ಬೆಂಗಳೂರು | ಏಕ ಬಳಕೆಯ ನಿಷೇಧಿತ ಪ್ಲಾಸ್ಟಿಕ್ ಬಳಸುತ್ತಿರುವ ಮಳಿಗೆಗಳಿಗೆ ಬೀಗ ಜಡಿದ ಬಿಬಿಎಂಪಿ

Date:

ಬೆಂಗಳೂರಿನ ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಬಳಸುತ್ತಿದ್ದ 6 ಮಳಿಗೆಗಳಲ್ಲಿ ಪ್ಲಾಸ್ಟಿಕ್ ವಶಪಡಿಸಿಕೊಂಡು ಮಳಿಗೆಗಳಿಗೆ ಬೀಗ ಹಾಕಿ ಸೀಲ್ ಮಾಡಲಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತಿಳಿಸಿದೆ.

“ರಾಜರಾಜೇಶ್ವರಿ ನಗರದ ಜೆ.ಪಿ ಪಾರ್ಕ್ ವಾರ್ಡ್‌ನ ಮೋಹನ್ ಕುಮಾರ್ ಮುಖ್ಯ ರಸ್ತೆಯಲ್ಲಿ ಬರುವ ಮಳಿಗೆಗಳು ಹಾಗೂ ರಾಜರಾಜೇಶ್ವರಿ ನಗರ ವಾರ್ಡ್‌ನ ಐಡಿಯಲ್ ಹೋಮ್ಸ್‌ನಲ್ಲಿನ ಜವಹಾರ್‌ಲಾಲ್ ನೆಹರು ರಸ್ತೆಯಲ್ಲಿರುವ ಮಳಿಗೆಗಳಿಗೆ ಏಕ ಬಳಕೆ ಪ್ಲಾಸ್ಟಿಕ್ ಬಳಸದಂತೆ ಈಗಗಾಲೇ ಸೂಚನೆ ನೀಡಲಾಗಿತ್ತು. ಆದರೂ ಡಿ.14 ರಂದು ಪರಿಶೀಲನೆ ನಡೆಸಿದ ವೇಳೆ ಏಕ ಬಳಕೆ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡಿರುವುದನ್ನು ಗಮನಿಸಿ ಜೆಪಿ ಪಾರ್ಕ್ ವಾರ್ಡ್‌ನಲ್ಲಿ ಆರ್.ಎಸ್ ವೆಜಿಟೆಬಲ್ ಮಳಿಗೆ, ಗ್ರೀನ್ ವಾಲಿ ಫಾರಂ, ಜಾಫರ್ ಫೋಟ್ ಶಾಪ್ ಹಾಗೂ ಆರ್.ಆರ್ ನಗರ ವಾರ್ಡ್‌ನಲ್ಲಿರುವ ಮಾತಾಜಿ ಡಿಪಾರ್ಟ್‌ಮೆಂಟಲ್ ಸ್ಟೋರ್ಸ್, ಸತೀಶ್ ಸ್ಟೋರ್ಸ್, ಕನಕಶ್ರೀ ಕ್ರೀಯೇಷನ್ಸ್ ಸೇರಿ 6 ಮಳಿಗೆಗಳಿಗೆ ಬೀಗ ಹಾಕಿ ಸೀಲ್ ಮಾಡಲಾಗಿದೆ” ಎಂದು ಹೇಳಿದೆ.

