ಬೆಂಗಳೂರು | ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆಯಲು ಸಹಕರಿಸಿದ ನಾಲ್ವರು ಬ್ಯಾಂಕ್‌ ಅಧಿಕಾರಿಗಳ ಬಂಧನ

Date:

ಮನೆ ಮಾಲೀಕರ ಮನವೊಲಿಸಿ ಅವರಿಂದ ಆಸ್ತಿ ದಾಖಲೆಗಳನ್ನು ಪಡೆದು ನಕಲಿ ದಾಖಲೆಗಳನ್ನು ಸೃಷ್ಠಿಸಿ ವಂಚನೆ ಮಾಡುತ್ತಿದ್ದ ಮಧ್ಯವರ್ತಿಗಳಿಗೆ ಸಹಕಾರ ಹಾಗೂ ಸರಿಯಾಗಿ ದಾಖಲೆಗಳನ್ನು ಪರಿಶೀಲಿಸದೆ, ನಕಲಿ ಭೂ ದಾಖಲೆಗಳನ್ನು ಹೊಂದಿದ್ದವರಿಗೆ ಸಾಲ ನೀಡಿದ್ದ ನಾಲ್ವರು ಬ್ಯಾಂಕ್ ಅಧಿಕಾರಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸೇಂಟ್‌ ಮಾರ್ಕ್ಸ್‌ ರಸ್ತೆಯ ಬ್ಯಾಂಕ್‌ವೊಂದರ ಎಜಿಎಂ ಮುರಳೀ ಧರ್‌, ಮಹಾಲಕ್ಷ್ಮಿ ಲೇಔಟ್‌ನ ಬ್ಯಾಂಕ್‌ವೊಂದರ ವ್ಯವಸ್ಥಾಪಕ ರಾಕೇಶ್‌, ಹೊಸಕೋಟೆಯಲ್ಲಿರುವ ಬ್ಯಾಂಕ್‌ನ ಮಲ್ಲಿಕಾರ್ಜುನ್‌, ಜಯನಗರ ಬ್ಯಾಂಕ್‌ವೊಂದರ ಶಶಿಕಾಂತ್‌ ಬಂಧಿತರು.

ಇದೀಗ, ಮನೆ ಮಾರಾಟ ಮಾಡಲು ಮನೆಯ ಮಾಲೀಕರು ಬ್ರೋಕರ್‌ಗಳಿಗೆ ಜಮೀನಿನ ದಾಖಲೆಗಳನ್ನು ನೀಡುತ್ತಾರೆ. ಆ ದಾಖಲೆಗಳನ್ನು ಪಡೆದ ಮಧ್ಯವರ್ತಿಗಳು ನಕಲಿ ದಾಖಲೆಗಳನ್ನು ಸೃಷ್ಟಿಸಿ ಸಾಲ ಪಡೆದುಕೊಳ್ಳುತ್ತಾರೆ. ಸಾಲ ನೀಡಬೇಕಾದಾಗ ಸಾಲ ಪಡೆದುಕೊಳ್ಳಲು ನೀಡಿರುವ ದಾಖಲೆಗಳನ್ನು ಸರಿಯಾಗಿ ಪರಿಶೀಲನೆ ಮಾಡಬೇಕು. ಆದರೆ, ಇಲ್ಲಿ ದಾಖಲೆಗಳ ಪರಿಶೀಲನೆ ಮಾಡಿಲ್ಲ. ಜತೆಗೆ, ಲೋನ್ ಅಪ್ರೋವ್ ಆಗಿರುವ ಸ್ವತ್ತಿನಲ್ಲಿ ಇಸಿ ಪಡೆದುಕೊಂಡಿಲ್ಲ. ಹೀಗೆ, ನಕಲಿ ದಾಖಲೆ ಸೃಷ್ಟಿ ಮಾಡಿದವರಿಗೆ ಸುಮಾರು ನಾಲ್ಕೂವರೆ ಕೋಟಿ‌ ಸಾಲ ಇದೇ ರೀತಿಯಾಗಿ ಅಪ್ರೂವ್ ಮಾಡಿದ್ದರು ಎಂಬ ಆರೋಪದ ಮೇಲೆ ಬ್ಯಾಂಕ್ ಅಧಿಕಾರಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಂಧಿತರ ಪೈಕಿ ಮರುಳೀಧರ್‌, ರಾಕೇಶ್‌ ದಾಖಲೆ ಪರಿಶೀಲನೆ ನಡೆಸದೇ ಸಾಲ ಮಂಜೂರು ಮಾಡುತ್ತಿದ್ದರು. ಮಲ್ಲಿಕಾರ್ಜುನ್‌, ಶಶಿಕಾಂತ್‌ ಅವರು ಮಧ್ಯವರ್ತಿಗಳಿಗೆ ನಕಲಿ ಖಾತೆಗಳನ್ನು ಮಾಡಿಕೊಡುತ್ತಿದ್ದರು. ಇವರು ನಾನಾ ಬ್ಯಾಂಕ್‌ಗಳಲ್ಲಿ ವ್ಯವಸ್ಥಾಪಕರಾಗಿ, ಸಹಾಯಕ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ದೆಹಲಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ₹26 ಕೋಟಿ ಮೌಲ್ಯದ ಕೊಕೇನ್ ವಶ

ಈ ಹಿಂದೆ ಪುಟ್ಟೇನಹಳ್ಳಿ ಮತ್ತು ಹುಳಿಮಾವು ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿತ್ತು. ಈ ಪ್ರಕರಣದ ತನಿಖೆ ಆರಂಭಿಸಿದ ಸಿಸಿಬಿ ಪೊಲೀಸರು ಐದು ಏಜೆಂಟ್‌ಗಳನ್ನು ಬಂಧಿಸಿದ್ದರು. ಅವರ ವಿಚಾರಣೆ ವೇಳೆ ನೀಡಿದ ಮಾಹಿತಿ ಆಧರಿಸಿ ತನಿಖೆ ಮುಂದುವರೆಸಿದ ಪೊಲೀಸರು ಈ ಪ್ರಕರಣದಲ್ಲಿ ಮತ್ತೆ ನಾಲ್ಕು ಬ್ಯಾಂಕ್ ಅಧಿಕಾರಗಳನ್ನು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...