ಬೆಂಗಳೂರು ಬಂದ್ | ರ‍್ಯಾಪಿಡೋ ಬೈಕ್ ಚಾಲಕರ ಮೇಲೆ ಹಲ್ಲೆ ನಡೆಸುತ್ತಿರುವ ಪ್ರತಿಭಟನಾನಿರತರು

Date:

ಸೆ.11 ರಂದು ಖಾಸಗಿ ಸಾರಿಗೆ ಒಕ್ಕೂಟ ಬೆಂಗಳೂರು ಬಂದ್‌ಗೆ ಕರೆ ನೀಡಿದ್ದು, ನಗರದ ನಾಲ್ಕು ಭಾಗಗಳಲ್ಲಿಯೂ ಪ್ರತಿಭಟನೆ ನಡೆಸುತ್ತಿವೆ. ಎಲ್ಲೆಡೆ ಖಾಸಗಿ ವಾಹನಗಳ ಸಂಚಾರ ಬಂದ ಆಗಿದೆ. ಈ ವೇಳೆ, ರಸ್ತೆಗಿಳಿಯುವ ಆಟೋ, ಟ್ಯಾಕ್ಸಿ ಚಾಲಕರ ಮೇಲೆ ಪ್ರತಿಭಟನಾನಿರತರು ಹಲ್ಲೆ ನಡೆಸುತ್ತಿದ್ದಾರೆ. ಇದರ ಜತೆಗೆ ರ‍್ಯಾಪಿಡೋ ಬೈಕ್ ಚಾಲಕರ ಮೇಲೆ ಹಲ್ಲೆ ಮಾಡುತ್ತಿರುವ ಘಟನೆ ನಡೆಯುತ್ತಿದೆ.

ಬೊಮ್ಮನಹಳ್ಳಿ ಮುಖ್ಯ ರಸ್ತೆಯಲ್ಲಿ ಪ್ರತಿಭಟನಾನಿರತರು ರ‍್ಯಾಪಿಡೋ ಬೈಕ್ ಬುಕ್ ಮಾಡಿ, ರ‍್ಯಾಪಿಡೋ ಬೈಕ್ ಚಾಲಕರನ್ನು ಸ್ಥಳಕ್ಕೆ ಕರೆಯಿಸಿಕೊಳ್ಳುತ್ತಿದ್ದಾರೆ. ಅವರು ಸ್ಥಳಕ್ಕೆ ಬಂದ ಬಳಿಕ ಹೆಲ್ಮೆಟ್‌ ತೆಗೆದು ಹಲ್ಲೆ ಮಾಡುತ್ತಿದ್ದಾರೆ.

ಕಾರು ಚಾಲಕನ ಮೇಲೆ ಹಲ್ಲೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಡಿಗೆ ಹೋಗುತ್ತಿದ್ದ ಕಾರು ಚಾಲಕನನ್ನು ಹಿಡಿದು ತಡೆಯಲಾಗಿದೆ. ಬಳಿಕ ಕಾರ್ ಕೀ ಕಿತ್ತುಕೊಂಡು ಆತನ ಮೇಲೆ ಪ್ರತಿಭಟನಾನಿರತರು ಹಲ್ಲೆ ಮಾಡಿ ಥಳಿಸಿದ ಘಟನೆ ಗಾಂಧಿ ನಗರದ ಮೌರ್ಯ ಸರ್ಕಲ್ ಬಳಿ ನಡೆದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು ಬಂದ್ | ರಸ್ತೆಗಿಳಿದ ವಾಹನದ ಮೇಲೆ ಕಲ್ಲು ತೂರಾಟ, ಚಾಲಕರಿಗೆ ಸನ್ಮಾನ

ಸ್ಥಳಕ್ಕೆ ಬಂದ ಪೊಲೀಸರಿಂದ ಕಾರು ಚಾಲಕನ ರಕ್ಷಣೆ ಮಾಡಲಾಗಿದೆ.

ಸಂಗೊಳ್ಳಿ ರಾಯಣ್ಣ ಫ್ಲೈಓವರ್ ಮೇಲೆ ಮತ್ತೋರ್ವ ರ‍್ಯಾಪಿಡೋ ಚಾಲಕನ ಮೇಲೆ ಹಲ್ಲೆ ಮಾಡಲಾಗಿದೆ. ಸಿಕ್ಕ ಸಿಕ್ಕಲ್ಲಿ ರ‍್ಯಾಪಿಡೋ ಚಾಲಕರ ಮೇಲೆ ಪ್ರತಿಭಟನಾನಿರತರು ಹಲ್ಲೆ ಮಾಡುತ್ತಿದ್ದಾರೆ.

ಖಾಸಗಿ ಚಾಲಕರು ತಮ್ಮ ಬೇಡಿಕೆಗಳಿಗ ಈಡೇರಿಕೆಗೆ ಮಾಡುತ್ತಿರುವ ಈ ಪ್ರತಿಭಟನೆ ಹಲ್ಲೆ ಮತ್ತು ಹಿಂಸಾಚಾರಕ್ಕೆ ತಿರುಗುತ್ತಿದೆ. ರ‍್ಯಾಪಿಡೋ ಚಾಲಕರನ್ನು ತಾವೇ ಬುಕ್ ಮಾಡಿ ಕರೆಸಿ ಥಳಿಸುವಂತಹ ಘಟನೆಗಳು ನಗರದಲ್ಲಿ ವರದಿಯಾಗುತ್ತಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...