ಬೆಂಗಳೂರು | ಕೊರೊನಾ ನಂತರ ಪಾದಚಾರಿಗಳ ಸಾವಿನ ಸಂಖ್ಯೆಯಲ್ಲಿ ಏರಿಕೆ

Date:

  • 2013ರ ರಸ್ತೆ ಅಪಘಾತಗಳಲ್ಲಿ 382 ಪಾದಚಾರಿಗಳು ಸಾವನ್ನಪ್ಪಿ, 1,403 ಮಂದಿಗೆ ಗಾಯ
  • 2022ರಲ್ಲಿ ನಿಯಮ ಉಲ್ಲಂಘಿಸಿದ 18,144 ಪಾದಚಾರಿಗಳ ವಿರುದ್ಧ ಪ್ರಕರಣ ದಾಖಲು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ನಂತರ ಮತ್ತೆ ರಸ್ತೆ ಅಪಘಾತಗಳಲ್ಲಿ ಪಾದಚಾರಿಗಳ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ.

ನಗರದಲ್ಲಿ ರಸ್ತೆ ಅಪಘಾತಗಳಿಂದ 2022ರಲ್ಲಿ ಒಟ್ಟು 248 ಪಾದಚಾರಿಗಳು ಸಾವನ್ನಪ್ಪಿ,819 ಮಂದಿ ಗಾಯಗೊಂಡಿದ್ದಾರೆ. 2019ರಲ್ಲಿ 272 ಸಾವು ಮತ್ತು 1,197 ಮಂದಿ ಗಾಯಗೊಂಡಿದ್ದರು. 2013ರಲ್ಲಿ 382 ಸಾವು ಮತ್ತು 1,403 ಮಂದಿ ಗಾಯಗೊಂಡಿದ್ದರು.

“ನಗರದಲ್ಲಿ ದ್ವಿಚಕ್ರ ವಾಹನ ಸವಾರರು ನಿರ್ಲಕ್ಷ್ಯವಾಗಿ ವಾಹನ ಚಾಲನೆ ಮಾಡುತ್ತಾರೆ. ದ್ವಿಚಕ್ರ ವಾಹನಗಳನ್ನು ಫುಟ್‌ಪಾತ್‌ಗಳಲ್ಲಿ ಪಾರ್ಕಿಂಗ್ ಮಾಡುವುದು. ಸಿಗ್ನಲ್‌ಗಳನ್ನು ಜಂಪ್‌ ಮಾಡುವುದರಿಂದ ನಗರದಲ್ಲಿರುವ ರಸ್ತೆಗಳು ಮತ್ತು ಫುಟ್‌ಪಾತ್‌ಗಳು ಪಾದಚಾರಿಗಳಿಗೆ ಅಸುರಕ್ಷಿತವಾಗಿಸಿದೆ” ಎಂದು ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್‌ಸಿ) ಟ್ರಾನ್ಸ್‌ಪೋರ್ಟ್ ಸಿಸ್ಟಮ್ಸ್ ಎಂಜಿನಿಯರಿಂಗ್‌ ಪ್ರೊಫೆಸರ್ ಆಶಿಶ್ ವರ್ಮಾ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದೆರಡು ವರ್ಷಗಳಿಂದ ನಡೆಯುತ್ತಿರುವ ಮೆಟ್ರೊ ಕಾಮಗಾರಿ ಮತ್ತು ರಸ್ತೆ ದುರಸ್ತಿ ಕಾಮಗಾರಿಗಳಿಂದಾಗಿ ಫುಟ್‌ಪಾತ್‌​ಗಳಲ್ಲಿ ಪಾದಚಾರಿಗಳು ಓಡಾಡಲು ತೊಂದರೆಯಾಗುತ್ತಿದೆ. ಇದರಿಂದ ಅಪಘಾತಗಳು ಸಂಭವಿಸುತ್ತಿವೆ. ನಗರದಲ್ಲಿ ಪಾದಚಾರಿಗಳನ್ನು ಪರಿಗಣನೆಗೆ ತೆಗೆದುಕೊಳ್ಳದೆ ಮೆಟ್ರೋ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಕಾಮಗಾರಿ ನಡೆಯುತ್ತಿರುವ ಸ್ಥಳಗಳಲ್ಲಿ ಪಾದಚಾರಿಗಳು ಓಡಾಡುವುದು ಅಸಾಧ್ಯವಾಗಿದೆ. ಹೀಗಾಗಿ, ವಾಹನಕ್ಕೆ ಡಿಕ್ಕಿಯಾಗುವ ಅಪಾಯವನ್ನು ಹೆಚ್ಚಿಸಿದೆ” ಎಂದು ಆಶಿಶ್ ವರ್ಮಾ ತಿಳಿಸಿದ್ದಾರೆ.

