ಬೆಂಗಳೂರು | 24/7 ಹೋಟೆಲ್​ ತೆರೆಯಲು ಅನುಮತಿ ನೀಡಿ: ಸರ್ಕಾರಕ್ಕೆ ಮನವಿ ಸಲ್ಲಿಸಿದ ಬಿಬಿಎಚ್‌ಎ

Date:

  • ಉದ್ಯಮಗಳು ಹಾಗೂ ಹೆಚ್ಚಿನ ಉದ್ಯೋಗ ಸೃಷ್ಟಿಗೆ ದಾರಿ
  • ಕಳೆದ 1 ವರ್ಷದಿಂದ 24/7 ಹೋಟೆಲ್‌ ತೆರೆಯಲು ಮನವಿ

ರಾಜಧಾನಿ ಬೆಂಗಳೂರಿನಲ್ಲಿ ಗ್ರಾಹಕರಿಗೆ ಹೆಚ್ಚಿನ ಸೇವೆ ಒದಗಿಸುವ ನಿಟ್ಟಿನಲ್ಲಿ 24/7 ಹೋಟೆಲ್‌ಗಳನ್ನು ತೆರೆಯಲು ಅನುಮತಿ ನೀಡಬೇಕೆಂದು ಬೃಹತ್ ಬೆಂಗಳೂರು ಹೋಟೆಲುಗಳ ಸಂಘ (ಬಿಬಿಎಚ್‌ಎ) ಸರ್ಕಾರಕ್ಕೆ ಮನವಿ ಮಾಡಿದೆ.

ಕಳೆದ ಒಂದು ವರ್ಷದಿಂದ ಬಿಬಿಎಚ್‌ಎ 24/7 ಹೋಟೆಲ್‌ಗಳನ್ನು ತೆರೆಯಲು ಮನವಿ ಮಾಡುತ್ತಿದ್ದು, ಈ ಬಾರಿ ನೂತನ ಸರ್ಕಾರಕ್ಕೆ ಹಾಗೂ ಬೆಂಗಳೂರು ಪೊಲೀಸರಿಗೆ ಮನವಿ ಸಲ್ಲಿಸಿದೆ.

“ತಡರಾತ್ರಿ 1ರವರೆಗೆ ಎಲ್ಲ ಹೋಟೆಲ್‌, ಬೇಕರಿ, ಸ್ವೀಟ್‌ ಸ್ಟಾಲ್‌ ಹಾಗೂ ಐಸ್‌ಕ್ರೀಂ ಪಾರ್ಲರ್‌ಗಳನ್ನು ತೆರೆದಿಡಬಹುದು ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತರು ಆದೇಶ ಹೊರಡಿಸಿದ್ದಾರೆ. ರಾಜ್ಯ ಸರ್ಕಾರವೂ 24/7 ಹೋಟೆಲ್‌ಗಳನ್ನು ತೆರೆದಿಡಲು ಮಾರ್ಗಸೂಚಿ ನೀಡಿದ್ದರೂ ಪೊಲೀಸ್‌ ಇಲಾಖೆ ಅನುಮತಿ ನೀಡಿಲ್ಲ” ಎಂದು ಬಿಬಿಎಚ್‌ಎ ಅಧ್ಯಕ್ಷ ಪಿ ಸಿ ರಾವ್‌ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇಶದ ಇತರೆ ರಾಜ್ಯಗಳಾದ ತಮಿಳುನಾಡು, ಕೇರಳ, ಗುಜರಾತ್ ಮುಂತಾದ ಕಡೆಗಳಲ್ಲಿ ಈಗಾಗಲೇ 24/7 ಹೋಟೆಲ್ ತೆರೆದಿರಲು ಅವಕಾಶ ಮಾಡಿಕೊಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಎರಡು ಮಾರ್ಗಸೂಚಿ ಹೊರಡಿಸಿವೆ. ಕೇರಳ ಮತ್ತು ತಮಿಳುನಾಡು ಉಚ್ಚನ್ಯಾಯಾಲಯಗಳು ಇದರ ಪರವಾಗಿ ತೀರ್ಪು ನೀಡಿವೆ. ಇದರಿಂದ ಬಹಳಷ್ಟು ಜನರಿಗೆ ಉಪಯೋಗವಾಗಲಿದೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಾಲಸೋರ್ ರೈಲು ಅವಘಡ | ಗಾಯಾಳು ಕನ್ನಡಿಗರ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

“ಹೋಟೆಲ್ 24/7 ತೆರೆದಿರುವುದರಿಂದ ಹಾಲು ಮತ್ತು ದಿನಪತ್ರಿಕೆ ಸರಬರಾಜು ಮಾಡುವವರು, ತರಕಾರಿ, ಹೂವು, ಹಣ್ಣು ಮುಂತಾದವುಗಳನ್ನು ಮಾರ್ಕೆಟ್‌ಗೆ ತರುವ ರೈತರು ಹಾಗೂ ವ್ಯಾಪಾರಿಗಳು, ಶಿಫ್ಟ್‌ನಲ್ಲಿ ಕೆಲಸಕ್ಕೆ ಹೋಗುವವರು ಸೇರಿದಂತೆ ಬಹಳಷ್ಟು ಜನಸಾಮಾನ್ಯರು ಇರುತ್ತಾರೆ. ಇವರಿಗೆ ಆಹಾರದ ಅಗತ್ಯತೆ ಇರುತ್ತದೆ. ಇದಲ್ಲದೇ ಬಹಳಷ್ಟು ಪ್ರವಾಸಿಗರು ಬಸ್‌, ರೈಲು ಮತ್ತು ವಿಮಾನ ಮೂಲಕ ರಾತ್ರಿ ನಗರಕ್ಕೆ ಬಂದಿಳಿಯುವವರಿರುತ್ತಾರೆ. ಅಗತ್ಯ ಸೇವೆ ಒದಗಿಸುವ ಪೊಲೀಸ್‌, ಆಂಬ್ಯುಲೆನ್ಸ್‌, ವೈದ್ಯಕೀಯ ಸಿಬ್ಬಂದಿ ಮುಂತಾದವರು ರಾತ್ರಿ ಓಡಾಡುತ್ತಾರೆ. ಇವರಿಗೆಲ್ಲ ಅನುಕೂಲವಾಗಲಿದೆ” ಎಂದು ಹೇಳಿದ್ದಾರೆ.

“ಜನರಿಗೆ ಅಗತ್ಯವಿರುವ ಕುಡಿಯುವ ನೀರು, ಶೌಚಾಲಯಗಳನ್ನು ಉಚಿತವಾಗಿ ಪೂರೈಸುವುದರಿಂದ ಸಹಕಾರಿಯಾಗಲಿದೆ. ಇದರಿಂದ ಹೊಸ ಉದ್ಯಮಗಳು ಹಾಗೂ ಹೆಚ್ಚಿನ ಉದ್ಯೋಗ ಸೃಷ್ಟಿಯಾಗಲಿವೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...