ಬೆಂಗಳೂರು | ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಬಾಲಕರ ಬಂಧನ

Date:

  • ಬೈಕ್‌ನ ಹ್ಯಾಂಡಲ್ ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದ ಬಾಲಕರು
  • ಬೈಕ್‌ನ ಬಿಡಿಭಾಗಗಳ ಮಾರಾಟ ಮಾಡಿದ ಆರೋಪಿಗಳು

ಬೈಕ್‌ನ ಹ್ಯಾಂಡಲ್ ಲಾಕ್‌ ಮುರಿದು ಕಳ್ಳತನ ಮಾಡುತ್ತಿದ್ದ 16 ವರ್ಷದ ಇಬ್ಬರು ಬಾಲಕರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು, ಆಂಧ್ರಪ್ರದೇಶ ಸೇರಿದಂತೆ ನಾನಾ ನಗರಗಳಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಬಾಲಕರು ಬರೋಬ್ಬರಿ 44 ಬೈಕ್‌ಗಳನ್ನು ಕಳ್ಳತನ ಮಾಡಿದ್ದಾರೆ. ಪೊಲೀಸರು ಬಾಲಕರನ್ನು ಬಾಲಾಪರಾಧಿಗೃಹಕ್ಕೆ ಕಳುಹಿಸಿದ್ದಾರೆ. ಇವರು ಬಹುತೇಕ ಗೇರ್‌ಲೆಸ್ ಸ್ಕೂಟರ್‌ಗಳನ್ನು ಕಳ್ಳತನ ಮಾಡಿದ್ದಾರೆ.

ಪೊಲೀಸರು, ಅಪ್ರಾಪ್ತ ವಯಸ್ಕರನ್ನು ತಮ್ಮ ವಶದಲ್ಲಿ ಇಟ್ಟುಕೊಳ್ಳುವುದನ್ನು ನಿಷೇಧಿಸಿರುವುದರಿಂದ ಬಾಲಕರನ್ನು ಬಾಲಾಪರಾಧಿಗೃಹಕ್ಕೆ ಕಳುಹಿಸುವ ಮೊದಲು ಅವರ ಪೋಷಕರು ಮತ್ತು ಮಕ್ಕಳ ಕಲ್ಯಾಣ ಸಮಿತಿಯ ಅಧಿಕಾರಿಗಳ ಸಮ್ಮುಖದಲ್ಲಿ ಅವರನ್ನು ವಿಚಾರಣೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಚಾರಣೆ ವೇಳೆ ಬಾಲಕರು ಬೈಕ್‌ನ ಹ್ಯಾಂಡಲ್ ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಇಬ್ಬರು ಬಾಲಕರ ಪೈಕಿ ಓರ್ವ ಬಾಲಕ ಬೆಂಗಳೂರಿನಲ್ಲಿ ತಾಯಿ ಮತ್ತು ಸಹೋದರಿಯೊಂದಿಗೆ ವಾಸವಾಗಿದ್ದನು. ಇವರಿಗೆ ಬಾಲಕ ಪ್ರತಿನಿತ್ಯ ಕಾಟ ಕೊಡುತ್ತಿದ್ದನು ಮತ್ತು ಜಗಳವಾಡುತ್ತಿದ್ದನು. ಬಾಲಕನಿಗೆ ತಂಬಾಕು ಸೇವನೆಯ ಚಟವಿತ್ತು. ಹೀಗಾಗಿ, ಇತನನ್ನು ಸರಿದಾರಿಗೆ ತರಲು ಇತನ ತಾಯಿ ಒಂದೆರಡು ವರ್ಷಗಳ ಹಿಂದೆ ಮಗನನ್ನು ರಿಮ್ಯಾಂಡ್‌ ಹೋಮ್‌ಗೆ ಸೇರಿಸಿದ್ದಳು.

“ರಿಮ್ಯಾಂಡ್ ಹೋಮ್‌ನಲ್ಲಿರುವ ಇನ್ನೊಬ್ಬ ಹುಡುಗನೊಂದಿಗೆ ಸ್ನೇಹ ಬೆಳೆಸಿದ ಇತ ದ್ವಿಚಕ್ರ ವಾಹನಗಳ ಹ್ಯಾಂಡಲ್ ಮುರಿದು ಬೈಕ್ ಹೇಗೆ ಖದೀಯಬೇಕು ಹಾಗೂ ಎಲೆಕ್ಟ್ರಿಕಲ್ ಸರ್ಕ್ಯೂಟ್ ಅನ್ನು ಟ್ಯಾಂಪರಿಂಗ್ ಮಾಡಿ ಕಳ್ಳತನ ಮಾಡಿ ಒಡಿಸುವದನ್ನು ಕಲಿತನು” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

