ಬೆಂಗಳೂರು | ಕಲಾವಿದರಿಂದ ನೇರವಾಗಿ ಕಲಾಕೃತಿ ಖರೀದಿ; ಚಿತ್ರಸಂತೆಯಲ್ಲಿ ಜನವೋ ಜನ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅವರೇ ಮೇಳ, ಕಡಲೆಕಾಯಿ ಪರಿಷೆ, ಕೇಕ್ ಷೋ, ಸಿರಿಧಾನ್ಯ ಮೇಳ, ಸೇರಿದಂತೆ ಹಲವು ಸಾಂಸ್ಕ್ರತಿಕ ಕಾರ್ಯಕ್ರಮಗಳು ನಡೆಯುತ್ತಿರುತ್ತವೆ. ನಗರದ ಜನರು ವರ್ಷಪೂರ್ತಿ ಹೊಸತನ ನೋಡಲು, ಅರಿಯಲು ಈ ಸಂತೆ, ಜಾತ್ರೆ, ಮೇಳ ಹಾಗೂ ಪರಿಷೆ ಸಹಕಾರಿಯಾಗಿವೆ. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿ 21ನೇ ಚಿತ್ರಸಂತೆಯನ್ನು ಚಿತ್ರಕಲಾ ಪರಿಷತ್ತು ಆಯೋಜಿಸಿದೆ.

ಪ್ರತಿ ವರ್ಷವೂ ಚಿತ್ರಕಲಾಕಾರರು, ಚಿತ್ರಕಲಾ ಆಸ್ತಕರು ಹಾಗೂ ಅಭಿಮಾನಿಗಳು ವರ್ಷೊಕ್ಕೊಮ್ಮೆ ಬಂದು ಸೇರುವ ತಾಣ ಈ ಕುಮಾರಕೃಪಾ ರಸ್ತೆ. ವರ್ಷಕ್ಕೆ ಒಂದೇ ದಿನ ನಡೆಯುವ ಈ ಚಿತ್ರಸಂತೆಯ ವೀಕ್ಷಣೆ ಮತ್ತು ಚಿತ್ರಕಲೆಗಳನ್ನು ಕೊಳ್ಳಲು ಲಕ್ಷಾಂತರ ಜನ ಕುಮಾರ ಕೃಪಾ ರಸ್ತೆ ಕಡೆಗೆ ಮುಖ ಮಾಡುತ್ತಾರೆ. ಪ್ರತಿ ಬಾರಿಯೂ ಚಿತ್ರಸಂತೆಯಲ್ಲಿ ಕೋಟ್ಯಾಂತರ ರೂಪಾಯಿ ವ್ಯಾಪಾರ ವಹಿವಾಟು ನಡೆಯುತ್ತದೆ. ವಿಶೇಷ ಎಂದರೆ, ವರ್ಷದ ಆರಂಭದ ಮೊದಲ ಭಾನುವಾರ ಈ ಚಿತ್ರಸಂತೆ ನಡೆಯುತ್ತದೆ.

ಈ ವರ್ಷ ಜ.7ರ ಭಾನುವಾರ ಚಿತ್ರಸಂತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಚಿತ್ರಸಂತೆಯಲ್ಲಿ ಕಣ್ಮನ ಸೆಳೆವ ಕಲಾಪ್ರದರ್ಶನಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಬಿಎಂಪಿ 11

ಪ್ರತಿ ವರ್ಷ ಚಿತ್ರಸಂತೆಯ ಸಮಯದಲ್ಲಿ 1,200 ಮಳಿಗೆಗಳನ್ನು ತೆರೆಯಲಾಗುತ್ತಿತ್ತು. ಈ ಬಾರಿ ಚಿತ್ರಸಂತೆಗೆ 22 ರಾಜ್ಯಗಳ 2,726 ಕಲಾವಿದರು ಅರ್ಜಿ ಸಲ್ಲಿಸಿದ್ದರು. ಈ ಪೈಕಿ 1,581 ಪುರುಷರು, 1,145 ಮಹಿಳೆಯರಿಂದ ಅರ್ಜಿಗಳು ಬಂದಿದ್ದವು. ಕರ್ನಾಟಕದಿಂದಲೇ 1386 ಅರ್ಜಿಗಳು ಬಂದಿದ್ದವು. ಅರ್ಜಿಗಳು ಹೆಚ್ಚಾದ ಹಿನ್ನೆಲೆ 1,500 ಮಂದಿ ಕಲಾವಿದರಿಗೆ ಮಳಿಗೆ ಹಾಕಲು ಅವಕಾಶ ಮಾಡಿಕೊಡಲಾಗಿದೆ. ಶಿವಾನಂದ ವೃತ್ತದ ಮೇಲ್ಸೇತುವೆ ಕೆಳಗಡೆ 300 ಮಳಿಗೆಗಳನ್ನು ಹೆಚ್ಚುವರಿಯಾಗಿ ತೆರೆಯಲಾಗಿದೆ. ಈ ಚಿತ್ರಸಂತೆಯಲ್ಲಿ ₹100 ನಿಂದ ಲಕ್ಷಗಳವರೆಗೆ ಕಲಾಕೃತಿಗಳು ಪ್ರದರ್ಶನದಲ್ಲಿವೆ.

