ಬೆಂಗಳೂರು | ನಮ್ಮ ಮೆಟ್ರೋ ಹಳಿ ಮೇಲೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

Date:

ಇತೀಚಿನ ದಿನಗಳಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನ ‘ನಮ್ಮ ಮೆಟ್ರೋ’ ಒಂದಿಲ್ಲೊಂದು ವಿಚಾರಗಳಿಂದ ಸುದ್ದಿಯಲ್ಲಿದೆ. ಈ ಹಿಂದೆ, ನಿಯಮ ಉಲ್ಲಂಘನೆ, ಲೈಂಗಿಕ ಕಿರುಕುಳ ಆರೋಪಗಳು ಕೇಳಿಬರುತ್ತಿದ್ದರೆ, ಮೊದಲ ಬಾರಿಗೆ ಯುವಕನೊಬ್ಬ ಮೆಟ್ರೋ ಹಳಿ ಮೇಲೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ.

ಬೆಂಗಳೂರಿನ ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಕೇರಳ ಮೂಲದ 23 ವರ್ಷದ ಯುವಕ ಶ್ಯಾರೋನ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಈತ ಬೆಂಗಳೂರಿನ ಅಬ್ಬಿಗೆರೆ ಬಳಿಯ ಐಟಿಐ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದನು. ಕಂಪನಿಯವರೇ ಈತನಿಗೆ ರೂಮ್ ಸಹ ಮಾಡಿಕೊಟ್ಟಿದ್ದರು.

ಡಿ.5ರ ಸಾಯಂಕಾಲ ಶ್ಯಾರೋನ್ ತನ್ನ ಸ್ನೇಹಿತರ ಜತೆಗೆ ಜಾಲಹಳ್ಳಿ ಮೆಟ್ರೋ ನಿಲ್ದಾಣಕ್ಕೆ ಬಂದಿದ್ದನು. ಜಾಲಹಳ್ಳಿಯಿಂದ ಮೆಜೆಸ್ಟಿಕ್‌ ಕಡೆಗೆ ತೆರಳಲು ಟಿಕೆಟ್‌ ಸಹ ಪಡೆದಿದ್ದನು. ರೈಲಿಗಾಗಿ ತನ್ನ ಸ್ನೇಹಿತರ ಜೆತೆಗೆ ಮೆಟ್ರೋ ಪ್ಲಾಟ್‌ಫಾರಂನಲ್ಲಿ ನಿಂತು ಕಾಯುತ್ತಿದ್ದನು. ರೈಲು ಪ್ಲಾಟ್‌ಫಾರಂ ಬಳಿ ಬರುವುದನ್ನು ಕಂಡು 7.12 ರ ಸುಮಾರಿಗೆ ಏಕಾಏಕಿ ರೈಲು ಹಳಿಗೆ ಶ್ಯಾರೋನ್ ಧುಮುಕಿದ್ದಾನೆ. ಈ ವೇಳೆ, ಮೆಟ್ರೋ ರೈಲು ಡಿಕ್ಕಿ ಹೊಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯುವಕ ಸ್ನೇಹಿತರ ಜತೆಗೆ ಬಂದು ಉದ್ದೇಶಪೂರ್ವಕವಾಗಿ ಹಳಿಗೆ ಧುಮುಕಿದ್ದಾನೆ. ಯುವಕನ ಸ್ಥಿತಿ ಗಂಭೀರವಾಗಿದ್ದು, ಮೆಟ್ರೋ ಸಿಬ್ಬಂದಿ ಆ್ಯಂಬುಲೆನ್ಸ್​ನಲ್ಲಿ ಕರೆದೊಯ್ದು ಯಶವಂತಪುರದ ಸಂಜೀವಿನಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ಡಿ.5ರಂದು ರಾಜ್ಯದಲ್ಲಿ 328 ಮಂದಿಗೆ ಕೊರೋನಾ ದೃಢ

ಮೆಟ್ರೋ ಸಂಚಾರ ವ್ಯತ್ಯಯ

ಘಟನೆ ಹಿನ್ನೆಲೆ, ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ಕೆಲಕಾಲ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಸುಮಾರು 15 ನಿಮಿಷಗಳ ಕಾಲ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರು ಪರಾಡುವಂತಾಯಿತು. ಇನ್ನು ಘಟನೆಯ ಸಮಯದಲ್ಲಿ ನಾಲ್ಕು ರೈಲುಗಳನ್ನು ಇತರೆ ನಿಲ್ದಾಣದ ಪ್ಲಾಟ್‌ಫಾರ್ಮ್‌ಗಳಲ್ಲಿ ಸ್ಥಗಿತಗೊಳಿಸಿ ಎಲ್ಲ ಪ್ರಯಾಣಿಕರನ್ನು ರೈಲಿನಿಂದ ಸುರಕ್ಷಿತವಾಗಿ ಹೊರಗಿಳಿಸಲಾಗಿದೆ.

ಮೆಟ್ರೋ ಹಳಿಗಳಲ್ಲಿ 750 ವೋಲ್ಟ್ ಹೆವಿ ಪವರ್ ಕರೆಂಟ್ ಹಾದು ಹೋಗಿರುತ್ತದೆ. ಹಾಗಾಗಿ, ಮತ್ತೆ ಪವರ್ ಜನರೇಟ್ ಮಾಡಲು ಅರ್ಧ ಗಂಟೆ ಸಮಯ ಬೇಕಾಗುತ್ತದೆ.

ಈ ಘಟನೆಯಿಂದ ಸುಮಾರು 45 ನಿಮಿಷಗಳ ಕಾಲ ಯಶವಂತಪುರ ಮತ್ತು ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ಹಸಿರು ಮಾರ್ಗದ ಕಾರ್ಯಾಚರಣೆ ನಡೆಸಲಾಯಿತು. ರಾತ್ರಿ 8 ಗಂಟೆಯಿಂದ ಸಂಪೂರ್ಣ ಹಸಿರು ಮಾರ್ಗದಲ್ಲಿ ಕಾರ್ಯಾಚರಣೆ ಪುನರಾರಂಭಿಸಲಾಗಿದೆ ಎಂದು ನಮ್ಮ ಮೆಟ್ರೋ ಸಾರ್ವಜನಿಕ ಸಂಪರ್ಕಾಧಿಕಾರಿ ಯಶವಂತ್‌ ಚೌಹಾಣ್‌ ಹೇಳಿದ್ದಾರೆ.

ಮೆಟ್ರೋ ಸಿಬ್ಬಂದಿ ಸ್ಥಳೀಯ ಪೊಲೀಸರಿಗೆ ಘಟನೆಯ ಬಗ್ಗೆ ಮಾಹಿತಿ ನೀಡಿದ್ದು, ಯಾವ ಕಾರಣಕ್ಕೆ ವ್ಯಕ್ತಿ ಹಳಿಗೆ ಜಿಗಿದಿದ್ದಾನೆ. ಆತನ ಹಿನ್ನೆಲೆ ಏನು ಎಂಬುದು ಪೊಲೀಸ್‌ ತನಿಖೆ ನಂತರ ತಿಳಿದುಬರಬೇಕಿದೆ. ಪೀಣ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...