₹50 ಕೋಟಿ ಜಾಹೀರಾತು ಶುಲ್ಕ ಸಂಗ್ರಹಿಸುವಲ್ಲಿ ಬಿಬಿಎಂಪಿ ವಿಫಲ; ಮತ್ತೆ ಟೆಂಡರ್ ಕರೆದ ಪಾಲಿಕೆ

Date:

  • ಗುತ್ತಿಗೆ ಅವಧಿ ಮುಗಿದರೂ ಬಸ್ ತಂಗುದಾಣ ಹಾಗೂ ಸ್ಕೈವಾಕ್‌ಗಳಲ್ಲಿ ಜಾಹೀರಾತು ಪ್ರದರ್ಶನ
  • ಜಾಹೀರಾತು ಬಾಕಿ ಬಿಲ್ ಪಾವತಿ ಮಾಡದ ಕಂಪನಿಗಳನ್ನು ಕಪ್ಪು ಪಟ್ಟಿಗೆ ಸೇರಿಸುವ ಸಾಧ್ಯತೆ

ಬೆಂಗಳೂರಿನಲ್ಲಿ ಜಾಹೀರಾತುದಾರರಿಂದ ಸುಮಾರು ₹50 ಕೋಟಿ ಬಾಕಿ ಸಂಗ್ರಹಿಸುವಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿಫಲಾಗಿದೆ. ಆದರೂ, ಇದೀಗ ನಗರದಲ್ಲಿ ಮತ್ತಷ್ಟು ಸ್ಕೈವಾಕ್ ನಿರ್ಮಾಣ ಮಾಡಲು ಹಾಗೂ ಜಾಹೀರಾತು ನೀಡಲು ಮತ್ತೆ ಟೆಂಡರ್ ಕರೆದಿದೆ.

ಜಾಹೀರಾತು ಶುಲ್ಕ ಪಾವತಿಸುವಲ್ಲಿ ವಿಫಲವಾಗಿರುವ ಒಂಬತ್ತು ಏಜೆನ್ಸಿಗಳು ಮತ್ತೆ ಸ್ಕೈವಾಕ್ ನಿರ್ಮಾಣ ಮತ್ತು ಜಾಹೀರಾತು ಅಳವಡಿಕೆಗೆ ಅದೇ ಜಾಗಗಳನ್ನು ಬಾಡಿಗೆಗೆ ಪಡೆಯಲು ಬಿಡ್ ಮಾಡಿವೆ. ಈ ಕಂಪನಿಗಳು ಜಾಗದ ಬಾಡಿಗೆ, ಜಾಹೀರಾತು ಶುಲ್ಕ, ತೆರಿಗೆ ಮತ್ತು ಜಿಎಸ್‌ಟಿ ಸೇರಿದಂತೆ ಇತರ ಶುಲ್ಕವನ್ನು ಬಿಬಿಎಂಪಿಗೆ ಇನ್ನೂ ಪಾವತಿಸಿಲ್ಲ. ಇದೀಗ, ಟೆಂಡರ್ ಪಡೆಯಲು ಹಳೇ ಬಾಕಿಯನ್ನು ಪಾವತಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಈ ಕಂಪನಿಗಳಿಗೆ ಬಾಕಿ ಪಾವತಿಸುವಂತೆ ಬಿಬಿಎಂಪಿ 36 ನೋಟಿಸ್‌ ಜಾರಿ ಮಾಡಿದೆ. ಒಟ್ಟು ಬಾಕಿಯಿರುವ ಮೊತ್ತವು ₹26 ಕೋಟಿಗಿಂತ ಹೆಚ್ಚಾಗಿದೆ ಮತ್ತು ಈ ಮೊತ್ತಕ್ಕೆ 18% ದಂಡದೊಂದಿಗೆ ₹50 ಕೋಟಿ ಮೊತ್ತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಯನಗರ 3ನೇ ಬ್ಲಾಕ್ ಹಾಗೂ ಯಶವಂತಪುರ ರೈಲು ನಿಲ್ದಾಣದ ಮುಂಭಾಗ ಸೇರಿದಂತೆ 36 ಸ್ಕೈವಾಕ್‌ಗಳನ್ನು ಕಂಪನಿಗಳು ನಿರ್ಮಿಸಿವೆ. ಕೆಲವು ಕಂಪನಿಗಳು ಕೆಲಸ ಪೂರ್ಣಗೊಳಿಸಲು ಸುಮಾರು ಆರು ವರ್ಷಗಳನ್ನು ತೆಗೆದುಕೊಂಡಿವೆ. ಉದಾಹರಣೆಗೆ, ತಾವರೆಕೆರೆ ಜಂಕ್ಷನ್ ಬಳಿ ಸ್ಕೈವಾಕ್ 2018 ರಲ್ಲಿ ಪೂರ್ಣಗೊಂಡಿತು. ಇದಕ್ಕೆ 2012ರಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಗಿತ್ತು. ಕಾಮಗಾರಿ ವಿಳಂಬದಿಂದ ಬಿಬಿಎಂಪಿ ಬೊಕ್ಕಸಕ್ಕೆ ಭಾರೀ ನಷ್ಟ ಉಂಟುಮಾಡಿದೆ. ಆದರೆ, ಈ ಯೋಜನೆಗಳಿಂದ ಗಳಿಸಿದ ಹಣವನ್ನು ಬಿಬಿಎಂಪಿ ಇನ್ನೂ ಸಂಗ್ರಹಿಸಿಲ್ಲ.

