ಬೆಂಗಳೂರು | ಕಳೆದ ವರ್ಷಕ್ಕಿಂತ ನಾಯಿ ಕಡಿತಗಳ ಸಂಖ್ಯೆ ಹೆಚ್ಚಳ

Date:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ನಾಯಿ ಕಡಿತ ಪ್ರಕರಣಗಳ ಸಂಖ್ಯೆ 5,526 ಹೆಚ್ಚಾಗಿದೆ ಎಂದು ತಿಳಿದುಬಂದಿದೆ.

ಬಿಬಿಎಂಪಿ ಪ್ರಕಾರ, 2022-2023ರಲ್ಲಿ 23,236 ನಾಯಿ ಕಡಿತ ಪ್ರಕರಣಗಳು ವರದಿಯಾಗಿದ್ದು, 2021-2022ರಲ್ಲಿ 17,610 ನಾಯಿ ಕಡಿತ ಪ್ರಕರಣಗಳು ವರದಿಯಾಗಿದ್ದವು.

ಪ್ರಚೋದನೆ, ಆಕ್ರಮಣಶೀಲತೆ, ಪ್ರಾದೇಶಿಕ, ತಾಯಿ ನಾಯಿಯ ಆತಂಕ, ನಾಯಿಗಳ ಲೈಂಗಿಕತೆ ಹಾಗೂ ಆಹಾರ ಸಂಘರ್ಷ ನಾಯಿ ಕಡಿತ ಪ್ರಕರಣ ಸಂಖ್ಯೆ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಬಿಬಿಎಂಪಿಯ ಪಶುಪಾಲನಾ ವಿಭಾಗದ ಪಶು ವೈದ್ಯರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜನರಿಗೆ ಈ ಅಂಶಗಳ ಬಗ್ಗೆ ತಿಳಿದಿರುವುದಿಲ್ಲ ಇದರಿಂದ ನಾಯಿಯಿಂದ ಕಚ್ಚುವಿಕೆಗೆ ಒಳಗಾಗುತ್ತಾರೆ. ಉದಾಹರಣೆಗೆ, ಕೆಲವು ಬೀದಿ ನಾಯಿಗಳನ್ನು ಹೊಂದಿರುವ ಕಾಲೋನಿ ಅಥವಾ ವಸತಿ ಕ್ವಾಟರ್ಸ್‌ಗೆ ಪ್ರವೇಶಿಸುವ ಅಪರಿಚಿತರನ್ನು ಕಂಡಾಗ ನಾಯಿಗಳು ಬೊಗಳಲು ಪ್ರಾರಂಭಿಸುತ್ತವೆ. ಒಬ್ಬ ವ್ಯಕ್ತಿಯು ಓಡಿಸಲು ಪ್ರಯತ್ನಿಸಿದರೆ, ವ್ಯಕ್ತಿಯನ್ನು ನೋಡಿದಾಗ ನಾಯಿಗಳು ಕೆಲವೊಮ್ಮೆ ಕಚ್ಚಬಹುದು. ಅಂತೆಯೇ, ಹೆಣ್ಣು ಮಕ್ಕಳು ಕಸ ಹಾಕಲು ತೆರಳಿದಾಗ ಈ ವೇಳೆ ಆಕ್ರಮಣಕಾರಿಯಾಗಿ ದಾಳಿ ನಡೆಸುವ ಸಾಧ್ಯತೆ ಇರುತ್ತದೆ. ನಾಯಿಮರಿಗಳ ಬಳಿ ಹೋಗುವವರ ಮೇಲೆ ದಾಳಿ ಮಾಡಬಹುದು. ಈ ಎಲ್ಲ ಅಂಶಗಳ ಬಗ್ಗೆ ಬಿಬಿಎಂಪಿ ಮಕ್ಕಳು ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದೆ” ಎಂದು ಪಶುಸಂಗೋಪನಾ ವಿಭಾಗದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

“ಜುಲೈನಲ್ಲಿ ನಡೆಸಲಾದ ಬೀದಿನಾಯಿ ಗಣತಿಯಲ್ಲಿ ಅನೇಕ ಮಧ್ಯಸ್ಥಗಾರರು ಭಾಗಿಯಾಗಿದ್ದಾರೆ. ಸಾರ್ವಜನಿಕರಲ್ಲಿ ಜಾಗೃತಿ ಅಭಿಯಾನವನ್ನು ತೀವ್ರಗೊಳಿಸಲು ಪ್ರದೇಶವಾರು ಯೋಜನೆಯನ್ನು ಈಗ ಸಿದ್ಧಪಡಿಸಲಾಗುತ್ತಿದೆ. ನಾಯಿ ಕಚ್ಚಿದರೆ ಬೀದಿ ನಾಯಿಗಳನ್ನು ಸ್ಥಳಾಂತರಿಸುವಂತೆ ಅನೇಕ ನಿವಾಸಿಗಳು ಬಿಬಿಎಂಪಿ ಅಧಿಕಾರಿಗಳಿಗೆ ಕೇಳುತ್ತಾರೆ. ಆದರೆ, ಬೀದಿ ನಾಯಿಗಳನ್ನು ಸ್ಥಳಾಂತರಿಸಬಾರದು ಎಂಬ ಕಾನೂನಿನ ಬಗ್ಗೆ ತಿಳಿದಿಲ್ಲ. ನಾಯಿ ಕಡಿತದ ಹಿಂದಿನ ನಿಯಮಗಳು ಮತ್ತು ಕಾರಣಗಳ ಬಗ್ಗೆ ನಾಗರಿಕರಿಗೆ ಶಿಕ್ಷಣ ನೀಡಲಾಗುವುದು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಎಎಪಿಯಿಂದ ‘ಕಾವೇರಿ ನಮ್ಮದು’ ಧರಣಿ ಸತ್ಯಾಗ್ರಹ

“ತಮ್ಮ ಮಕ್ಕಳ ಮೇಲಿನ ಗಾಯದ ಗುರುತು ಮತ್ತು ಕಚ್ಚಿದ ಗುರುತುಗಳನ್ನು ಪರೀಕ್ಷಿಸುವ ಮಹತ್ವದ ಬಗ್ಗೆ ಪೋಷಕರಿಗೆ ತಿಳಿಸಲಾಗುತ್ತಿದೆ. ಅವುಗಳನ್ನು ನಿರ್ಲಕ್ಷಿಸದಂತೆ ಸಲಹೆ ನೀಡಲಾಗುತ್ತದೆ. ಅವರು ಅವುಗಳನ್ನು ಪರೀಕ್ಷಿಸಬೇಕು ಮತ್ತು ನಾಯಿ ಕಡಿತ ಎಂದು ದೃಢಪಟ್ಟರೆ, ರೇಬೀಸ್ ಸೋಂಕನ್ನು ತಡೆಗಟ್ಟಲು ಆಂಟಿ-ರೇಬಿಸ್ ಲಸಿಕೆಯನ್ನು ತಕ್ಷಣವೇ ಪಡೆಯಬೇಕು” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...