ಬೆಂಗಳೂರು | ವಿದ್ಯುತ್ ಬಿಲ್ ಜಾಸ್ತಿ ಬಂತೆಂದು ಮೀಟರ್ ರೀಡರ್ ಮೇಲೆ ಹಲ್ಲೆ; ದೂರು ದಾಖಲು

Date:

  • ಗೋವಿಂದಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ
  • ವಿದ್ಯುತ್ ಮೀಟರ್ ರೀಡ್ ಮಾಡಿ ಬಿಲ್ ನೀಡುವಾಗ ನಡೆದ ಘಟನೆ

ಕಳೆದ ಬಾರಿಗಿಂತ ಈ ತಿಂಗಳು ವಿದ್ಯುತ್ ದರ ಹೆಚ್ಚಳ ಬಂದ ಹಿನ್ನೆಲೆ, ಬೆಂಗಳೂರು ವಿದ್ಯುತ್ ಸರಬರಾಜು ನಿಗಮ (ಬೆಸ್ಕಾಂ)ದ ಮೀಟರ್ ರೀಡರ್ ಸಿಬ್ಬಂದಿಯೊಬ್ಬರನ್ನು ಥಳಿಸಿರುವ ಘಟನೆ ಬೆಂಗಳೂರಿನ ಗೋವಿಂದಪುರದಲ್ಲಿ ನಡೆದಿದೆ.

ಬೆಸ್ಕಾಂ ಸಿಬ್ಬಂದಿ ನಾಗರಾಜ್ ನಾಯಕ್ ಎಂಬವರ ಮೇಲೆ ಶಂಶಾದ್ ಖಾನ್‌ ಎಂಬಾತ ಹಲ್ಲೆ ಮಾಡಿದ್ದಾರೆ. ಎಂದಿನಂತೆ ನಾಗರಾಜ್ ಅವರು ಮೀಟರ್ ರೀಡಿಂಗ್ ಮಾಡಿ ವಿದ್ಯುತ್ ಬಿಲ್ ನೀಡುವ ಕೆಲಸದಲ್ಲಿ ತೊಡಗಿದ್ದರು. ಆ.4 ರಂದು ಬೆಳಿಗ್ಗೆ 11:30ರ ಸುಮಾರಿಗೆ ಬೆಂಗಳೂರಿನ ಗೋವಿಂದಪುರದ 16ನೇ ಕ್ರಾಸ್‌ನಲ್ಲಿರುವ ಶಂಶಾದ್‌ ಖಾನ್ ಎಂಬುವವರ ಮನೆಯ ವಿದ್ಯುತ್ ಮೀಟರ್ ರೀಡಿಂಗ್ ಮಾಡಿ ₹458 ಬಾಕಿ ಬಿಲ್​ ಸೇರಿದಂತೆ ಒಟ್ಟು ₹4,026 ಬಿಲ್​ ನೀಡಿದ್ದಾರೆ.

ಇದಕ್ಕೆ ಕೋಪಗೊಂಡ ಶಂಶಾದ್ ಖಾನ್ ಕಳೆದ ಬಾರಿಗಿಂತ ಈ ಬಾರಿ ಮೂರರಿಂದ ನಾಲ್ಕು ಪಟ್ಟು ಹೆಚ್ಚು ಮೊತ್ತದ ಬಿಲ್ ಬಂದಿದೆ ಎಂದು ಸಿಬ್ಬಂದಿ ಜತೆಗೆ ವಾಗ್ವಾದಕ್ಕೆ ಇಳಿದಿದ್ದಾರೆ. ಅವರ ಜತೆಗೆ ನಾಗರಾಜ್ ಜಗಳ ಮುಂದುವರೆಸದೆ ಮುಂದಿನ ಮನೆಗಳಿಗೆ ಬಿಲ್ ನೀಡಲು ತೆರಳಿದ್ದಾರೆ. ಅವರನ್ನೇ ಹಿಂಬಾಲಿಸಿಕೊಂಡ ಬಂದ ಶಂಶಾದ್ ಖಾನ್ ಪದೇಪದೆ ಜಗಳಕ್ಕೆ ಇಳಿದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೀಟರ್​ ರೀಡಿಂಗ್​ ಆಧರಿಸಿಯೇ ಬಿಲ್​ ನೀಡಿದ್ದೇನೆ. ಬೆಸ್ಕಾಂ ಕಚೇರಿಗೆ ಭೇಟಿ ನೀಡುವಂತೆ ಶಂಶಾದ್ ಕಾನ್ ಅವರಿಗೆ ಸಲಹೆ ನೀಡಿದ್ದಾರೆ. ಆದರೂ ಕೇಳದ ಶಂಶಾದ್ ಖಾನ್ ನಾಗರಾಜ್ ಅವರ ಮುಖಕ್ಕೆ ನಾಲ್ಕೈದು ಬಾರಿ ಗುದ್ದಿದ್ದಾರೆ. ಇದರಿಂದ ನಾಗರಾಜ್ ಅವರ ಒಂದು ಹಲ್ಲು ಮುರಿದಿದೆ.

ನಾಗರಾಜ್​ ನಾಯಕ್  ಹಿರಿಯ ಅಧಿಕಾರಿಗಳಿಗೆ ಕರೆ ಮಾಡಿ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಅಧಿಕಾರಿಗಳು ನಾಗರಾಜ್​ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಡ್ಯೂಟಿ ನೀಡದ್ದಕ್ಕೆ ಬಿಎಂಟಿಸಿ ಬಸ್ ಡಿಪೋ‌ ಮುಂದೆಯೇ ಚಾಲಕ ಆತ್ಮಹತ್ಯೆ

ಗೋವಿಂದಪುರ ಪೊಲೀಸ್​ ಠಾಣೆಗೆ ನಾಗರಾಜ್​ ನಾಯಕ್ ಅವರು ದೂರು ನೀಡಿದ್ದು, ಪೊಲೀಸರು ಶಂಶಾದ್​ ಖಾನ್​ಅವರನ್ನು ಬಂಧಿಸಿ ಠಾಣಾ ಜಾಮೀನು ನೀಡಿ ಬಿಡುಗಡೆ ಮಾಡಿದ್ದಾರೆ.

“300ಕ್ಕೂ ಹೆಚ್ಚು ಯೂನಿಟ್‌ ವಿದ್ಯುತ್​ ಅನ್ನು ಶಂಶಾದ್​ ಖಾನ್ ಅವರು ಬಳಸಿದ್ದರಿಂದ ಗೃಹ ಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್‌ಗೆ ಅರ್ಹರಲ್ಲ” ಎಂದು ನಾಗರಾಜ್​ ನಾಯಕ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...