ಬೆಂಗಳೂರು | ಪ್ರೆಷರ್ ಕುಕ್ಕರ್‌ನಲ್ಲಿ ಡ್ರಗ್ಸ್‌ ತಯಾರು ಮಾಡುತ್ತಿದ್ದ ವಿದೇಶಿ ಪ್ರಜೆ ಬಂಧನ

Date:

ವಿದೇಶಿ ಪ್ರಜೆಯೊಬ್ಬ ಮನೆಯಲ್ಲಿ ಅಡುಗೆ ಮಾಡುವ ಪ್ರೆಷರ್ ಕುಕ್ಕರ್ ಮೂಲಕ ಸಿಂಥೆಟಿಕ್ ಡ್ರಗ್ಸ್‌ ತಯಾರಿಸಿ ಮಾರಾಟ ಮಾಡುತ್ತಿದ್ದವನನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ಬಂಧಿಸಿದ್ದಾರೆ.

ಬೆಂಜಮಿನ್ ಬಂಧಿತ ಆರೋಪಿ. ಈತ ಮೂಲತಃ ನೈಜೀರಿಯಾದವನು. ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ಈತನಿಂದ ಸದ್ಯ ₹10 ಕೋಟಿ ಮೌಲ್ಯದ 5 ಕೆಜಿ ಎಂಡಿಎಂಎ, ಡ್ರಗ್ಸ್​ ತಯಾರಿಸಲು ಬೇಕಾದ ಕಚ್ಚಾ ಪದಾರ್ಥಗಳು, 5 ಲೀಟರ್ ಪ್ರೆಷರ್ ಕುಕ್ಕರ್, ಸ್ಟೌವ್, ಗ್ಯಾಸ್ ಸಿಲಿಂಡರ್,‌ 1 ಮೊಬೈಲ್ ಫೋನ್, ದ್ವಿಚಕ್ರ ವಾಹನ ಎಂಡಿಎಂಎ ಮತ್ತು ಅದರ ತಯಾರಿಕೆಗೆ ಬಳಸುತ್ತಿದ್ದ ರಾಸಾಯನಿಕ ವಸ್ತುಗಳು ಹಾಗೂ ರಾಸಾನಿಕ ಆಮ್ಲ ಸೇರಿದಂತೆ ಇನ್ನಿತರ ಉಪಕರಣಗಳನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತ ವಿದೇಶಿ ವ್ಯಕ್ತಿ ನಗರದ ಅವಲಹಳ್ಳಿಯಲ್ಲಿ ಬಟ್ಟೆ ವ್ಯಾಪಾರ ಮಾಡುವುದಾಗಿ 2021ರಲ್ಲಿ ಬಾಡಿಗೆ ಮನೆ ಪಡೆದಿದ್ದನು. ಆದರೆ, ಆತನ ಮನೆಯಲ್ಲಿ ಕಚ್ಚಾ ಪದಾರ್ಥಗಳನ್ನು ಬಳಕೆ ಮಾಡಿ ಪ್ರೆಷರ್ ಕುಕ್ಕರ್‌ನಲ್ಲಿ ಸಿಂಥೆಟಿಕ್ ಡ್ರಗ್‌ ತಯಾರು ಮಾಡುತ್ತಿದ್ದನು. ಹೀಗೇ ಮನೆಯಲ್ಲಿ ತಯಾರು ಮಾಡಿದ ಮಾದಕ ವಸ್ತುಗಳನ್ನು ರಾಜ್ಯ, ಅಂತಾರಾಜ್ಯ ಸೇರಿದಂತೆ ವಿದೇಶಗಳಿಗೆ ಮಾರಾಟ ಮಾಡುತ್ತಿದ್ದನು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರಿನ ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳನ್ನು ಸರಬರಾಜು ಮಾಡುತ್ತಿದ್ದ ಈತನನ್ನು ಪೊಲೀಸರು ಬಂಧಿಸಿ 100 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದರು. ಈತನನ್ನು ಬಂಧಿಸಿದ ಬಳಿಕ ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಈತ ತಾನು ಮನೆಯಲ್ಲಿಯೇ ಡ್ರಗ್ ತಯಾರು ಮಾಡುತ್ತಿದ್ದ ಬಗ್ಗೆ ಬಾಯಿ ಬಿಟ್ಟಿದ್ದಾನೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ, “ಆರೋಪಿ ವ್ಯಾಪಾರಿ ವೀಸಾ ಮೂಲಕ ಭಾರತಕ್ಕೆ ಬಂದಿದ್ದಾನೆ. ವೀಸಾ ಅವಧಿಯೂ 2022ರಲ್ಲಿ ಅಂತ್ಯವಾಗಿದೆ. ಆರೋಪಿಯನ್ನು ನವೆಂಬರ್ 20ರವರೆಗೂ ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿ ಈ ಹಿಂದೆ ಹೈದರಾಬಾದ್​ನಲ್ಲಿ ಬಂಧನವಾಗಿದ್ದ ಎಂಬ ವಿಚಾರ ತನಿಖೆಯಿಂದ ಗೊತ್ತಾಗಿದೆ” ಎಂದು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಜಿಮ್‌ ಸೆಂಟರ್‌ನಲ್ಲಿ ಯುವತಿಯ ಖಾಸಗಿ ವಿಡಿಯೋ ಚಿತ್ರೀಕರಣ; ಟ್ರೇನರ್ ಬಂಧನ

ಬಂಧಿತನ ವಿರುದ್ಧ ರಾಮಮೂರ್ತಿ ನಗರ ಠಾಣೆಯಲ್ಲಿ ಎನ್​ಡಿಪಿಎಸ್ ಕಾಯ್ದೆ ಮತ್ತು ವಿದೇಶಿಗರ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...