ಬೆಂಗಳೂರು | ರ‍್ಯಾಪಿಡೋ ಆಟೋಗಳ ಮೇಲೆ ಸಾರಥಿ ಆಟೋ ಚಾಲಕರ ದಾಳಿ: ದೂರು ದಾಖಲು

Date:

  • 10-15 ಜನರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು
  • ₹1.40 ಲಕ್ಷ ಮೌಲ್ಯದ ಸೈಡ್‌ ಕರ್ಟನ್‌ ಮತ್ತು ಸೀಟ್ ಬೆಲ್ಟ್‌ ಹಾನಿ

ಬೆಂಗಳೂರಿನ ಎಚ್‌ಎಸ್‌ಆರ್‌ ಲೇಔಟ್‌ನ 5ನೇ ಮುಖ್ಯರಸ್ತೆಯಲ್ಲಿರುವ ರ‍್ಯಾಪಿಡೋ ಕಚೇರಿ ಎದುರು ನಿಲ್ಲಿಸಿದ್ದ 50 ರ‍್ಯಾಪಿಡೋ ಆಟೋಗಳ ಮೇಲೆ ಸಾರಥಿ ಆಟೋ ಚಾಲಕರು ದಾಳಿ ನಡೆಸಿದ್ದು, ಈ ಸಂಬಂಧ 10-15 ಜನರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾರಥಿ ಆಟೋ ಚಾಲಕರು ಏಕಾಏಕಿ ದಾಳಿ ನಡೆಸಿ 50 ರ‍್ಯಾಪಿಡೋ ಆಟೋಗಳನ್ನು ಹಾನಿಗೊಳಿಸಿ, ಚಾಲಕರಿಗೆ ವಿತರಣೆ ಮಾಡಲು ತಂದಿದ್ದ ಸೀಟ್‌ ಬೆಲ್ಟ್‌ ಹಾಗೂ ಸೈಡ್‌ ಕರ್ಟನ್‌ ಸೇರಿದಂತೆ ಇನ್ನಿತರ ವಸ್ತುಗಳನ್ನು ಕದ್ದಿದ್ದಾರೆ ಎಂದು ರ‍್ಯಾಪಿಡೋ ಸಂಸ್ಥೆಯವರು ದೂರು ನೀಡಿದ್ದಾರೆ.  

“ಜುಲೈ 18 ರಂದು ಮಧ್ಯಾಹ್ನ 12.30 ರ ಸುಮಾರಿಗೆ ಎಚ್‌ಎಸ್‌ಆರ್ ಲೇಔಟ್‌ನ ರ‍್ಯಾಪಿಡೋ ಕಚೇರಿ ಎದುರು ರ‍್ಯಾಪಿಡೋ ಆಟೋ ಚಾಲಕರಿಗೆ ಸೀಟ್‌ಬೆಲ್ಟ್‌ ಹಾಗೂ ಸೈಡ್‌ ಕರ್ಟನ್‌ಗಳನ್ನು ಸಂಸ್ಥೆ ನೀಡುತ್ತಿತ್ತು. ಈ ವೇಳೆ, ಏಕಾಏಕಿ ಬಂದ ಗುಂಪೊಂದು ಕಚೇರಿ ಎದುರು ನಿಂತು ಸಿಬ್ಬಂದಿಯೊಡನೆ ವಾಗ್ವಾದ ನಡೆಸಿತು. ಕಂಪನಿಯ ಪರವಾನಗಿ ಮಂಜೂರಾತಿಗಳನ್ನು ತೋರಿಸುವಂತೆ ಒತ್ತಾಯಿಸಿದೆ. ರ‍್ಯಾಪಿಡೋ ಆಟೋ ಚಾಲಕರಿಗೆ ನೀಡುತ್ತಿದ್ದ ₹1.40 ಲಕ್ಷ ಮೌಲ್ಯದ ಸೈಡ್‌ ಕರ್ಟನ್‌ ಮತ್ತು ಸೀಟ್ ಬೆಲ್ಟ್‌ಗಳನ್ನು ತೆಗೆದು ಹಾಕಿ, ಹಾನಿ ಮಾಡಿದ್ದಾರೆ. ಕೆಲವು ವಸ್ತುಗಳನ್ನು ಕಳುವು ಮಾಡಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರ‍್ಯಾಪಿಡೋ ಸಿಬ್ಬಂದಿ ಎಂ ರೆಡ್ಡಿ ಪ್ರಸಾದ್ ನೀಡಿದ ದೂರಿನ ಆಧಾರದ ಮೇಲೆ, ಎಚ್‌ಎಸ್‌ಆರ್ ಲೇಔಟ್ ಪೊಲೀಸರು ಕಳ್ಳತನ, ಕಿಡಿಗೇಡಿತನ, ಶಾಂತಿ ಭಂಗ, ಕ್ರಿಮಿನಲ್ ಬೆದರಿಕೆ ಹಾಗೂ ಉದ್ದೇಶಪೂರ್ವಕ ಅವಮಾನಕ್ಕೆ ಸಂಬಂಧಿಸಿದ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು| ಲೋಕಾಯುಕ್ತ ತನಿಖೆಯಿಂದ ಯಲಹಂಕ ಸರ್ಕಾರಿ ಆಸ್ಪತ್ರೆಯ ಭ್ರಷ್ಟಾಚಾರ ಬಯಲು

“ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇದು ಆಟೋ ಚಾಲಕರು ಮತ್ತು ರ‍್ಯಾಪಿಡೋ ನೌಕರರು ಸಲ್ಲಿಸಿದ ದೂರು ಮತ್ತು ಪ್ರತಿದೂರುಗಳ ಸರಣಿಯ ಭಾಗವಾಗಿದೆ” ಎಂದು ಎಚ್‌ಎಸ್‌ಆರ್ ಲೇಔಟ್ ಠಾಣೆಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

“ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಯಾವುದೇ ಪರವಾನಗಿಯನ್ನು ಹೊಂದಿಲ್ಲದ ಕಾರಣ ಕಾನೂನುಬಾಹಿರವಾಗಿದೆ. ರ‍್ಯಾಪಿಡೋ ನಮ್ಮ ಆದಾಯವನ್ನು ಕಿತ್ತುಕೊಳ್ಳುತ್ತಿದೆ” ಎಂದು ಆಟೋ ಚಾಲಕರು ಆರೋಪಿಸಿದ್ದಾರೆ.

ಹೈಕೋರ್ಟ್ ತಡೆಯಾಜ್ಞೆ ನೀಡಿದ ಕಾರಣ ರ‍್ಯಾಪಿಡೋ ಕಾರ್ಯನಿರ್ವಹಿಸುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...