ಬೆಂಗಳೂರು | ಮರಗಳ ಗಣತಿಗೆ ಮುಂದಾದ ಬಿಬಿಎಂಪಿ

Date:

  • 60 ಲಕ್ಷದಿಂದ 1 ಕೋಟಿ ಮರಗಳಿವೆಯೆಂದು ಅಂದಾಜು
  • ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವ ಬಿಬಿಎಂಪಿ

ಇತ್ತೀಚೆಗೆ ಎರಡು-ಮೂರು ಬಾರಿ ಸುರಿದ ಮಳೆಗೆ ಬೆಂಗಳೂರು ನಲುಗಿಹೋಗಿದೆ. ನಗರದಲ್ಲಿ ಸುಮಾರು 50ಕ್ಕೂ ಹೆಚ್ಚು ಮರಗಳು ನೆಲಕ್ಕುರುಳಿವೆ. ಸುಮಾರು 400 ಮರಗಳ ಕೊಂಬೆಗಳು ಮುರಿದುಬಿದ್ದಿವೆ. ಈ ಬೆನ್ನಲ್ಲೇ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಮರಗಳ ಗಣತಿಗೆ ಮುಂದಾಗಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿರುವ ರಸ್ತೆ, ಉದ್ಯಾನವನ, ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳು ಹಾಗೂ ಖಾಸಗಿ ಜಾಗಗಳಲ್ಲಿ ಒಟ್ಟು 60 ಲಕ್ಷದಿಂದ 1 ಕೋಟಿ ಮರಗಳಿವೆ ಎಂದು ಅಂದಾಜಿಸಲಾಗಿದೆ. ನಿಖರವಾಗಿ ಎಷ್ಟು ಮರಗಳಿವೆ ಎಂದು ತಿಳಿಯಲು ಮರಗಳ ಗಣತಿ ನಡೆಸಲು ಬಿಬಿಎಂಪಿ ನಿರ್ಧರಿಸಿದೆ.

ಮರಗಳ ಗಣತಿ ಪ್ರಕ್ರಿಯೆಗಾಗಿ ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರದ ನೆರವಿನೊಂದು ಬಿಬಿಎಂಪಿ ಅಧಿಕಾರಿಗಳು ಆ್ಯಪ್‌ ಅಭಿವೃದ್ಧಿಪಡಿಸಿದ್ದಾರೆ. ಅದರಲ್ಲಿ, ಮರದ ಹೆಸರು, ಎತ್ತರ, ಗಾತ್ರ, ವಯಸ್ಸು ಸೇರಿದಂತೆ ಒಟ್ಟು 20 ರಿಂದ 25 ಅಂಶಗಳ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಬೆಂಗಳೂರು | ಸೋರುತಿಹುದು ಹೊಸ ಮೆಟ್ರೋ ನಿಲ್ದಾಣದ ಮಾಳಿಗೆ

ಪ್ರತಿ ಮರಗಳಿಗೂ ನಂಬರ್‌ ಕೊಡಲಾಗುತ್ತದೆ. ಅಲ್ಲದೆ, ಕ್ಯೂಆರ್‌ ಕೋಡ್‌ ಅಂಟಿಸಲಾಗುತ್ತದೆ. ಈ ಕ್ಯೂಆರ್‌ ಕೋಡ್ ಸ್ಕಾನ್‌ ಮಾಡಿದರೆ, ಮರದ ಸಂಪೂರ್ಣ ಮಾಹಿತಿ ತೆರೆದುಕೊಳ್ಳುತ್ತದೆ.

ನಗರದಾದ್ಯಂತ ಮರಗಳ ಗಣತಿ ನಡೆಸಲು ಕನಿಷ್ಠ ಒಂದು ವರ್ಷ ಸಮಯ ಬೇಕಾಗುತ್ತದೆ. ಗಣತಿ ಪ್ರಕ್ರಿಯೆಗೆ ₹6-8 ಕೋಟಿ ಖರ್ಚಾಗಬಹುದು ಎಂದು ಬಿಬಿಎಂಪಿ ಹೇಳಿದೆ.

ಮರಗಣತಿಗಾಗಿ ಸರ್ಕಾರಕ್ಕೆ ಬಿಬಿಎಂಪಿ ಪ್ರಸ್ತಾವನೆ ಸಲ್ಲಿಸಿದೆ. ಸರ್ಕಾರದ ಅನುಮತಿ ದೊರೆತ ಬಳಿಕ ಗಣತಿ ಆರಂಭಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...