ಬೆಂಗಳೂರು ಬಂದ್ | ಪ್ರತಿಭಟನಾನಿರತರಿಂದ ಅಹಿತಕರ ಘಟನೆ; 13 ಪ್ರಕರಣ ದಾಖಲು

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಖಾಸಗಿ ಸಾರಿಗೆ ಒಕ್ಕೂಟ ಸೆ.11 ರಂದು ಬಂದ್‌ಗೆ ಕರೆ ನೀಡಿತ್ತು. ನಗರದ ಫ್ರೀಡಂ ಪಾರ್ಕ್‌ನಲ್ಲಿ ಆಟೋ, ಕ್ಯಾಬ್‌ ಬಸ್‌ ಚಾಲಕರು ಮತ್ತು ಮಾಲೀಕರು ಪ್ರತಿಭಟನೆ ನಡೆಸುತ್ತಿದ್ದರು. ಇತ್ತಕಡೆ ನಗರದೆಲ್ಲೆಡೆ ಕೆಲವು ಪ್ರತಿಭಟನಾನಿರತರು ರ್‍ಯಾಪಿಡೋ ಸವಾರರು ಹಾಗೂ ಪ್ರತಿಭಟನೆಯಲ್ಲಿ ಪಾಲ್ಗೊಳ್ಳದ ಕ್ಯಾಬ್‌ ಚಾಲಕರ ಮೇಲೆ ದಬ್ಬಾಳಿಕೆ ನಡೆಸಿ, ಹಲ್ಲೆ ಮಾಡಿದ ಘಟನೆಗಳು ನಡೆದಿವೆ.

ಬೇಕೇಂದೆ ರ್‍ಯಾಪಿಡೋ ಬುಕ್ ಮಾಡಿ ಸವಾರರನ್ನು ತಾವಿರುವ ಕಡೆ ಕರೆಸಿ ಹೆಲ್ಮೆಟ್‌ ತೆಗೆದು ಹಲ್ಲೆ ಮಾಡುವುದು, ಇನ್ನೊಂದೆಡೆ ಬಾಡಿಗೆಗೆ ಹೋಗುತ್ತಿದ್ದ ಕಾರ್ ಮೇಲೆ ಕಲ್ಲು ಹಾಕಿ ಗಾಜು ಪುಡಿ ಪುಡಿ ಮಾಡುವುದು, ಆಟೋ ಚಾಲಕರ ಮೇಲೆ ಹಲ್ಲೆ, ಕಾರ್ ಕೀ ಕಿತ್ತುಕೊಂಡು ಕ್ಯಾಬ್ ಚಾಲಕನ ಮೇಲೆ ಹಲ್ಲೆ ಮಾಡುವುದು ಸೇರಿದಂತೆ ಪ್ರತಿಭಟನೆಗೆ ಸಹಕಾರ ನೀಡದ ಚಾಲಕರ ಮೇಲೆ ಮೊಟ್ಟೆ ಎಸೆದು, ಹಲ್ಲೆ ನಡೆಸುವುದು, ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಿದ ಹಲವಾರು ಅಹಿತಕರ ಘಟನೆಗಳಿಗೆ ಬೆಂಗಳೂರು ಬಂದ್ ಸಾಕ್ಷಿಯಾಯಿತು.

ಬೆಂಗಳೂರಿನಲ್ಲಿ ನಡೆದ ಅಹಿತಕರ ಘಟನೆಗಳಿಗೆ ಸಂಬಂಧಿಸಿದಂತೆ ನಗರದ 8 ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸರು ಒಟ್ಟು 13 ಜನರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಈ ಪೈಕಿ 12 ಮಂದಿಯನ್ನು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರ್‍ಯಾಪಿಡೋ ಸವಾರರ ಮೇಲೆ ಹಲ್ಲೆ