ರಾಜರಾಜೇಶ್ವರಿನಗರ ವಲಯ ಆಯುಕ್ತರು, ವಲಯ ಜಂಟಿ ಆಯುಕ್ತರ ಸೂಚನೆಯಂತೆ ಬೀಗ ಹಾಕಿ ಸೀಲ್ ಮಾಡಿರುವ ಮಳಿಗೆಗಳ ಮುಂಭಾಗದಲ್ಲಿ ‘ಈ ಅಂಗಡಿ ಮಳಿಗೆಯಲ್ಲಿ ಏಕ ಬಳಕೆ ನಿಷೇದಿತ ಪ್ಲಾಸ್ಟಿಕ್ ಬಳಸದಂತೆ ಈಗಾಗಲೇ ಈ ಹಿಂದೆ ಹಲವಾರು ಬಾರಿ ಸೂಚನೆ ನೀಡಿದರೂ ಸಹ ಏಕ ಬಳಕೆ ನಿಷೇಧಿತ ಪ್ಲಾಸ್ಟಿಕ್ ಬಳಸುತ್ತಿರುವುದು ದೃಢಪಟ್ಟಿರುವುದರಿಂದ ಪ್ಲಾಸ್ಟಿಕ್ ಬ್ಯಾನ್ ನೋಟಿಫಿಕೇಶನ್ ನಿಯಮ 4(ಸಿ), 4(ಡಿ) ಹಾಗೂ 14(1) ರ ಅನ್ವಯ ಹಾಗೂ ಹಸಿರು ನ್ಯಾಯಾಧಿಕರಣ ಮಂಡಳಿ ರಾಜ್ಯಮಟ್ಟದ ಸಮಿತಿ ರವರ ನಿರ್ದೇಶನಗಳಂತೆ ಈ ಅಂಗಡಿ ಮಳಿಗೆಯನ್ನು ಮುಂದಿನ ಆದೇಶದವರೆವಿಗೂ ಪಾಲಿಕೆಯ ವತಿಯಿಂದ ಮುಚ್ಚಲಾಗಿದೆ’ ಎಂಬ ಭಿತ್ತಿಪತ್ರವನ್ನು ಅಂಟಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

₹44,400 ದಂಡ ವಸೂಲಿ

ಏಕ ಬಳಕೆ ಪ್ಲಾಸ್ಟಿಕ್ ಬಳಸುತ್ತಿದ್ದ ಬೀದಿ ಬದಿ ವ್ಯಾಪಾರಿಗಳು, ಅಂಗಡಿ ಮುಂಗಟ್ಟುಗಳು ಹಾಗೂ ಪಾದಚಾರಿ ಮಾರ್ಗ ಒತ್ತುವರಿ ಮಾಡಿಕೊಂಡಿದ್ದ ಮಳಿಗೆಗೆಗಳಿಂದ ಒಟ್ಟಾರೆ ₹44,400 ದಂಡ ವಸೂಲಿ ಮಾಡಲಾಗಿದೆ ಎಂದು ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಡಿ.17 ರಿಂದ ರಾಜ್ಯದ ನಾನಾ ಭಾಗಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಧ್ವನಿವರ್ಧಕಗಳ ಮೂಲಕ ಜಾಗೃತಿ

ಸಾರ್ವಜನಿಕರಿಗೆ ಮಾರ್ಷಲ್ ವಾಹನದ ಧ್ವನಿವರ್ಧಕದ ಮೂಲಕ ಹಾಗೂ ಪ್ರತಿದಿನ ಮನೆಮನೆಗಳಿಂದ ತ್ಯಾಜ್ಯ ಸಂಗ್ರಹಣೆ ಮಾಡುವ ಆಟೋಟಿಪ್ಪರ್‌ಗಳ ಧ್ವನಿವರ್ಧಕದ ಮೂಲಕ ನಿಷೇಧಿತ ಏಕ ಬಳಕೆಯ ಪ್ಲಾಸ್ಟಿಕ್ ಕೈಚೀಲವನ್ನು ಬಳಸದಂತೆ ಜಾಗೃತಿ ಮೂಡಿಸಿದರು.

ಪರಿಶೀಲನೆಯ ವೇಳೆ ಘನತ್ಯಾಜ್ಯ ನಿರ್ವಹಣೆ ವಿಭಾಗದ ಅಭಿಯಂತರರು ಮತ್ತು ಸಿಬ್ಬಂದಿ, ಕಾಮಗಾರಿ ವಿಭಾಗದ ಅಭಿಯಂತರರು, ಆರೋಗ್ಯ ವಿಭಾಗದ ಅಧಿಕಾರಿಗಳು, ಮಾರ್ಷಲ್‌ಗಳು ಹಾಗೂ ಸ್ಥಳೀಯ ಪೋಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...