ಈ ಬಾರಿಯ ಚಿತ್ರಸಂತೆ ಹಲವು ವಿಶೇಷಗಳನ್ನು ಒಳಗೊಂಡಿದೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಮಾಡಿದ ಸಾಧನೆ ಹಾಗೂ ಚಂದ್ರಯಾನ–3ರ ಯಶಸ್ಸಿನಿಂದ ಈ ಬಾರಿಯ ಚಿತ್ರಸಂತೆಯನ್ನು ಭಾರತೀಯ ವಿಜ್ಞಾನಿಗಳಿಗೆ ಸಮರ್ಪಣೆ ಮಾಡಲಾಗಿದೆ.

ಚಿತ್ರಸಂತೆಯಲ್ಲಿ ಶಿವಾನಂದ ವೃತ್ತದ ಸಮೀಪದಿಂದ ವಿಂಡ್ಸರ್ ಮ್ಯಾನರ್ ಸೇತುವೆವರೆಗೆ 1,200 ಮಳಿಗೆಗಳು, ಉಳಿದ 300 ಮಳಿಗೆಗಳು ಸ್ಟೀಲ್ ಬ್ರಿಡ್ಜ್ ಕೆಳಗೆ ಹಾಗೂ ಸುತ್ತಮುತ್ತ ಇವೆ. ಇನ್ನು ಶಿವಾನಂದ ವೃತ್ತದಿಂದ ಗುರುರಾಜ ಕಲ್ಯಾಣ ಮಂಟಪದವರೆಗೆ ಸ್ಟೀಲ್ ಬ್ರಿಡ್ಜ್‌ನ ತಳಭಾಗದಲ್ಲಿ ವಿಶೇಷಚೇತನರು ಮತ್ತು ಹಿರಿಯ ನಾಗರಿಕರಿಗಾಗಿ ಕಲಾಕೃತಿಗಳ ಮಾರಾಟ ಮಳಿಗೆಗಳನ್ನು ಹಾಕಲಾಗಿದೆ.

ಚಿತ್ರಸಂತೆ

ಸಾಂಪ್ರದಾಯಿಕ ಮೈಸೂರು ಶೈಲಿಯ ಕಲೆ, ತಂಜಾಧಿವೂರು ಶೈಲಿ, ರಾಜಸ್ಥಾನಿ ಶೈಲಿ, ಮಧುಬನಿ ಶೈಲಿ, ತೈಲ ಮತ್ತು ಜಲವರ್ಣಗಳಲ್ಲಿ ರಚಿಸಿರುವ ಚಿತ್ರಗಳು, ಆಕ್ರಿಲಿಕ್, ಗಾಜಿನ ಮೇಲೆ ಬಿಡಿಸಿರುವ ಚಿತ್ರಗಳು, ಕೊಲಾಜ್, ಲಿಥೋಗ್ರಾಫ್, ಡೂಡಲ್, ಎಂಬೋಸಿಂಗ್, ವಿಡಿಯೋ ಕಲೆ, ಗ್ರಾಫಿಕ್ ಕಲೆ, ಶಿಲ್ಪ ಕಲೆ, ಇನ್ಸ್ಟಲೇಶನ್ (ಪ್ರತಿಧಿಷ್ಠಾಧಿಪನಾ ಕಲೆ), ಪರ್ಫಾರ್ಮೆನ್ಸ್ ಕಲೆ ಹೀಗೆ ನಾನಾ ಮಾಧ್ಯಮದ ಚಿತ್ರಗಳು ಒಂದೇ ಸೂರಿನಡಿ ಪ್ರದರ್ಶನದಲ್ಲಿವೆ. ಇನ್ನು ವ್ಯಂಗ್ಯಚಿತ್ರ ಪ್ರದರ್ಶನಕ್ಕೆ ಅವಕಾಶವಿದೆ. ಕುಂಚ ಅಥವಾ ಪೆನ್ಸಿಲ್‌ಗಳಿಂದ ಕಲಾರಸಿಕರ ಭಾವಚಿತ್ರಗಳನ್ನು ಸ್ಥಳದಲ್ಲಿಯೇ ರಚಿಸಿಕೊಡುವ ಕಲಾವಿದರು ಇದ್ದಾರೆ.