  • ಪ್ರತಿಭಟನಾನಿರತರು ಬೇಕಂತಲೇ ರ್‍ಯಾಪಿಡೋ ಬುಕ್ ಮಾಡಿ ರ್‍ಯಾಪಿಡೋ ಸವಾರರನ್ನು ತಾವಿರುವ ಸ್ಥಳಕ್ಕೆ ಕರೆಯಿಸಿ ಅವರ ಹೆಲ್ಮೆಟ್‌ ತೆಗೆದು ಹಲ್ಲೆ ಮಾಡಿದ ಹಲವು ಘಟನೆಗಳು ನಡೆದಿವೆ. ರ್‍ಯಾಪಿಡೋ ಸವಾರನ ಮೇಲೆ ಹಲ್ಲೆ ಮಾಡಿದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
  • ಪುನೀತ್​, ಮಣಿ, ಶರಣ್​ ಬಂಧಿತರು. ಪ್ರತಿಭಟನಾನಿರತರು ವಿಜಯ್‌ಕುಮಾರ್ ಎಂಬಾತ ರ್‍ಯಾಪಿಡೋ ಸವಾರನ ಮುಖಕ್ಕೆ ಮೊಟ್ಟೆ ಹೊಡೆದು ಬೆದರಿಕೆ ಹಾಕಿ ಹಲ್ಲೆ ಮಾಡಿದ್ದಾರೆ. ಈ ಬಗ್ಗೆ ಬೆಂಗಳೂರಿನ ಬಾಗಲಗುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
  • ಏರಪೋರ್ಟ್‌ ಕಡೆಯಿಂದ ಬರುತ್ತಿದ್ದ ಎರಡು ಕ್ಯಾಬ್‌ಗಳನ್ನು ಮೂವರು ಪ್ರತಿಭಟನಾನಿರತರು ಚಿಕ್ಕಜಾಲ ಬಳಿ ಕಾರನ್ನು ಅಡ್ಡಗಟ್ಟಿದ್ದಾರೆ. ಬಳಿಕ ಕಾರಿನ ಗಾಜು ಧ್ವಂಸ ಮಾಡಲಾಗಿದೆ. ಈ ಸಂಬಂಧ ಬೆಂಗಳೂರು ಆಟೋ ಚಾಲಕರ ಸಂಘದ ಸದಸ್ಯರಾದ ವಿಜಯಕುಮಾರ್, ನಾಗರಾಜ್, ನಾರಾಯಣಗೌಡ ಎಂಬವರನ್ನು ಬಂಧಿಸಲಾಗಿದೆ.
  • ಪ್ರತಿಭಟನೆಗೆ ಸಹಕಾರ ನೀಡದ ಹಳದಿ ಬೋರ್ಡ್ ಕಾರುಗಳು, ಸಣ್ಣ-ಪುಟ್ಟ ಗೂಡ್ಸ್‌ ವಾಹನ, ಆಟೋ ಹಾಗೂ ಚಾಲಕರ ಮೇಲೆ ಮೊಟ್ಟೆ ಎಸೆದು ಹಲ್ಲೆ ಮಾಡಲಾಗಿದೆ. ಆಟೋ, ಕಾರುಗಳ ಗಾಜು ಧ್ವಂಸಗೊಳಿಸಲಾಗಿದೆ. ನಗರದ ಗೊರಗುಂಟೆಪಾಳ್ಯ, ರಾಜ್‌ಕುಮಾರ್ ರಸ್ತೆಯಲ್ಲಿ ಎರಡು ಆಟೋ ಅಡ್ಡಗಟ್ಟಿ ಚಕ್ರದ ಗಾಳಿ ಬಿಟ್ಟು ಬೆದರಿಕೆ ಹಾಕಿದ ಘಟನೆ ನಡೆದಿದೆ.
  • ಮೇಖ್ರಿ ವೃತ್ತದ ಬಳಿ ಕಾರು ಚಾಲಕನಿಗೆ ಬೆದರಿಕೆ ಹಾಕಿ, ಆತನ ಕಾರಿನ ಹಿಂಬದಿ ಚಕ್ರ ಬಿಚ್ಚಿಕೊಂಡು ಪರಾರಿಯಾಗಿದ್ದಾರೆ. ಸಹಕಾರ ನಗರದಲ್ಲಿ ಕ್ಯಾಬ್‌ನ ಒಳಭಾಗ ಮತ್ತು ಚಾಲಕನಿಗೆ ಮೊಟ್ಟೆ ಒಡೆದು ದೌರ್ಜನ್ಯ ಎಸಗಿದ್ದಾರೆ.
  • ಮೌರ್ಯ ವೃತ್ತ ಮತ್ತು ಸುಜಾತಾ ಬಳಿ ಐದಾರು ಗೂಡ್ಸ್‌ ವಾಹನ ಚಾಲಕರಿಗೆ ಥಳಿಸಲಾಗಿದೆ. ಸಂಗೊಳ್ಳಿ ರಾಯಣ್ಣ ಮೇಲ್ಸೇತುವೆ ಮೇಲೆ ರ್‍ಯಾಪಿಡೋ ಚಾಲಕನ ಮೇಲೆ ಹತ್ತಕ್ಕೂ ಹೆಚ್ಚು ಪ್ರತಿಭಟನಾಕಾರರು ಹಲ್ಲೆ ನಡೆಸಿದ್ದಾರೆ.
  • ಮೌರ್ಯ ಸರ್ಕಲ್ ಬಳಿ ಬಾಡಿಗೆ ಹೋಗುತ್ತಿದ್ದ ಕಾರಿನ ಕೀ ಕಿತ್ತುಕೊಂಡು ಚಾಲಕನ ಮೇಲೆ ಹಲ್ಲೆ ನಡೆಸಲಾಗಿದೆ.

