ಬೆಂಗಳೂರು | 2 ಟನ್‌ ಟೊಮ್ಯಾಟೊ ಸಮೇತ ಬೊಲೆರೋ ವಾಹನ ಕದ್ದಿದ್ದ ಆರೋಪಿಗಳ ಬಂಧನ

Date:

  • ಆರ್​​ಎಮ್​​ಸಿ ಯಾರ್ಡ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು
  • ಮೂವರು ಆರೋಪಿಗಳ ಬಂಧನಕ್ಕಾಗಿ ಪೊಲೀಸರ ಹುಡುಕಾಟ

ರಾಜ್ಯದಲ್ಲಿ ಮಳೆಯ ಕೊರತೆ ಹಾಗೂ ಇಳುವರಿ ಕಡಿಮೆಯಿಂದ ಟೊಮ್ಯಾಟೊ ದರ ಗಗನಕ್ಕೇರಿದ್ದು, ಕೊಳ್ಳುವವರ ಕೈ ಸುಡುವಂತಾಗಿದೆ. ಈ ಬೆನ್ನಲ್ಲೆ, ಎಲ್ಲೆಡೆ ಟೊಮ್ಯಾಟೊ ಕಳ್ಳತನ ಮಾಡುವವರ ಸಂಖ್ಯೆ ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳ ಹಿಂದೆ 2 ಟನ್‌ಗೂ ಅಧಿಕ ಟೊಮ್ಯಾಟೊ ಇದ್ದ ಬೊಲೆರೋ ವಾಹನವನ್ನು ಕಳ್ಳತನ ಮಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡು ಮೂಲದ ಭಾಸ್ಕರ್, ಸಿಂಧೂಜಾ ಬಂಧಿತರು. ಇನ್ನೂ ಮೂವರು ಆರೋಪಿಗಳ ಬಂಧನಕ್ಕಾಗಿ ಆರ್​ಎಂಸಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

2 ಸಾವಿರ ಕೆಜಿಗೂ ಅಧಿಕ ಟೊಮ್ಯಾಟೊ ಇದ್ದ ಬೊಲೆರೋ ವಾಹನವನ್ನು ಕಳ್ಳತನ ಮಾಡಿದ್ದ ಆರೋಪಿಗಳು, ಯೋಜನೆ ರೂಪಿಸಿ ಟೊಮ್ಯಾಟೊವನ್ನು ಚೆನ್ನೈ ಮಾರುಕಟ್ಟೆಗೆ ಹೋಗಿ ಮಾರಾಟ ಮಾಡಿದ್ದಾರೆ. ಬಳಿಕ ಖಾಲಿ ಬೊಲೆರೋ ವಾಹನವನ್ನು ತಂದು ನಿಲ್ಲಿಸಿ ಪರಾರಿಯಾಗಿದ್ದರು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏನಿದು ಘಟನೆ?

ರಾಜ್ಯದಲ್ಲಿ ಟೊಮ್ಯಾಟೊ ಬೆಲೆ ಏರಿಕೆಯಾದ ಬೆನ್ನಲ್ಲೆ ಕಳವು ಪ್ರಕರಣಗಳು ವರದಿಯಾಗುತ್ತಿವೆ. ಸುಮಾರು 2 ಟನ್‌ಗೂ ಹೆಚ್ಚು ಟೊಮ್ಯಾಟೊ ಇದ್ದ ಬೊಲೆರೋ ವಾಹನವನ್ನು ಕಳ್ಳರು ಜು.8ರಂದು ಕಳವು ಮಾಡಿ ಪರಾರಿಯಾಗಿದ್ದರು.

ಜು. 8ರಂದು ನಗರದ ಯಲಹಂಕ ಬಳಿಯ ಚಿಕ್ಕಜಾಲ ಗ್ರಾಮದ ಬಳಿ ಈ ಘಟನೆ ನಡೆದಿತ್ತು. ಟೊಮ್ಯಾಟೊ ಬೆಳೆದ ರೈತ ಹಿರಿಯೂರಿನಿಂದ ಕೋಲಾರದ ಕಡೆಗೆ ಸಾಗಿಸುತ್ತಿದ್ದರು. ಈ ವೇಳೆ, ಕಾರಿನಲ್ಲಿ ಬಂದ ಮೂವರು ಬೊಲೆರೋ ವಾಹನವನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬೊಲೆರೋ ವಾಹನದ ಸಮೇತ 2 ಟನ್ ಟೊಮ್ಯಾಟೊ ಕದ್ದ ಕಳ್ಳರು : ರೈತ ಕಂಗಾಲು

ನಂತರ ಆರ್​​ಎಮ್​​ಸಿ ಯಾರ್ಡ್ ಠಾಣಾ ವ್ಯಾಪ್ತಿಯಲ್ಲಿ ವಾಹನವನ್ನು ಅಡ್ಡಗಟ್ಟಿ, ಪೀಣ್ಯ ಬಳಿ ನಿಮ್ಮ ಬೊಲೆರೋ ವಾಹನದಿಂದ ನಮ್ಮ ಗಾಡಿಗೆ ಟಚ್‌ ಮಾಡಿದ್ದೀರಿ ಎಂದು ಜಗಳ ಆರಂಭಿಸಿ, ಬೊಲೆರೋ ಚಾಲಕ ಮತ್ತು ರೈತನ ಮೇಲೆ ಹಲ್ಲೆ ಮಾಡಿದ್ದಾರೆ. ಅವರ ಮೊಬೈಲ್ ಕಿತ್ತುಕೊಂಡು ಹಣ ವರ್ಗಾವಣೆ ಮಾಡಿಕೊಂಡಿದ್ದಾರೆ. ನಂತರ ಟೊಮ್ಯಾಟೊ ಕಂಡ ಅವರು ಬೊಲೆರೋ ಸಮೇತ ಕದ್ದು, ಪರಾರಿಯಾಗಿದ್ದಾರೆ.

ಘಟನೆ ಸಂಬಂಧ ಆರ್​​ಎಮ್​​ಸಿ ಯಾರ್ಡ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...