ಬೆಂಗಳೂರು | ಬಳ್ಳಾರಿಯ ಬಿಜೆಪಿ ಸಂಸದ ದೇವೆಂದ್ರಪ್ಪ ಪುತ್ರನ ಪ್ರಕರಣ ಮೈಸೂರಿಗೆ ವರ್ಗಾವಣೆ?

Date:

ಬಳ್ಳಾರಿಯ ಬಿಜೆಪಿ ಸಂಸದ ದೇವೆಂದ್ರಪ್ಪ ಪುತ್ರ ರಂಗನಾಥ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿತ್ತು. ಬೆಂಗಳೂರಿನ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಎಫ್‌ಐಆರ್ ಕೂಡ ದಾಖಲಾಗಿತ್ತು. ಇದೀಗ, ಈ ಠಾಣೆಯಲ್ಲಿ ದಾಖಲಾದ ಪ್ರಕರಣವನ್ನು ಮೈಸೂರಿಗೆ ವರ್ಗಾವಣೆ ಮಾಡಲು ಹಿರಿಯ ಪೊಲೀಸರು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

24 ವರ್ಷದ ಸಂತ್ರಸ್ತ ಯುವತಿ ಬೆಂಗಳೂರಿನ ವಿಜಯನಗರದಲ್ಲಿ ನೆಲೆಸಿದ್ದಾರೆ. ಬಳ್ಳಾರಿ ಬಿಜೆಪಿ ಸಂಸದನ ಪುತ್ರ ಲೈಂಗಿಕ ದೌರ್ಜನ್ಯ ಎಸಗಿ ಮದುವೆ ಆಗುವುದಾಗಿ ನಂಬಿಸಿ ಮೋಸ ಮಾಡಿದ್ದಾನೆ ಎಂದು ಆರೋಪಿಸಿ ಯುವತಿ ನಗರದ ಬಸವನಗುಡಿ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲು ಮಾಡಿದ್ದರು.

ಆದರೆ, ಸಂತ್ರಸ್ತೆ ಮತ್ತು ಸಂಸದನ ಪುತ್ರ ಹೆಚ್ಚಾಗಿ ಭೇಟಿ ಆಗಿದ್ದು ಮೈಸೂರಿನಲ್ಲಿ ಹಾಗೂ ಮೈಸೂರಿನ ಖಾಸಗಿ ಹೋಟೆಲ್​ನಲ್ಲಿ ಲೈಂಗಿಕ ಸಂಪರ್ಕ ಆರೋಪ ಕೇಳಿ ಬಂದಿದೆ. ಈ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಯಾವುದೇ ದಾಖಲೆಗಳಿಲ್ಲ. ಈ ಹಿನ್ನೆಲೆ, ಹಿರಿಯ ಅಧಿಕಾರಿಗಳ ಸೂಚನೆ ಮೇಲೆ ಈ ಪ್ರಕರಣವನ್ನು ಮೈಸೂರಿಗೆ ವರ್ಗಾವಣೆ ಮಾಡಲು ಬಸವನಗುಡಿ ಮಹಿಳಾ ಪೊಲೀಸರು ಮುಂದಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏನಿದು ಪ್ರಕರಣ?

ಯುವತಿಯೊಬ್ಬರಿಗೆ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿದ ಆರೋಪ ಬಳ್ಳಾರಿ ಬಿಜೆಪಿ ಸಂಸದ ದೇವೇಂದ್ರಪ್ಪ ಪುತ್ರನ ಮೇಲೆ ಕೇಳಿಬಂದಿತ್ತು. ಈ ಬಗ್ಗೆ ಸಂಸದ ದೇವೇಂದ್ರಪ್ಪ ಪುತ್ರ ರಂಗನಾಥ್ ಅವರ ವಿರುದ್ಧ ಬೆಂಗಳೂರಿನ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು.

ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸಕರಾಗಿ ರಂಗನಾಥ್ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ಮೂಲದ ಯುವತಿಯನ್ನು ಕಳೆದ ಒಂದು ವರ್ಷದ ಹಿಂದೆ ರಂಗನಾಥ್ ಅವರು ಪಾರ್ಟಿಯೊಂದರಲ್ಲಿ ಪರಿಚಯ ಮಾಡಿಕೊಂಡಿದ್ದರು. ಬಳಿಕ, ಅವರನ್ನು ಕಳೆದ ಜನವರಿಯಲ್ಲಿ ಅವರ ತಂದೆಯನ್ನು ಭೇಟಿ ಮಾಡಿಸುವ ನೆಪದಲ್ಲಿ ಮೈಸೂರಿನ ಹೋಟೆಲ್‌ವೊಂದಕ್ಕೆ ಕರೆಸಿಕೊಂಡಿದ್ದಾರೆ. ಈ ವೇಳೆ, ಅವರೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಪ್ರೀತಿ ಮಾಡಿ, ದೈಹಿಕ ಸಂಬಂಧ ಬೆಳೆಸಿ ಇದೀಗ ಮದುವೆಯಾಗಲು ಹಿಂದೇಟು ಹಾಕುತ್ತಿದ್ದಾರೆ. ಆರು ತಿಂಗಳ ಹಿಂದೆ ಮದುವೆಯಾಗೊದಾಗಿ ಹೇಳಿ ಈಗ ವಂಚನೆ ಮಾಡಿದ್ದಾರೆ ಎಂದು ಯುವತಿ ಬೆಂಗಳೂರಿನ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ರಂಗನಾಥ್ ವಿರುದ್ಧ ಐಪಿಸಿ ಸೆಕ್ಷನ್ 420, 417, 506 ಅಡಿಯಲ್ಲಿ ಎಫ್​ಐಆರ್ ದಾಖಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಿಂದ ಯುವತಿ ಮತ್ತು ರಂಗನಾಥ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಈ ನಡುವೆ ಇದೀಗ, ಈ ಪ್ರಕರಣವನ್ನು ಮೈಸೂರಿನ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡುವ ಸಿದ್ಧತೆ ನಡೆದಿದೆ.

ಇನ್ನು ಸಂಸದ ಪುತ್ರ ರಂಗನಾಥ್ ಅವರ ಫೋಟೋ ಮತ್ತು ಆಡಿಯೋ ಇಟ್ಟುಕೊಂಡು ₹15 ಲಕ್ಷ ನೀಡುವಂತೆ ಯುವತಿ ಬ್ಲಾಕ್‌ ಮೇಲ್ ಮಾಡುತ್ತಿದ್ದಾರೆ ಎಂದು ರಂಗನಾಥ್ ಅವರು ಯುವತಿ ವಿರುದ್ಧ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರತಿದೂರು ದಾಖಲು ಮಾಡಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಿಜೆಪಿ ಸಂಸದ ದೇವೇಂದ್ರಪ್ಪ ಪುತ್ರನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ; ಎಫ್‌ಐಆರ್‌ ದಾಖಲು

ಈ ದೂರು ದಾಖಲಾದ ಬಳಿಕ ಮಾದ್ಯಮಗಳೊಂದಿಗೆ ಮಾತನಾಡಿದ ಸಂತ್ರಸ್ತ ಯುವತಿ, “ನಾನು ಯಾವ ಬ್ಲಾಕ್ ಮೇಲ್ ಕೂಡ ಮಾಡಿಲ್ಲ. ನಾನು ಈ ಬಗ್ಗೆ ರಂಗನಾಥ್ ಅವರ ತಂದೆಯೊಂದಿಗೆ ಮಾತನಾಡಲು ಪ್ರಯತ್ನ ಮಾಡಿದ್ದೇನೆ. ಆದರೆ, ಅವರು ಸರಿಯಾಗಿ ಪ್ರತಿಕ್ರಿಯೆ ನೀಡುತ್ತಿಲ್ಲ. ನಾವು ಇಬ್ಬರೂ ಜಗಳ ಮಾಡಿಕೊಳ್ಳುವ ಮುಂಚೆ ಅವರು ನನ್ನ ಮನೆಗೆ ಹಣ ನೀಡಿದ್ದಾರೆ. ಜಗಳವಾದ ಬಳಿಕ ಅವರಿಂದ ನಾನು ಹಣ ಪಡೆದಿಲ್ಲ” ಎಂದು ಹೇಳಿದ್ದಾರೆ.

“ನನಗೆ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿ, ಇದೀಗ ನನ್ನ ವಿರುದ್ಧವೇ ಮಾತನಾಡುತ್ತಿದ್ದಾರೆ. ನಾನು ಹಣಕ್ಕೆ ಬೇಡಿಕೆ ಇಟ್ಟಿದ್ದೇನೆ ಎಂದು ಸುಳ್ಳು ಹೇಳುತ್ತಿದ್ದಾರೆ. ಆದರೆ, ನಾನು ಯಾವುದೇ ಹಣಕ್ಕೂ ಬೇಡಿಕೆ ಇಟ್ಟಿಲ್ಲ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...