₹82,999 ಮೊತ್ತದ ಆಪಲ್ ವಾಚ್ ಅಲ್ಟ್ರಾ ಕದ್ದ ಬೆಂಗಳೂರು ಮೂಲದ ಸ್ವಿಗ್ಗಿ ಜೀನಿ ಡೆಲಿವೆರಿ ಎಕ್ಸಿಕ್ಯೂಟಿವ್

Date:

₹82,999 ಮೊತ್ತದ ಆಪಲ್ ವಾಚ್ ಅಲ್ಟ್ರಾವನ್ನು ಬೆಂಗಳೂರು ಮೂಲದ ಸ್ವಿಗ್ಗಿ ಜೀನಿ ಡೆಲಿವೆರಿ ಎಕ್ಸಿಕ್ಯೂಟಿವ್ ಕದ್ದಿದ್ದರು ಎಂದು ಬೆಂಗಳೂರು ಮೂಲದ ವ್ಯಕ್ತಿಯೊಬ್ಬರು ಆರೋಪಿಸಿ ಟ್ವೀಟ್‌ ಮಾಡಿದ್ದಾರೆ.

ಧೋಲಾಕಿಯಾ ಜಯದೀಪ್ ಎಂಬುವವರು ಈ ಬಗ್ಗೆ ಟ್ವೀಟ್‌ ಮಾಡಿದ್ದು, “ಸ್ವಿಗ್ಗಿ ಜೀನಿ ಡೆಲಿವೆರಿ ಬಾಯ್ ನನ್ನ ಸ್ನೇಹಿತನಿಂದ ಆಪಲ್ ವಾಚ್ ಅಲ್ಟ್ರಾ ತೆಗೆದುಕೊಂಡಿದ್ದಾನೆ. ಅದನ್ನು ತೆಗೆದುಕೊಂಡು ಡೆಲಿವೆರಿ ಕೊಡಲು ನನ್ನ ಬಳಿ ಬರುತ್ತಿದ್ದನು. ಇದೇ ವೇಳೆ, ದಾರಿ ಮಧ್ಯೆ ಏಕಾಏಕಿ ಡೆಲಿವೆರಿ ಬಾಯ್ ಆರ್ಡ್‌ರ್ ರದ್ದು ಮಾಡಿದ್ದಾನೆ. ನನ್ನ ಮತ್ತು ನನ್ನ ಸ್ನೇಹಿತನ ನಂಬರ್ ಬ್ಲಾಕ್ ಮಾಡಿದ್ದಾನೆ” ಎಂದು ದೂರಿದ್ದಾರೆ.

“ಇದರಿಂದ ಗಾಬರಿಗೊಂಡ ನಾನು ನಂತರ ಐಫೋನ್‌ನಲ್ಲಿ ಸ್ಥಳ ಟ್ರ್ಯಾಕಿಂಗ್ ವೈಶಿಷ್ಟದ ಸಹಾಯದಿಂದ ರ‍್ಯಾಪಿಡೋ ಬೈಕ್‌ ಬುಕ್ ಮಾಡಿ ಅವರ ಸಹಾಯದಿಂದ ಆತನನ್ನು ಬೆನ್ನಟ್ಟಿದ್ದೇವೆ. ಬೆಳಗಿನ ಜಾವ 2 ಗಂಟೆಗೆ ಈ ಕಾರ್ಯಾಚರಣೆ ನಡೆಸಲಾಯಿತು. ಸ್ವಿಗ್ಗಿ ಜೀನಿ ಜತೆಗೆ ಇದು ನನ್ನ ಕೆಟ್ಟ ಅನುಭವ, ಹಾಗೂ ಕರಾಳ ರಾತ್ರಿ” ಎಂದು ಬರೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸ್ವಿಗ್ಗಿ ಜೀನಿ ಎಲ್ಲ ಸಮಯದಲ್ಲೂ ನಮಗೆ ಇಮೇಲ್ ಮಾಡಲು ಹೇಳುತ್ತದೆ” ಎಂದಿದ್ದಾರೆ.

ಈ ಟ್ವೀಟ್‌ಗೆ ಹಲವು ಜನ ಕಮೆಂಟ್‌ ಮಾಡಿದ್ದು, “ಕಥೆಯನ್ನು ಸಂಪೂರ್ಣ ಮುಗಿಸಿ, ನಿಮಗೆ ಕೊನೆದಾಗಿ ವಾಚ್‌ ಸಿಕ್ಕಿತಾ ಇಲ್ಲವಾ ಎಂಬುದನ್ನು ತಿಳಿಸಿರಿ” ಎಂದು ಅಭೀತ್ ಎಂಬುವವರು ಟ್ವೀಟ್‌ ಮಾಡಿದ್ದಾರೆ.

“ಇದು ಮಾಂತ್ರಿಕ ಸಂಜೆಯಂತೆ ಧ್ವನಿಸುತ್ತದೆ. ಕಾಣೆಯಾದ ವಸ್ತುಗಳೊಂದಿಗೆ ಬೆಳಗಿನ ಸಮಯದವರೆಗೆ ಕಣ್ಣಾಮುಚ್ಚಾಲೆ ಆಡಬಹುದಾದಾಗ ಗ್ರಾಹಕರ ಸೇವೆ ಯಾರಿಗೆ ಬೇಕು?” ಎಂದು ಶಿಂಗ್ ಎಂಬುವವರು ತಿಳಿಸಿದ್ದಾರೆ.

“ಹೀಗಾಗಬಾರದಿತ್ತು! ದಯವಿಟ್ಟು ಆರ್ಡರ್ ಐಡಿಯೊಂದಿಗೆ ನಮಗೆ ಸಹಾಯ ಮಾಡಬಹುದೇ? ನಾವು ಅದನ್ನು ಪರಿಶೀಲಿಸುತ್ತೇವೆ” ಎಂದು ಸ್ವಿಗ್ಗಿ ಕೇರ್‌ನ ಅಶ್ವಿನ್ ಎಂಬುವವರು ಟ್ವೀಟ್‌ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ‘ಶಕ್ತಿ’ಯಿಂದಾದ ನಷ್ಟ ಸರಿದೂಗಿಸಲು ಪ್ರತಿ ತಿಂಗಳು ₹10 ಸಾವಿರ ನೀಡಲು ಸರ್ಕಾರಕ್ಕೆ ಆಟೋ ಚಾಲಕರ ಒತ್ತಾಯ

ಸ್ವಿಗ್ಗಿಯ ಜೀನಿ ಸೇವೆ ಆಹಾರದ ಹೊರತಾಗಿ ಇತರ ವಸ್ತು ವಿತರಣಾ ಕಾರ್ಯಗಳನ್ನು ನಿರ್ವಹಿಸುತ್ತದೆ. ಈಗ ನಡೆದ ಘಟನೆಯೂ ಸೇವೆಯ ವಿಶ್ವಾಸಾರ್ಹತೆ ಮತ್ತು ಸುರಕ್ಷತೆಯ ಬಗ್ಗೆ ಕಳವಳವನ್ನು ಉಂಟುಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...