ಬೆಂಗಳೂರು | ಪ್ರತಿ ಮನೆಯ ಕಸ ಸಂಗ್ರಹಣೆಗೆ ತಿಂಗಳಿಗೆ ₹30 ನಿಗದಿ; ಬಿಬಿಎಂಪಿಯಿಂದ ಸರ್ಕಾರಕ್ಕೆ ಪ್ರಸ್ತಾವನೆ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಮನೆಗಳಿಂದ ಕಸ ಸಂಗ್ರಹಿಸಲು ಮತ್ತು ಅದನ್ನು ವಿಲೇವಾರಿ ಮಾಡಲು ಕನಿಷ್ಠ ಸೇವಾ ಶುಲ್ಕ ₹30 ನಿಗದಿ ಮಾಡುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ನಗರದ ಮನೆಗಳಲ್ಲಿನ ಕಸವನ್ನು ಸಂಗ್ರಹಿಸಲು ಮತ್ತು ವಿಲೇವಾರಿ ಮಾಡಲು ನಾಗರಿಕರಿಗೆ ತಿಂಗಳಿಗೆ ₹30 ಕನಿಷ್ಠ ಸೇವಾ ಶುಲ್ಕ ವಿಧಿಸಲು ಬಿಬಿಎಂಪಿ ಚಿಂತನೆ ನಡೆಸಿದೆ. ಪ್ರಸ್ತಾವನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದರೆ, ಈ ನಿಯಮ ಜಾರಿಗೆ ಬರಲಿದೆ.

ನಗರದಲ್ಲಿ ಸರಿಸುಮಾರು 46 ಲಕ್ಷ ಕುಟುಂಬಗಳಿವೆ. ಈ ಮನೆಗಳು ಪಾಲಿಕೆಯ ಉದ್ದೇಶಿತ ಶುಲ್ಕ ಯೋಜನೆಯಡಿ ಬರುತ್ತವೆ. ಮಾಸಿಕ ವಿದ್ಯುತ್ ಬಳಕೆಯ ಆಧಾರದ ಮೇಲೆ ಶುಲ್ಕ ನಿಗದಿ ಮಾಡಲಾಗಿದೆ. ಅಲ್ಲದೆ, 6.32 ಲಕ್ಷಕ್ಕೂ ಹೆಚ್ಚು ವಾಣಿಜ್ಯ ಸಂಸ್ಥೆಗಳು ಉದ್ದೇಶಿತ ಶುಲ್ಕದ ಅಡಿಯಲ್ಲಿ ಬರುವ ನಿರೀಕ್ಷೆಯಿದೆ. ಈ ಎಲ್ಲದರಿಂದ ಹೊಸ ಕ್ರಮದ ಅಡಿಯಲ್ಲಿ ತಿಂಗಳಿಗೆ ₹72.39 ಕೋಟಿ ಆದಾಯ ಸಂಗ್ರಹಣೆ ಮಾಡುವ ಗುರಿ ಹೊಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 20 ಲಕ್ಷ ಮೌಲ್ಯದ ಚಿನ್ನಾಭರಣ ಕಳುವು; ಕೆಲಸದಾಕೆ ಬಂಧನ

ಮನೆ ಅಥವಾ ಕಟ್ಟಡದಲ್ಲಿ ಉತ್ಪತ್ತಿಯಾಗುವ ತ್ಯಾಜ್ಯದ ಪ್ರಮಾಣವನ್ನು ನಿರ್ಣಯಿಸಲು ಆಸ್ತಿ ತೆರಿಗೆಗಿಂತ ಭಿನ್ನವಾಗಿ ವಿದ್ಯುತ್ ಬಳಕೆಯು ಹೆಚ್ಚು ಸೂಕ್ತವಾದ ಮಾರ್ಗವಾಗಿದೆ. ಶುಲ್ಕವನ್ನು ಸಂಗ್ರಹಿಸಲು, ಬಿಬಿಎಂಪಿಯು ವಿದ್ಯುತ್ ಮಂಡಳಿಗೆ ನಿರ್ದಿಷ್ಟ ಮೊತ್ತವನ್ನು ಸೇವಾ ಶುಲ್ಕವಾಗಿ ನೀಡುವ ಮೂಲಕ ಬೆಸ್ಕಾಂ ಸಹಾಯವನ್ನು ಪಡೆಯಲಿದೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...