“ಇನ್ನೊಬ್ಬ ಹುಡುಗನ ತಂದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯಲ್ಲಿ ಗುತ್ತಿಗೆ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದರೆ, ತಾಯಿ ಗೃಹಿಣಿ. ಇಬ್ಬರೂ ಹುಡುಗರು ಹೈಸ್ಕೂಲ್ ಡ್ರಾಪ್ ಔಟ್ ಆಗಿದ್ದಾರೆ. ಒಬ್ಬನು 7 ನೇ ತರಗತಿ ಮತ್ತೋಬ್ಬ 8 ನೇ ತರಗತಿಯವರೆಗೆ ಮಾತ್ರ ಶಿಕ್ಷಣ ಕಲಿತಿದ್ದಾರೆ. ಇವರು ಅದೇ ಪ್ರದೇಶದಲ್ಲಿ ವಾಸಿಸುತ್ತಿದ್ದರಿಂದ ನಿಕಟ ಸ್ನೇಹಿತರಾದರು” ಎಂದರು.

“ಹಗಲು ರಾತ್ರಿ ಗೊತ್ತುಗುರಿಯಿಲ್ಲದೆ ತಿರುಗಾಡುತ್ತಾ, ಅವರು ಪ್ರತ್ಯೇಕ ಸ್ಥಳಗಳಲ್ಲಿ ಅಥವಾ ಮಂದ ಬೆಳಕಿನಲ್ಲಿರುವ ವಸತಿ ಪ್ರದೇಶಗಳಲ್ಲಿ ನಿಲ್ಲಿಸಿದ ಬೈಕ್‌ಗಳನ್ನು ಕದಿಯುತ್ತಿದ್ದರು. ತಾವು ಬ್ಯಾಂಕ್‌ಗಳಿಗೆ ರಿಕವರಿ ಏಜೆಂಟ್‌ಗಳಾಗಿ ಕೆಲಸ ಮಾಡುತ್ತಿದ್ದು, ಸಾಲವನ್ನು ಪಾವತಿಸದ ಕಾರಣ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿಕೊಂಡು ಸುಮಾರು 18 ಬೈಕ್‌ಗಳನ್ನು ತಲಾ ₹5,000 ಗಾರ್ಮೆಂಟ್ಸ್, ಸೆಕ್ಯುರಿಟಿ ಏಜೆನ್ಸಿಗಳು ಅಥವಾ ಕಾರ್ಮಿಕರಾಗಿ ಕೆಲಸ ಮಾಡುವ ಪುರುಷರಿಗೆ ಮಾರಾಟ ಮಾಡಿದ್ದಾರೆ. ಮಾರಾಟವಾಗದ ವಾಹನಗಳನ್ನು ಬಿಟ್ಟುಬಿಡುವ ಮೊದಲು ಜಾಲಿ ರೈಡ್‌ ಮತ್ತು ವೀಲಿಂಗ್ ಮಾಡುತ್ತಿದ್ದರು. ಕೆಲವೊಮ್ಮೆ, ಬೈಕ್‌ನ ಟೈರ್‌ ಸೇರಿದಂತೆ ಬಿಡಿಭಾಗಗಳನ್ನು ಮಾರಾಟ ಮಾಡಿದ್ದಾರೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬಕ್ರೀದ್ ಹಬ್ಬ | ಈದ್ಗಾ ಮೈದಾನದಲ್ಲಿ ಭರ್ಜರಿ ವ್ಯಾಪಾರ

ಪೊಲೀಸರ ಪ್ರಕಾರ, ಅಪ್ರಾಪ್ತರಿಬ್ಬರೂ ಯಾವುದೇ ಅಪರಾಧದ ಹಿನ್ನೆಲೆ ಹೊಂದಿಲ್ಲ. ಅವರ ಕೆಲವು ಹಿರಿಯ ಸ್ನೇಹಿತರು ದರೋಡೆ ಮತ್ತು ವಾಹನ ಕಳ್ಳತನದ ಆರೋಪದ ಮೇಲೆ ಬಂಧಿತರಾಗಿದ್ದಾರೆ. ಬೆಂಗಳೂರಿನಲ್ಲಿ ಜೆಪಿ ನಗರ, ಬನಶಂಕರಿ, ಜಯನಗರ, ತಿಲಕನಗರ, ಮೈಕೋ ಲೇಔಟ್, ಎಚ್‌ಎಎಲ್, ಕೆಆರ್ ಪುರಂ, ಬೆಳ್ಳಂದೂರು, ಎಚ್‌ಎಸ್‌ಆರ್ ಲೇಔಟ್ ಮತ್ತು ಕಾಡುಗೋಡಿಯಲ್ಲಿ ಇವರಿಬ್ಬರು ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...