ಬೆಂಗಳೂರು | 500 ಮೀ ಪ್ರಯಾಣಕ್ಕೆ ₹100 ಪಡೆದ ಆಟೋ ಚಾಲಕ; ಟ್ವೀಟ್

Date:

  • ಆಟೋ ರೀಕ್ಷಾಗಳು ಮೀಟರ್‌ ಲೆಕ್ಕದಲ್ಲಿ ಸಂಚರಿಸುವ ಏಕೈಕ ಸ್ಥಳ ಮುಂಬೈ
  • ಮುಂಬೈನಲ್ಲಿ ಸುಮಾರು 9 ಕಿ.ಮೀಗಳಿಗೆ ₹100 ಆಟೋ ಮೀಟರ್ ದರ

ರಾಜ್ಯ ರಾಜಧಾನಿ ಬೆಂಗಳೂರು ಮಹಾನಗರದಲ್ಲಿ ಆಟೋದಲ್ಲಿ ಪ್ರಯಾಣಿಸುವುದು ಬಲು ದುಬಾರಿಯಾಗಿದ್ದು, ಇಲ್ಲೊಬ್ಬ ವ್ಯಕ್ತಿ 500 ಮೀ ಪ್ರಯಾಣಿಸಿದಕ್ಕಾಗಿ ₹100 ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.  

ಮುಂಬೈ ಮೂಲದ ನ್ಯೂರಲ್‌ಗ್ಯಾರೇಜ್‌ನ ಸಹ ಸಂಸ್ಥಾಪಕ ಮತ್ತು ಸಿಇಒ ಆದ ಮಂದಾರ ನಾಟೇಕರ್ ಅವರು ಬೆಂಗಳೂರಿನಲ್ಲಿ ಆಟೋದಲ್ಲಿ ಪ್ರಯಾಣಿಸಿದ ಅನುಭವವನ್ನು ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

“ಈ ಫೋಟೋದಲ್ಲಿ ನೀವು ಬೆಂಗಳೂರಿನ ಅತ್ಯಂತ ಆಲಂಕಾರಿಕ ವಸ್ತುವನ್ನು ನೋಡುತ್ತೀರಿ. ಅದುವೇ ದೊಡ್ಡ ಆಟೋ ಮೀಟರ್. ಎಷ್ಟು ದುಬಾರಿ ಎಂದರೆ ಅದು ಎಂದಿಗೂ ಬಳಕೆಯಾಗುವುದಿಲ್ಲ. ನಾನು ಕೇವಲ 500 ಮೀಟರ್ ರೈಡ್‌ಗೆ ₹100 ಪಾವತಿಸಿದ್ದೇನೆ. ಅಂದಾಜಿನ ಪ್ರಕಾರ ಮುಂಬೈನಲ್ಲಿ ಸುಮಾರು 9 ಕಿ.ಮೀಗಳಿಗೆ ₹100 ಮೀಟರ್ ದರವಾಗಿದೆ” ಎಂದು ಟ್ವೀಟ್‌ ಮಾಡಿದ್ದಾರೆ. ಜತೆಗೆ ಫೋಟೋ ಹಾಕಿ ‘ಪೀಕ್ ಬೆಂಗಳೂರು’ ಎಂದು ಹ್ಯಾಶ್‌ಟ್ಯಾಗ್ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕೆ ಹಲವಾರು ಜನ ಪ್ರತ್ರಿಕ್ರಿಯೆ ನೀಡಿದ್ದು, “ಮುಂಬೈನಲ್ಲಿ ಮೀಟರ್ ಮೂಲಕ ಆಟೋ ಸಿಗುತ್ತದೆ. ಆದರೆ ರಸ್ತೆಗಳು ತುಂಬಾ ಕೆಟ್ಟ ಸ್ಥಿತಿಯಲ್ಲಿವೆ ಮತ್ತು ತುಂಬಾ ಟ್ರಾಫಿಕ್ ಇದೆ. ಪ್ರತಿ ರಸ್ತೆಯಲ್ಲೂ ಗುಂಡಿಗಳು. ನೀವು ದೂರದ ಪ್ರಯಾಣ ಮಾಡಿದರೆ, ನಿಮಗೆ ಬೆನ್ನುಮೂಳೆಯ ಸಮಸ್ಯೆಗಳು ಖಂಡಿತವಾಗಿ ಪ್ರಾರಂಭವಾಗುತ್ತವೆ” ಎಂದು ತ್ರುಶಿತ್ ಶಾ ಎಂಬುವವರು ತಿಳಿಸಿದ್ದಾರೆ.

ಟಿವಿಎಫ್‌ನ ಅಧ್ಯಕ್ಷ ವಿಜಯ್ ಕೋಶಿ, ‘‘ಇದು ಪ್ರಾಯೋಗಿಕವಾಗಿ ಮುಂಬೈನ ಹೊರಗಿನ ಪ್ರತಿಯೊಂದು ನಗರಕ್ಕೂ ಒಂದೇ ಆಗಿರುತ್ತದೆ. ಚೆನ್ನೈ ಆಟೋ ಸವಾರಿಗೆ ಕುಖ್ಯಾತಿ ಪಡೆದಿದೆ’’ ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ನಾಟೇಕರ್, “ಕಡಿಮೆ ಹೇಳುವುದು ಹಾಸ್ಯಾಸ್ಪದ, ಈ ಹೆದ್ದಾರಿ ದರೋಡೆ ಅಸಲಿ ಎಂದು ತೋರುತ್ತದೆ. ಆದರೆ, ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ’’ ಎಂದರು.

ಈ ಸುದ್ದಿ ಓದಿದ್ದೀರಾ? ಮೆಟ್ರೋದಲ್ಲಿ ಕುಸಿದು ಬಿದ್ದು ವೃದ್ಧ ಸಾವು; ಬಿಎಂಆರ್‌ಸಿಎಲ್‌ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲು

“ಭಾರತದ ಮುಂಬೈನಲ್ಲಿ ಮಾತ್ರ ಆಟೋ ರೀಕ್ಷಾಗಳು ಮೀಟರ್‌ ಲೆಕ್ಕದಲ್ಲಿ ಸಂಚರಿಸುವ ಏಕೈಕ ಸ್ಥಳ. ರಿಕ್ಷಾಗಳು ಮೀಟರ್‌ನಲ್ಲಿ ಸರಿಯಾಗಿ ಕಾರ್ಯನಿರ್ವಹಿಸುತ್ತವೆ. ಭಾರತದ ಉಳಿದ ಭಾಗಗಳು ಲೂಟಿ ಮಾಡುತ್ತವೆ” ಟ್ವಿಟರ್‌ ಬಳಕೆದಾರರೊಬ್ಬರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...