ಬೆಂಗಳೂರು | ಕರಗ ಹೊತ್ತಿದ್ದ ಜ್ಞಾನೇಂದ್ರ ಕೊಲೆಗೆ ಯತ್ನ; ಆರೋಪಿ ಬಂಧನ

Date:

  • ಉತ್ಸವದ ವೇಳೆ ಖಾರದ ಪುಡಿ ಹಾಗೂ ರಾಸಾಯನಿಕ ದ್ರಾವಣ ಎರಚಿದ ಆರೋಪಿ
  • ಜೆಪಿ ನಗರ ನಿವಾಸಿ ಜಯನಗರದ ಆದಿನಾರಾಯಣ ಬಂಧಿತ ಆರೋಪಿ

ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಮಹೋತ್ಸವ ಅದ್ಧೂರಿಯಾಗಿ ನೆರವೇರಿದೆ. ಆದರೆ, ಕರಗವನ್ನು ಹೊತ್ತಿದ್ದ ಜ್ಞಾನೇಂದ್ರ ಅವರ ಕೊಲೆಗೆ ಯತ್ನ ನಡೆದಿದ್ದು, ಈ ಸಂಬಂಧ ಓರ್ವ ಆರೋಪಿಯನ್ನು ಹಲಸೂರು ಗೇಟ್‌ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಜೆಪಿ ನಗರ ನಿವಾಸಿ ಜಯನಗರದ ಆದಿನಾರಾಯಣ ಬಂಧಿತ ಆರೋಪಿ. ಈತನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಹಲವು ವರ್ಷಗಳಿಂದ ಕರಗ ಹೊರುವ ವಿಚಾರವಾಗಿ ಆದಿನಾರಾಯಣ ಹಾಗೂ ಜ್ಞಾನೇಂದ್ರ ಅವರ ನಡುವೆ ಮನಸ್ತಾಪವಿದೆ. ಈ ಸೇಡಿನಿಂದ ಆತ ಕೃತ್ಯ ಎಸಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.

ಏ. 6ರಂದು ನಡೆದ ಕರಗ ಉತ್ಸವದ ವೇಳೆ ಖಾರದ ಪುಡಿ ಹಾಗೂ ಬೆಳ್ಳಿ ವಸ್ತುಗಳಿಗೆ ಬಳಸಲಾಗುವ ಸೈನೆಡ್ ಪೆಟಲ್ಸ್ ಎಂಬ ರಾಸಾಯನಿಕ ದ್ರಾವಣವನ್ನು ಹೂವಿನಲ್ಲಿ ಬೆರೆಸಿ ಕರಗ ಹೊತ್ತಿದ್ದ ಜ್ಞಾನೇಂದ್ರ ಮೇಲೆ‌ ಆರೋಪಿ ಎರಚಿದ್ದನು. ಈ ಬಗ್ಗೆ ಕರಗ ಹೊತ್ತ ಅರ್ಚಕ ಜ್ಞಾನೇಂದ್ರ ಅವರು ಆರೋಪಿಸಿ ಹಲಸೂರು ಗೇಟ್‌ ಪೊಲೀಸ್‌ ಠಾಣೆಗೆ ಮಂಗಳವಾರ ದೂರು ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬಿಜೆಪಿ ಶಾಸಕ ರಘು ಬೆಂಬಲಿಗರಿಂದ ಎಎಪಿ ಕಾರ್ಯಕರ್ತರ ಮೇಲೆ ಹಲ್ಲೆ; ದೂರು ದಾಖಲು

ಈ ದೂರಿನ ಮೇರೆಗೆ ಜಯನಗರದ ಆದಿನಾರಾಯಣ ವಿರುದ್ಧ ಕೊಲೆ ಯತ್ನ ಆರೋಪದಡಿ ಎಫ್‌ಐಆರ್‌ ದಾಖಲಾಗಿತ್ತು.

ಕರಗ ಉತ್ಸವದ ವೇಳೆ ಜ್ಞಾನೇಂದ್ರ ಮೇಲೆ ಆದಿನಾರಾಯಣ ಯಾವುದೋ ವಸ್ತು ಎಸೆಯುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದರಿಂದ ಜ್ಞಾನೇಂದ್ರ ಅವರ ಕುತ್ತಿಗೆ ಭಾಗ ಹಾಗೂ ದೇಹದ ನಾನಾ ಭಾಗಗಳಲ್ಲಿ ಸುಟ್ಟಗಾಯಗಳಾಗಿವೆ.

“ಕರಗ ಹೊರುವ ಪೂಜಾರಿ ಮೇಲೆ ರಾಸಾಯನಿಕ ಪದಾರ್ಥವನ್ನು ಎರಚಿದ್ದಾರೆ. ಕರಗ ಹೊರುವ ವಿಚಾರದಲ್ಲಿ ಅವರ ಮಧ್ಯೆ ವಿವಾದಗಳಿವೆ. ಆ ಕಾರಣಕ್ಕಾಗಿ ಈ ರೀತಿಯ ಘಟನೆ ನಡೆದಿದೆ. ಪ್ರಾಥಮಿಕ ತನಿಖೆ ವೇಳೆ ಈ ವಿಷಯ ತಿಳಿದುಬಂದಿದೆ. ದೂರು ದಾಖಲಾಗಿದೆ. ಘಟನೆ ಬಗ್ಗೆ ತನಿಖೆ ಕೈಗೊಳ್ಳಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ” ಎಂದು ಬೆಂಗಳೂರು ನಗರ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸಗೌಡ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...