ ಎಂಬ ಹಿನ್ನೆಲೆ ಹರೀಶ್ ಸಾಲವನ್ನು ನೀಡಿದ್ದಾರೆ.

ಕೊಟ್ಟ ಸಾಲವನ್ನು ನಾಲ್ಕು ವರ್ಷಗಳಾದರೂ ಹಿಂತಿರುಗಿ ನೀಡಿರಲಿಲ್ಲ. ಈ ಬಗ್ಗೆ ಹರೀಶ್ ಕಾಂಚನಾಳೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿ ಅವರಿಂದ ಚೆಕ್ ಪಡೆದಿದ್ದರು. ಚೆಕ್ ಬೌನ್ಸ್ ಆಗಿತ್ತು. ಹಾಗಾಗಿ, ಹರೀಶ್ ತಮ್ಮ ವಕೀಲ ಕೃಷ್ಣಾರೆಡ್ಡಿ ಮೂಲಕ ನ್ಯಾಯಾಲಯದ ಮೆಟ್ಟಿಲೇರಿದ್ದರು.

ನ್ಯಾಯಾಲಯದಲ್ಲಿ ಶುಕ್ರವಾರ ವಾದ-ಪ್ರತಿವಾದ ನಡೆದ ನಂತರ ಮುಂದಿನ ವಿಚಾರಣೆಯನ್ನು ಮೇ 8ಕ್ಕೆ ಮುಂದೂಡಿತ್ತು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಲಾಲ್‌ಬಾಗ್‌ನ ವಾಯುವಿಹಾರಿಗಳಿಗೆ ಮತದಾನದ ಬಗ್ಗೆ ಜಾಗೃತಿ

ನ್ಯಾಯಾಲಯದಲ್ಲಿ ಕಲಾಪ ಮುಗಿಸಿ ಹೊರಬಂದ ಕೃಷ್ಣಾರೆಡ್ಡಿ, ಪ್ರತಿವಾದಿಯಾಗಿದ್ದ ಕಾಂಚನಾ, ನನ್ನ ವಿರುದ್ಧ ಕೇಸ್ ಮುಂದುವರೆಸುತ್ತೀಯಾ ಎಂದು ಹೇಳಿ ಮಾತಿನ ಚಕಮಕಿ ನಡೆಸಿದ್ದಾರೆ. ಈ ವೇಳೆ, ಇಬ್ಬರ ನಡುವೆ ಸಂಘರ್ಷ ಹೆಚ್ಚಾಗಿದೆ. ಕಾಂಚನಾ ಚಾಕುವಿನಿಂದ ಕೃಷ್ಣಾರೆಡ್ಡಿ ಅವರ ಕಣ್ಣಿನ ಮೇಲ್ಬಾಗಕ್ಕೆ ಚುಚ್ಚಿದ್ದಾರೆ. ಗಾಯಗೊಂಡ ಕೃಷ್ಣಾರೆಡ್ಡಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕಾಂಚನಾ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...