ಬೆಂಗಳೂರು ಬಂದ್‌ ವೇಳೆ ಹಲವಾರು ಅಹಿತಕರ ಘಟನೆಗಳು ನಡೆದಿವೆ. ಕೇಂದ್ರ ಮತ್ತು ಆಗ್ನೇಯ ವಿಭಾಗದಿಂದ ತಲಾ ಒಂದು ಪ್ರಕರಣಗಳು ದಾಖಲಾಗಿದ್ದು, ಮೂವರನ್ನು ಬಂಧಿಸಲಾಗಿದೆ. ಉತ್ತರ ವಿಭಾಗದಲ್ಲಿ ಎರಡು ಪ್ರಕರಣ ದಾಖಲಾಗಿದ್ದು, 6 ಮಂದಿ ಬಂಧಿಸಲಾಗಿದೆ. ಈಶಾನ್ಯ ವಿಭಾಗದಲ್ಲಿ 2 ಪ್ರಕರಣ ದಾಖಲಾಗಿದ್ದು, 3 ಮಂದಿ ಬಂಧಿಸಲಾಗಿದೆ. ಪಶ್ಚಿಮ ವಿಭಾಗದಲ್ಲಿ 7 ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಹುಡುಕಾಟ ನಡೆಯುತ್ತಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು ಬಂದ್ | ಫ್ರೀಡಂ ಪಾರ್ಕ್‌ನಲ್ಲಿ ಒಗ್ಗಟ್ಟು ಪ್ರದರ್ಶಿಸಿದ ಆಟೋ, ಕ್ಯಾಬ್ ಚಾಲಕರು

ಮೆಜೆಸ್ಟಿಕ್, ಮೇಖ್ರಿ ವೃತ್ತ, ಹೆಬ್ಬಾಳ, ಇಂದಿರಾನಗರ, ಸಂಗೊಳ್ಳಿ ರಾಯಣ್ಣ ಮೇಲ್ಸೇತುವೆ ಸೇರಿದಂತೆ ಹಲವೆಡೆ ಪ್ರತಿಭಟನಾನಿರತರು ರಸ್ತೆಗಿಳಿದು ಹೋರಾಟ ನಡೆಸುತ್ತಿದ್ದರು. ಈ ಪರಿಣಾಮ ನಗರದಲ್ಲಿ ಕೆಲವೆಡೆ ಸಂಚಾರ ದಟ್ಟಣೆ ಉಂಟಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...