ಬೆಂಗಳೂರು | 25.5 ಕೆಜಿ ತೂಕದ ಆನೆ ದಂತ ಮಾರಾಟ ಯತ್ನ; ಇಬ್ಬರ ಬಂಧನ

Date:

  • ಆನೆ ದಂತವಿದ್ದ ಚೀಲವನ್ನು ಹೊತ್ತೊಯ್ಯುತ್ತಿದ್ದ ರವಿ
  • ವೃತ್ತಿಪರ ಬೇಟೆಗಾರರಾಗಿದ್ದ ಇಬ್ಬರು ಬಂಧಿತರು

25.5 ಕೆಜಿ ತೂಕದ ಆನೆ ದಂತವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಗಿರಿನಗರ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಕನಕಪುರದ ಹೆರಿಂಡ್ಯಪನಹಳ್ಳಿ ಗ್ರಾಮದ ರವಿಕುಮಾರ್ (45) ಮತ್ತು ರಾಮನಗರ ಜಿಲ್ಲೆಯ ಕುಲುಮೆ ಭೀಮಸಂದ್ರ ಗ್ರಾಮದ 58 ವರ್ಷದ ಸೋಮಶೇಖರ್ ಬಂಧಿತರು.

ಬುಧವಾರ ಬನಶಂಕರಿಯ 3ನೇ ಹಂತದ ಸಪ್ತಗಿರಿ ಲೇಔಟ್‌ನ ಹನುಮಗಿರಿ ಬೆಟ್ಟದ ನೀಲಗಿರಿ ತೋಪಿನಲ್ಲಿ ವ್ಯಕ್ತಿಯೊಬ್ಬರು ಆನೆ ದಂತವನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಜೆಪಿ ನಗರ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಮನೋಜ್ ಕುಮಾರ್ ಡಿ ಎಸ್ ಅವರಿಗೆ ಮಾಹಿತಿ ಲಭಿಸಿದೆ. ಕೂಡಲೇ ಅವರು ಗಿರಿನಗರ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಆನೆ ದಂತವಿರುವ ಗೋಣಿ ಚೀಲವನ್ನು ರವಿಕುಮಾರ ಹೊತ್ತೊಯ್ಯುತ್ತಿರುವುದನ್ನು ಕಂಡಿದ್ದಾರೆ.  

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸರು ಸೋಮಶೇಖರ್ ಹಾಗೂ ರವಿಕುಮಾರನನ್ನು ಬಂಧಿಸಿದ್ದು, ಕಳ್ಳಸಾಗಣೆ ಕಾರ್ಯಾಚರಣೆಯಲ್ಲಿ ತೊಡಗಿದ್ದ ಇತರರನ್ನು ಸೆರೆ ಹಿಡಿಯಲು ಪ್ರಯತ್ನಿಸುತ್ತಿದ್ದಾರೆ.

“ಇಬ್ಬರು ಬಂಧಿತರು ವೃತ್ತಿಪರ ಬೇಟೆಗಾರರಾಗಿದ್ದಾರೆ. ಅವರ ವಿರುದ್ಧ ಹಿಂದೆ ಪ್ರಕರಣಗಳು ದಾಖಲಾಗಿದ್ದರೆ, ಪರಿಶೀಲಿಸುತ್ತೇವೆ. ಬಂಧಿತ ಇಬ್ಬರನ್ನು ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ” ಎಂದು ಉಪ ಪೊಲೀಸ್ ಆಯುಕ್ತ (ದಕ್ಷಿಣ) ಪಿ ಕೃಷ್ಣಕಾಂತ್ ತಿಳಿಸಿದ್ದಾರೆ.

“ರವಿ ತನ್ನ ಗ್ರಾಮದ ಬಳಿ ಸತ್ತ ಆನೆಯಿಂದ ದಂತವನ್ನು ಪಡೆದಿರುವುದಾಗಿ ಒಪ್ಪಿಕೊಂಡಿದ್ದಾನೆ. ಸತ್ತ ಆನೆಯನ್ನು ಪತ್ತೆ ಹಚ್ಚುತ್ತೇವೆ. ಅದು ಸ್ವಾಭಾವಿಕ ಕಾರಣಗಳಿಂದ ಸತ್ತಿದೆಯೇ ಅಥವಾ ರವಿ ಮತ್ತು ಅವನ ಸಹಚರರು ಸೇರಿ ಕೊಂದಿದ್ದಾರೆಯೇ ಎಂದು ನಿರ್ಧರಿಸಲು ಮರಣೋತ್ತರ ಪರೀಕ್ಷೆ ನಡೆಸುತ್ತೇವೆ” ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಚಿನ್ನಕ್ಕಾಗಿ ಅಜ್ಜಿಯ ಕೊಲೆ : ಮೂವರ ಬಂಧನ

ಹಲವು ವರ್ಷಗಳಿಂದ ಕನಕಪುರ ವ್ಯಾಪ್ತಿಯ ಅರಣ್ಯದಲ್ಲಿ ಮೊಲ, ಕಾಡು ಹಂದಿ ಹಾಗೂ ಜಿಂಕೆ ಸೇರಿದಂತೆ ವನ್ಯಜೀವಿಗಳನ್ನು ಆರೋಪಿಗಳು ಬೇಟೆಯಾಡಿದ ಬಳಿಕ ಆ ವ್ಯನ್ಯಜೀವಿಗಳ ಉತ್ಪನ್ನಗಳನ್ನು ಅಕ್ರಮವಾಗಿ ಮಾರಾಟ ಮಾಡಿ ಹಣ ಸಂಪಾದಿಸುತ್ತಿದ್ದರು. ಕೆಲವು ದಿನಗಳ ಹಿಂದೆ ಕಾಡಿಗೆ ಮೊಲ ಬೇಟೆಗೆ ತೆರಳಿದ್ದಾಗ ಅಲ್ಲಿ ಸತ್ತು ಬಿದ್ದಿದ್ದ ಆನೆಯ ದಂತವನ್ನು ಕತ್ತರಿಸಿಕೊಂಡು ಬಂದು ನಗರದಲ್ಲಿ ಮಾರಾಟಕ್ಕೆ ಆರೋಪಿಗಳು ಯತ್ನಿಸಿದ್ದರು. ಶಂಕಿತ ಆರೋಪಿಗಳು ಕನಕಪುರದ ಅರಣ್ಯ ಪ್ರದೇಶದಿಂದ ದಂತವನ್ನು ತೆಗೆದುಕೊಂಡಿರುವುದಾಗಿ ಹೇಳಿದ್ದಾರೆ. ಸೋಮಶೇಖರ್ ಮಧ್ಯವರ್ತಿಯಾಗಿ ದಂತ ಮಾರಾಟಕ್ಕೆ ಅನುಕೂಲ ಮಾಡಿಕೊಟ್ಟಿದ್ದರು ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...