ಮತ್ತೊಂದೆಡೆ, ಕೆಲವು ಕಂಪನಿಗಳ ಒಪ್ಪಂದಗಳು 2017, 2019, 2020 ಮತ್ತು 2021ರಲ್ಲಿ ಕೊನೆಗೊಂಡಿದ್ದರೂ ಅವರು ಸ್ಕೈವಾಕ್‌ಗಳಲ್ಲಿ ಜಾಹೀರಾತು ಪ್ರಕಟ ಮಾಡುವುದನ್ನು ಮುಂದುವರೆಸಿದ್ದಾರೆ.

ಮಾಹಿತಿ ಹಕ್ಕು ಅಧ್ಯಯನ ಕೇಂದ್ರದ ಮ್ಯಾನೇಜಿಂಗ್ ಟ್ರಸ್ಟಿ ಎಸ್.ಅಮರೇಶ್ ಮಾತನಾಡಿ, “ಗುತ್ತಿಗೆ ಅವಧಿ ಮುಗಿದರೂ ಬಸ್ ತಂಗುದಾಣ ಹಾಗೂ ಸ್ಕೈವಾಕ್ ಗಳಲ್ಲಿ ಜಾಹೀರಾತು ಪ್ರದರ್ಶನ ಮುಂದುವರಿದಿದೆ” ಎಂದು ಆರೋಪಿಸಿದರು.

“ಹೊಸದಾಗಿ ಟೆಂಡರ್ ಕರೆಯುತ್ತೇವೆ ಎಂದು ಬಿಬಿಎಂಪಿ ಅಧಿಕಾರಿಗಳು ಹೇಳಿಕೊಂಡರೂ ಬಾಕಿ ವಸೂಲಿ ಮಾಡುವ ಬಗ್ಗೆ ಸುಮ್ಮನಿದ್ದಾರೆ. ಬಿಬಿಎಂಪಿ ಡಿಸೆಂಬರ್ 2022ರಲ್ಲಿ ನೋಟಿಸ್ ನೀಡಿತ್ತು. ಬೆಂಗಳೂರಿನ ಅನೇಕ ಸ್ಕೈವಾಕ್‌ಗಳನ್ನು ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ. ಈ ಸ್ಕೈವಾಕ್‌ಗಳು ಆದಾಯವನ್ನು ಗಳಿಸುತ್ತವೆ. ನಿರ್ವಹಣೆಗೆ ಸಾಕಾಗುವುದಿಲ್ಲ ಎಂದು ಅಧಿಕಾರಿಗಳು ಹೇಳುತ್ತಾರೆ. ಅಗತ್ಯವಿದ್ದರೆ ಹೊಸದನ್ನು ನಿರ್ಮಿಸಲು ಸಹ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಈ ಬಗ್ಗೆ ತನಿಖೆ ನಡೆಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಮುಂಗಾರು ಮಳೆಯಿಂದಾಗುವ ಸಮಸ್ಯೆ ನಿಭಾಯಿಸಲು ಸಂಪೂರ್ಣ ಸನ್ನದ್ಧ : ತುಷಾರ್ ಗಿರಿನಾಥ್

“ಬಾಕಿ ಪಾವತಿಸದ ಏಜೆನ್ಸಿಗಳನ್ನು ನೂತನ ಟೆಂಡರ್‌ಗಳಲ್ಲಿ ಭಾಗವಹಿಸಲು ಅನುಮತಿಸಲಾಗುವುದಿಲ್ಲ. ಅಂತಹ ಕಂಪನಿಗಳನ್ನು ಕಪ್ಪು ಪಟ್ಟಿಗೆ ಸೇರಿಸುವ ಸಾಧ್ಯತೆಯಿದೆ” ಎಂದು ಜಾಹೀರಾತು ವಿಭಾಗದ ಬಿಬಿಎಂಪಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...