2022ರಲ್ಲಿ ಫುಟ್‌ಪಾತ್‌ಗಳಲ್ಲಿ ಸವಾರಿ ಮಾಡಿದ್ದಕ್ಕಾಗಿ 18,144 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇದು ಹಿಂದಿನ ವರ್ಷ​​ಕ್ಕಿಂತ ಶೇ. 115.4ರಷ್ಟು ಹೆಚ್ಚಾಗಿದೆ. ಕಳೆದ ವರ್ಷ ಸಂಖ್ಯೆ 8,422 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ನಗರದ ಹಲವೆಡೆ ವಾಹನ ಬಳಸುವವರು ಫುಟ್‌ಪಾತ್ ಮೇಲೆಯೇ ವಾಹನಗಳನ್ನು ನಿಲ್ಲಿಸುತ್ತಾರೆ. ಕಳೆದ ವರ್ಷ, ನಗರದಲ್ಲಿ ವಾಹನ ಬಳಕೆದಾರರ ವಿರುದ್ಧ 1,53,983 ಫುಟ್‌ಪಾತ್ ಪಾರ್ಕಿಂಗ್ ಪ್ರಕರಣಗಳು ದಾಖಲಾಗಿವೆ. 2021ರಲ್ಲಿ 74,851 ಪ್ರಕರಣಗಳಿಂದ ಶೇ. 105 ಹೆಚ್ಚಳವಾಗಿದೆ. ಇದರರ್ಥ ಪಾದಚಾರಿಗಳಿಗೆ ಅವರಿಗೆ ಮೀಸಲಾದ ಪ್ರದೇಶದಲ್ಲಿ ನಡೆದಾಡಲು ಕಡಿಮೆ ಸ್ಥಳಾವಕಾಶವಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕೊಳಚೆ ನೀರಿನಿಂದ ಮೀನುಗಳ ಮಾರಣಹೋಮ

ಈ ವರ್ಷ ಈಗಾಗಲೇ ನಗರದಲ್ಲಿ ಸಿಗ್ನಲ್‌ಗಳನ್ನು ಜಂಪ್ ಮಾಡುವ ವಾಹನಗಳ ಸಂಖ್ಯೆಯಲ್ಲಿ ಆತಂಕಕಾರಿ ಹೆಚ್ಚಳ ಕಂಡುಬಂದಿದೆ. ಫೆಬ್ರವರಿ 28 ರವರೆಗೆ, ಸಿಗ್ನಲ್‌ ಜಂಪ್‌ ಮಾಡಿದ ವಾಹನ ಸವಾರರ ವಿರುದ್ಧ 1,61,352 ಪ್ರಕರಣ ದಾಖಲಿಸಲಾಗಿದೆ. 2022 ಮತ್ತು 2021ರ ಅಂಕಿಅಂಶಗಳ ಪ್ರಕಾರ ಕ್ರಮವಾಗಿ 4,20,541 ಮತ್ತು 8,22,529 ಪ್ರಕರಣಗಳನ್ನು ದಾಖಲಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...