ಬೆಂಗಳೂರು | ₹12 ಲಕ್ಷ ಮೌಲ್ಯದ ಅಮೆರಿಕನ್ ಡೈಮಂಡ್ ಗಣಪತಿ ಪ್ರತಿಷ್ಠಾಪನೆಗೆ ಸಿದ್ಧ

Date:

₹12 ಲಕ್ಷ ಮೌಲ್ಯದ ಅಮೆರಿಕನ್​​​ ಡೈಮಂಡ್​ ಹರಳುಗಳಿಂದ ಮಾಡಿದ ಗಣಪತಿ ಮೂರ್ತಿಯನ್ನು ಹುಬ್ಬಳ್ಳಿಯಿಂದ ಬೆಂಗಳೂರಿಗೆ ತರಲಾಗಿದ್ದು, ನಗರದ ರಾಜಾಜಿನಗರ 2ನೇ ಹಂತದ ಮಿಲ್ಕ್ ಕಾಲೋನಿ 5ನೇ ಮುಖ್ಯ ರಸ್ತೆಯಲ್ಲಿ ಸ್ವಸ್ತಿಕ್ ಯುವಕರ ಸಂಘ ಸೆ.18 ರಂದು ಪ್ರತಿಷ್ಠಾಪನೆ ಮಾಡಲಿದೆ.

ಹುಬ್ಬಳ್ಳಿಯ ಬಮ್ಮಾಪುರ ನಿವಾಸಿ ಮೂರ್ತಿ ಕಲಾವಿದ ಮಹೇಶ ಮುರಗೋಡ ಹಾಗೂ ತಂಡದವರು ಈ ಮೂರ್ತಿಯನ್ನು ಸಿದ್ಧಪಡಿಸಿದ್ದಾರೆ. ಸುಮಾರು 60 ಸಾವಿರ ಅಮೆರಿಕನ್​​ ಡೈಮಂಡ್ ಹಾಗೂ ನವರತ್ನ ಹರಳುಗಳಿಂದ ಗಣೇಶ ಮೂರ್ತಿಯ ಮುಖವೊಂದನ್ನು ಹೊರತುಪಡಿಸಿ, ಉಳಿದ ಎಲ್ಲ ಭಾಗಗಳನ್ನು ತಯಾರು ಮಾಡಲಾಗಿದೆ. ಈ ಗಣೇಶ ಮೂರ್ತಿ ಒಟ್ಟು 5.7 ಅಡಿ ಎತ್ತರವಿದೆ. ಸುಮಾರು 150 ಕೆಜಿ ತೂಕ ಹೊಂದಿದೆ.

ಬೆಂಗಳೂರಿನ ಸ್ವಸ್ತಿಕ್ ಯುವಕರ ಸಂಘ ಕಳೆದ ಹಲವು ವರ್ಷಗಳಿಂದ ಅಮೆರಿಕನ್ ಡೈಮಂಡ್‌ ಹರಳುಗಳಿಂದ ಗಣೇಶ ಮೂರ್ತಿಯನ್ನು ತಯಾರು ಮಾಡಿಸುತ್ತಿದ್ದಾರೆ. ಏಳು ದಿನಗಳವರೆಗೆ ಪ್ರತಿಷ್ಠಾಪನೆ ಮಾಡಿ ಗಣೇಶನಿಗೆ ಪೂಜೆ ಸಲ್ಲಿಸಿ ಸಂಭ್ರಮಿಸುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಗಣೇಶ ಚತುರ್ಥಿಯಂದು ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧ

ಹುಬ್ಬಳ್ಳಿಯಲ್ಲಿ ಗಣೇಶ ಮೂರ್ತಿಯನ್ನು ತಯಾರು ಮಾಡಿದ್ದು, ರೈಲಿನ ಮೂಲಕ ಬೆಂಗಳೂರಿಗೆ ಶುಕ್ರವಾರ ಸಾಗಿಸಲಾಗಿದೆ. ಬೆಂಗಳೂರಿನ ಸ್ವಸ್ತಿಕ್ ಯುವಕರ ಸಂಘ ಗಣೇಶ ಉತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡುತ್ತದೆ.

3 ಲಕ್ಷ ಗಣೇಶ ಮೂರ್ತಿ ತಯಾರು ಮಾಡಿದ ಕುಟುಂಬ

ಈ ಬಾರಿಯ ಗಣೇಶ ಚತುರ್ಥಿಗೆ ಬೆಳಗಾವಿ ಜಿಲ್ಲೆಯ ಕುಂಬಾರ ಕುಟುಂಬವೊಂದು ಬರೋಬ್ಬರಿ 3 ಲಕ್ಷ ಗಣೇಶ ಮೂರ್ತಿಗಳನ್ನು ತಯಾರು ಮಾಡಿದೆ.

ಈ ಕುಟುಂಬದ ಮೂಲ ವೃತ್ತಿ ಗಣೇಶನ ಮೂರ್ತಿಗಳನ್ನು ತಯಾರು ಮಾಡುವುದು. ಕಳೆದ ಆರು ವರ್ಷಗಳಿಂದ ಮಣ್ಣಿನ ಮೂರ್ತಿಗಳನ್ನು ಮಾತ್ರ ತಯಾರು ಮಾಡುತ್ತಿದ್ದಾರೆ. ಈ ಕುಟುಂಬ ಆರಂಭದಲ್ಲಿ 40 ಮೂರ್ತಿಗಳನ್ನು ತಯಾರು ಮಾಡುತ್ತಿತ್ತು. ಈ ವರ್ಷ 3 ಲಕ್ಷ ಮೂರ್ತಿಗಳನ್ನು ತಯಾರಿಸಿ ಮಾರಾಟಕ್ಕೆ ಇಟ್ಟಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...