ಬೆಂಗಳೂರು | ಪೊಲೀಸರನ್ನು ಆಟವಾಡಿಸಲು ರಾಜಭವನಕ್ಕೆ ಬಾಂಬ್‌ ಬೆದರಿಕೆ: ಬಂಧನ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ರಾಜಭವನದಲ್ಲಿ ಬಾಂಬ್‌ ಇಟ್ಟಿರುವುದಾಗಿ ಬೆದರಿಕೆ ಕರೆ ಮಾಡಿದ್ದ ಆರೋಪಿಯನ್ನು ಇದೀಗ ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ.

ಭಾಸ್ಕರ್ ಬಂಧಿತ ಆರೋಪಿ. ಈತ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕು ವಡ್ಡಹಳ್ಳಿ ಗ್ರಾಮದವನು. ಬಿ.ಕಾಂ ಪದವೀಧರನಾದ ಈತ ಬಾಂಬ್‌ ಬೆದರಿಕೆ ಕರೆ ಮಾಡಿ ಬಂಧನ ಭೀತಿಯಿಂದ ಆಂಧ್ರಪ್ರದೇಶದ ಚಿತ್ತೂರಿಗೆ ಪರಾರಿಯಾಗಿದ್ದನು. ಆತನ ಮೊಬೈಲ್ಕರೆಗಳ ಜಾಡು ಹಿಡಿದ ಪೊಲೀಸರು ಆತನನ್ನು ಚಿತ್ತೂರಿನಲ್ಲಿ ಬಂಧಿಸಿ ನಗರಕ್ಕೆ ಕರೆತಂದಿದ್ದಾರೆ.

ಪೊಲೀಸರು ಈತನನ್ನು ಬಂಧಿಸಿ, ವಿಚಾರಣೆ ನಡೆಸುವ ವೇಳೆ ಈತ ಆಘಾತಕಾರಿ ವಿಷಯವೊಂದನ್ನು ಹೇಳಿಕೊಂಡಿದ್ದಾನೆ. ಏನೆಂದರೆ, ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಮೇಲ್ ಬಂದಿದ್ದು ಹಾಗೂ ಪೊಲೀಸರು ತೀವ್ರ ತನಿಖೆ ನಡೆಸುತ್ತಿರುವ ಸುದ್ದಿ ತಿಳಿದಿದ್ದ ಈತ ವೈಯಕ್ತಿಕ ಕೆಲಸದ ನಿಮಿತ್ತ ಸೋಮವಾರ ಬಸ್ನಲ್ಲಿ ಬೆಂಗಳೂರಿಗೆ ಬಂದಿದ್ದನು. ಕಾರ್ಪೊರೇಷನ್ವೃತ್ತದಲ್ಲಿ ಇಳಿದು ರಾಜಭವನದತ್ತ ನಡೆದುಕೊಂಡು ಹೋಗಿದ್ದನು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವೇಳೆ, ಬೆಂಗಳೂರು ಪೊಲೀಸರನ್ನು ಆಟವಾಡಿಸಬೇಕೆಂದು ನಿರ್ಧಾರ ಮಾಡಿ, ಗೂಗಲ್‌ನಲ್ಲಿ ಎನ್‌ಐಎ ನಂಬರ್‌ ಸರ್ಚ್ ಮಾಡಿ ಪಡೆದುಕೊಂಡಿದ್ದಾನೆ.

ಅಜ್ಞಾತ ಸ್ಥಳದಿಂದ ಸೋಮವಾರ ರಾತ್ರಿ 11.30 ಸುಮಾರಿಗೆ ರಾಷ್ಟ್ರೀಯ ತನಿಖಾ ದಳದ (ಎನ್ಐಎ) ದೊಮ್ಮಲೂರಿನ ನಿಯಂತ್ರಣ ಕೊಠಡಿಗೆ ಕರೆ ಮಾಡಿ ರಾಜಭವನದಲ್ಲಿ ಬಾಂಬ್ಇಟ್ಟಿದ್ದೇವೆ. ಕೆಲವೇ ಕ್ಷಣದಲ್ಲಿ ಅದು ಸ್ಫೋಟಗೊಳ್ಳಲಿದೆಎಂದು ಬೆದರಿಕೆ ಹಾಕಿದ್ದಾನೆ. ಬೆದರಿಕೆ ಕರೆಯಿಂದ ಗಾಬರಿಯಾದ ಎನ್ಐಎ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ನಂತರ 12 ಗಂಟೆ ಸುಮಾರಿಗೆ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ, ಬೆರಳಚ್ಚು ತಜ್ಞರು ಸ್ಥಳಕ್ಕೆ ಧಾವಿಸಿ ರಾಜಭವನದ ಸುತ್ತಮುತ್ತ ಪರಿಶೀಲನೆ ನಡೆಸಿದ್ದಾರೆ. ಸಂದರ್ಭದಲ್ಲಿ ಯಾವುದೇ ಅನುಮಾನಾಸ್ಪದ ವಸ್ತುಗಳು ದೊರೆತಿಲ್ಲ. ಹೀಗಾಗಿ, ಇದೊಂದು ಹುಸಿ ಬಾಂಬ್ ಕರೆ ಎಂಬುದು ತಿಳಿದುಬಂದಿತ್ತು.

ಈ ಸುದ್ದಿ ಓದಿದ್ದೀರಾ? ಡಿಸೆಂಬರ್ 14 ರಿಂದ 22 ರವರೆಗೆ ಬೆಂಗಳೂರು-ಮಂಗಳೂರು ರೈಲು ಸಂಚಾರ ರದ್ದು

ಬೆಂಗಳೂರಿನಿಂದ ಆಂಧ್ರದ ಚಿತ್ತೂರಿನ ದೇವಸ್ಥಾನವೊಂದಕ್ಕೆ ತೆರಳಿದ್ದ ಆರೋಪಿಯ ಫೋನ್ ನಂಬರ್‌ ನೆಟ್ವರ್ಕ್ ಟ್ರ್ಯಾಕ್ ಮಾಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧ ವಿಧಾನಸೌಧ ಠಾಣೆ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...