ಬೆಂಗಳೂರು ಬಂದ್ | ಮಿಶ್ರ ಪ್ರತಿಕ್ರಿಯೆ; ಜನರ ವಿರಳ ಓಡಾಟ

Date:

ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ಸೆ.26 ರಂದು ‘ಬೆಂಗಳೂರು ಬಂದ್’ ನಡೆಯಿತು. ಬಂದ್‌ಗೆ ಹಲವಾರು ಸಂಘಟನೆಗಳು ಸಹಕಾರ ನೀಡಿದ್ದವು. ವರ್ತಕರು ಸ್ವಪ್ರೇರಣೆಯಿಂದ ಬಂದ್‌ಗೆ ಬೆಂಬಲಿಸಿದ್ದು ವಾಣಿಜ್ಯ ಚಟುವಟಿಕೆ ಸ್ಥಗಿತಗೊಂಡಿತ್ತು. ಬಿಎಂಟಿಸಿ ಬಸ್‌ಗಳು, ಮೆಟ್ರೋ ರೈಲು ಹಾಗೂ ಇತರ ಸಾರಿಗೆಗಳು ಮಂಗಳವಾರವೂ ಎಂದಿನಂತೆ ಸಂಚರಿಸಿದವು. ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದ್ದು, ಬಂದ್‌ಗೆ ಜನರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (ಬಿಎಂಆರ್‌ಸಿಎಲ್‌) ಪ್ರಕಾರ, ಪ್ರತಿದಿನ ಸರಾಸರಿ 6.30 ಲಕ್ಷ ಪ್ರಯಾಣಿಕರು ಮೆಟ್ರೋದಲ್ಲಿ ಸಂಚರಿಸುತ್ತಾರೆ. ಬಂದ್‌ ದಿನ ನಮ್ಮ ಮೆಟ್ರೋದಲ್ಲಿ ಸಂಜೆ 5 ಗಂಟೆಯವರೆಗೆ 1,20,781 ಪ್ರಯಾಣಿಕರು ಮಾತ್ರ ಸಂಚರಿಸಿದ್ದಾರೆ. ಸಾಯಂಕಾಲದ ನಂತರದ ಮಾಹಿತಿ ಲಭ್ಯವಿಲ್ಲ.

“ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಸಾಮಾನ್ಯ ದಿನಕ್ಕಿಂತ ಶೇ.20 ರಷ್ಟು ಕಡಿಮೆ ಬಸ್‌ಗಳು ಸಂಚರಿಸಿವೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದಿನಕ್ಕೆ ಸರಾಸರಿ 5,602 ಬಿಎಂಟಿಸಿ ಬಸ್‌ಗಳು ಕಾರ್ಯ ನಿರ್ವಹಿಸುತ್ತವೆ. ನಿಗಮವು 604 ಬಸ್ ಸೇವೆಗಳನ್ನು ರದ್ದುಗೊಳಿಸಿದ್ದರಿಂದ ಈ ಸಂಖ್ಯೆ 4,998ಕ್ಕೆ ಕುಸಿಯಿತು. ಇದಲ್ಲದೆ, ಶೇ.9 ರಷ್ಟು ಬಸ್‌ಗಳನ್ನು ಸಾಮಾನ್ಯ ಮತ್ತು ರಾತ್ರಿ ಪಾಳಿಗಳಿಂದ ರದ್ದುಗೊಳಿಸಬೇಕಾಗಿತ್ತು. ಒಟ್ಟಾರೆಯಾಗಿ, ಬಿಎಂಟಿಸಿ ತನ್ನ ಸಾಮಾನ್ಯ ಬಸ್ ವೇಳಾಪಟ್ಟಿಗಳಲ್ಲಿ ಶೇ.20 ರಷ್ಟನ್ನು ರದ್ದುಗೊಳಿಸಿದೆ. ಬಿಎಂಟಿಸಿ ಬಸ್‌ಗಳಲ್ಲಿ ಪ್ರತಿದಿನ ಸುಮಾರು 40 ಲಕ್ಷ ಪ್ರಯಾಣಿಕರು ಪ್ರಯಾಣಿಸುತ್ತಾರೆ” ಎಂದು ಅಧಿಕಾರಿ ವಿವರಿಸಿದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (ಕೆಎಸ್‌ಆರ್‌ಟಿಸಿ) ಬೆಂಗಳೂರಿನಿಂದ ಇಂಟರ್‌ಸಿಟಿ ಬಸ್‌ಗಳ ಕಾರ್ಯಾಚರಣೆಯನ್ನು ಕಡಿಮೆ ಮಾಡಿದೆ.

“ಬೆಂಗಳೂರು ಕೇಂದ್ರ ವಿಭಾಗದಿಂದ 212 ಬಸ್ ಸೇವೆಗಳಲ್ಲಿ 167 ಬಸ್‌ಗಳು ಮಾತ್ರ ಕಾರ್ಯ ನಿರ್ವಹಿಸಿವೆ. ಕೆಎಸ್‌ಆರ್‌ಟಿಸಿಯ 14 ನಾನಾ ವಿಭಾಗಗಳು ಮಂಗಳವಾರ ನಿಗದಿಪಡಿಸಲಾದ 90% ಕ್ಕಿಂತ ಹೆಚ್ಚು ಬಸ್‌ಗಳು ಕಾರ್ಯ ನಿರ್ವಹಿಸಿವೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಾಗ್ಮನೆ ಟೆಕ್ ಪಾರ್ಕ್ ಸೇರಿದಂತೆ 10ಕ್ಕೂ ಹೆಚ್ಚು ಕಡೆ ಐಟಿ ದಾಳಿ

ಆ್ಯಪ್ ಆಧಾರಿತ ಆಟೋ ಮತ್ತು ಕ್ಯಾಬ್ ಸೇವೆಗಳು ಸಹ ಎಂದಿನಂತೆ ಕಾರ್ಯನಿರ್ವಹಿಸಿದವು. ಆದರೂ ಅವುಗಳ ಸಂಖ್ಯೆಯು ಗಮನಾರ್ಹವಾಗಿ ಕುಸಿದಿದೆ.

ಬೆಂಗಳೂರಿನ ಆಟೋ ಡ್ರೈವರ್‌ಗಳು ನಡೆಸುತ್ತಿರುವ ನಮ್ಮ ಯಾತ್ರಿ ರಾತ್ರಿ 10 ಗಂಟೆಯವರೆಗೆ ಕೇವಲ 24,000 ರೈಡ್‌ಗಳನ್ನು ಪೂರ್ಣಗೊಳಿಸಿದೆ. ಇದು ದೈನಂದಿನ ಅಂಕಿಅಂಶ 94,000 ಆಗಿದೆ.

ಉಬರ್, ಓಲಾ ಹಾಗೂ ರ‍್ಯಾಪಿಡೋದಲ್ಲಿ ಸಹ ಕಡಿಮೆ ಪ್ರಯಾಣಿಕರು ಸಂಚರಿಸಿದ್ದಾರೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...