ಬೆಂಗಳೂರು | ಕನ್ನಡಿಗರ ಭಾವನೆಗಳೊಂದಿಗೆ ಅಮೂಲ್‌ ಆಟವಾಡುತ್ತಿದೆ; ಕರವೇ ಆರೋಪ

Date:

  • ಅಮೂಲ್ ಹಾಲು ಮಾರಾಟದ ವಿರುದ್ಧ ಸಿಡಿದೆದ್ದ ಕರವೇ
  • ಅಮೂಲ್ ಹಾಲು ಹಾಗೂ ಉತ್ಪನ್ನಗಳನ್ನು ಬೀದಿಗೆಸೆದು ಪ್ರತಿಭಟನೆ

ಕೇಂದ್ರ ಸರ್ಕಾರ ನಂದಿನಿಯನ್ನು ಅಮೂಲ್ ನೊಂದಿಗೆ ವಿಲೀನಗೊಳಿಸಲು ಪ್ರಯತ್ನಿಸುತ್ತಿದೆ. ಇದೆನಾದರೂ ನಡೆದರೆ ಕರ್ನಾಟಕದ ಜನತೆ ದಂಗೆ ಏಳುತ್ತಾರೆ. ಅಮೂಲ್ ಸಂಸ್ಥೆ ಕನ್ನಡಿಗರ ಭಾವನೆಗಳೊಂದಿಗೆ ಆಟವಾಡುತ್ತಿದೆ. ಕನ್ನಡಿಗರು ಕಟ್ಟಿದ ಹೆಮ್ಮೆಯ ಸಂಸ್ಥೆ ಕೆಎಂಎಫ್ (ನಂದಿನಿ)ಅನ್ನು ನಾಶಪಡಿಸಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಕರವೇ ರಾಜ್ಯ ಉಪಾಧ್ಯಕ್ಷ ದಾ.ಪಿ.ಆಂಜನಪ್ಪ ಎಚ್ಚರಿಕೆ ನೀಡಿದರು.

ಬೆಂಗಳೂರಿನ ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಟಿ.ಎ.ನಾರಾಯಣಗೌಡರ ನೇತೃತ್ವದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಅಮೂಲ್ ಹಾಲು, ಮೊಸರು, ತುಪ್ಪ, ಬೆಣ್ಣೆ, ಚೀಜ್ ಇತ್ಯಾದಿ ಉತ್ಪನ್ನಗಳನ್ನು ಬೀದಿಗೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಮೂಲ್ ಹಾಲು-ಮೊಸರು ವ್ಯಾಪಾರಕ್ಕೆ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದೆಂದು ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಕರವೇ ಯುವಘಟಕದ ರಾಜ್ಯಾಧ್ಯಕ್ಷ ಟಿ.ಎ.ಧರ್ಮರಾಜ್ ಗೌಡ, “ಅಮೂಲ್ ಹಠಮಾರಿತನ ಮುಂದುವರೆಸಿ ಹಾಲು-ಮೊಸರು ವ್ಯಾಪಾರ ಮುಂದುವರೆಸಿದರೆ, ಕರ್ನಾಟಕದಲ್ಲಿ ಅಮೂಲ್‌ನ ಎಲ್ಲ ಉತ್ಪನ್ನಗಳಿಗೂ ಬಹಿಷ್ಕಾರ ಹಾಕಬೇಕಾಗುತ್ತದೆ. ಅಮೂಲ್ ಐಸ್ ಕ್ರೀಂನಿಂದ ಹಿಡಿದು ಬಿಸ್ಕೆಟ್‌ವರೆಗೆ ಯಾವ ಉತ್ಪನ್ನವನ್ನೂ ಮಾರಾಟ ಮಾಡಲು ಬಿಡುವುದಿಲ್ಲ‌. ಹೀಗಾಗಿ, ಅಮೂಲ್ ಕೂಡಲೇ ಹಾಲು, ಮೊಸರು ವ್ಯಾಪಾರ ನಿಲ್ಲಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದ ಒಂಟಿ ಮಹಿಳೆ ಹತ್ಯೆ

ಪ್ರತಿಭಟನೆ ಸಂದರ್ಭದಲ್ಲಿ ಅಮೂಲ್ ಭೂತದಹನ ಮಾಡಲು ಕಾರ್ಯಕರ್ತರು ಮುಂದಾದಾಗ ಪೊಲೀಸರು ಅಡ್ಡಿಪಡಿಸಿದರು. ವಿರೋಧದ ನಡುವೆಯೂ ಭೂತದಹನಕ್ಕೆ ಮುಂದಾದ ಕರವೇ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

“ನೂರಾರು ಕರವೇ ಕಾರ್ಯಕರ್ತರನ್ನು ಹೇಡಿ ಸರ್ಕಾರ ಪೊಲೀಸರನ್ನು ಮುಂದೆ ಬಿಟ್ಟು ಬಂಧಿಸಿದೆ. ನಿಮ್ಮ ದೌರ್ಜನ್ಯವನ್ನು ಸವಾಲಾಗಿ ಸ್ವೀಕರಿಸಲಿದ್ದೇವೆ. ರಾಜ್ಯದ ಮೂಲೆಮೂಲೆಗಳಲ್ಲೂ ಹೋರಾಟ ಮೊಳಗಲಿದೆ. ಅದೆಷ್ಟು ಪೊಲೀಸರನ್ನು ಕಳಿಸುತ್ತೀರೋ ಕಳಿಸಲಿ” ಎಂದು ಪೊಲೀಸ್‌ ದೌರ್ಜನ್ಯದ ವಿರುದ್ಧ ಕರವೇ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ ಸಣ್ಣೀರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯಲ್ಲಿ ಕರವೇ ಮುಖಂಡರಾದ ಶ್ವೇತಾ ಮೋಹನ್, ಗೋಮೂರ್ತಿ ಯಾದವ್, ವೀರಭದ್ರ, ಕುಮಾರ್ (ಆಟೋ ಘಟಕ), ಕೆ.ಪಿ.ನರಸಿಂಹ, ಕಾರ್ತಿಕ್, ಲಕ್ಷ್ಮಿ ಸೇರಿದಂತೆ ನೂರಾರು ಮಂದಿ ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...