ಕರ್ನಾಟಕದ ಜತೆಗೆ ಕೇರಳ, ತಮಿಳುನಾಡು, ಆಂಧ್ರಪ್ರದೇಶ, ಗೋವಾ, ಮಹಾರಾಷ್ಟ್ರ, ಪಂಜಾಬ್, ಪಶ್ಚಿಮ ಬಂಗಾಳ, ಒಡಿಶಾ ಸೇರಿದಂತೆ ರಾಜ್ಯ ಹಾಗೂ ದೇಶದ ನಾನಾ ಭಾಗಗಳಿಂದ 1,500 ಕಲಾವಿದರು ಚಿತ್ರಸಂತೆಯಲ್ಲಿ ಭಾಗವಹಿಸಿ, ಕಲಾಕೃತಿಗಳನ್ನು ಪ್ರದರ್ಶಿಸಿದ್ದಾರೆ.

chitrasante1

ಪರಿಷತ್ತು ಸಂಗ್ರಹಿಸಿರುವ ತೊಗಲು ಗೊಂಬೆ ಹಾಗೂ ಮೈಸೂರಿನ ಸಾಂಪ್ರದಾಯಿಕ ಕಲಾಕೃತಿಗಳ ಪ್ರದರ್ಶನ ಪರಿಷತ್ತಿನ ಗ್ಯಾಲರಿಗಳಲ್ಲಿವೆ. ಈ ಬಾರಿಯ ಚಿತ್ರಸಂತೆಗೆ ಐದು ಲಕ್ಷದಿಂದ ಆರು ಲಕ್ಷ ಮಂದಿ ಭೇಟಿ ನೀಡುವ ಸಂಭವವಿದೆ. ಬೆಳಿಗ್ಗೆ 6ರಿಂದ ರಾತ್ರಿ 9ರವರೆಗೆ ಕುಮಾರಕೃಪಾ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಹೊಸ ತಲೆಮಾರಿಗೆ ಹಳೆಯ ನೆನಪು 6 | ಮತ್ತೆ ಪುಟಿದೆದ್ದ ಜೆಪಿನಗರ 7ನೇ ಹಂತದ ಪುಟ್ಟೇನಹಳ್ಳಿ ಪ್ರಾಚೀನ ಕೆರೆ

ಈ ದಿನ ಜತೆಗೆ ಕಲಾವಿದರ ಮಾತು

“ಕಳೆದ 22 ವರ್ಷಗಳಿಂದ ನಾನು ಚಿತ್ರಕಲಾಕೃತಿ ಮಾಡುತ್ತಿದ್ದೇನೆ. ಕಳೆದ ನಾಲ್ಕು ವರ್ಷಗಳಿಂದ ಚಿತ್ರಸಂತೆಯಲ್ಲಿ ಭಾಗಿಯಾಗುತ್ತಿದ್ದೇನೆ. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಅಷ್ಟೋಂದು ಆದಾಯ ಇಲ್ಲ. ಪೇಟಿಂಗ್‌ ನೋಡಿ ಚೆನ್ನಾಗಿದೆ ಎಂದು ಹೇಳುತ್ತಾರೆ. ಕೊಂಡುಕೊಳ್ಳುವವರ ಸಂಖ್ಯೆ ಇದೆ” ಎಂದು ಬೆಂಗಳೂರು ಮೂಲದ ಕಲಾವಿದೆ ರಚನಾ ಹೇಳಿದರು.

chitrasante 2

“ಆಕ್ಸಿಡೆಂಟ್‌ ಆದ ಬಳಿಕ ನಾನು ಕಾಲು ಕಳೆದುಕೊಂಡೆ, ಅಂದಿನಿಂದ ಸುಮ್ಮನೆ ಕುಳಿತುಕೊಳ್ಳಬಾರದು. ಏನಾದರೂ ಸಾಧನೆ ಮಾಡಬೇಕು ಎಂದು ಚಿತ್ರಕಲೆ ಕಲಿತೆ ಅಂದಿನಿಂದ ಇಂದಿನಿಂದವರೆಗೂ ಚಿತ್ರಕಲಾಕೃತಿಗಳನ್ನು ಮಾಡುತ್ತಿದ್ದೇನೆ. ಕಳೆದ ಮೂರು ವರ್ಷದಿಂದ ಚಿತ್ರಸಂತೆಯಲ್ಲಿ ಭಾಗಿಯಾಗುತ್ತಿದ್ದೇನೆ. ಇದು ಕಲಾಪ್ರೇಮಿಗಳಿಗೆ ಅವರ ಕಲಾಕೃತಿ ಮಾರಾಟ ಮಾಡಲು ಒಂದು ಉತ್ತಮ ವೇದಿಕೆಯಾಗಿದೆ” ಎಂದು ಆಕಲಾವಿದೆ ಉಷಾ ಹೇಳಿದರು.

ಜನರು ಏನಂತಾರೆ?

“ಸುಮಾರು ವರ್ಷಗಳಿಂದ ಚಿತ್ರಸಂತೆ ವೀಕ್ಷಣೆ ಮಾಡಲು ಬರುತ್ತಿದ್ದೇನೆ. ಎತ್ತ ಕಡೆ ತಿರುಗಿದರು ಸುಂದರವಾದ ಕಲಾಕೃತಿಗಳು ಕಂಗೊಳಿಸುತ್ತವೆ. ಇಲ್ಲಿರುವ ಕಲಾಕೃತಿಗಳನ್ನು ಕೊಂಡುಕೊಳ್ಳುವಷ್ಟು ಶಕ್ತಿ ನನ್ನಲಿಲ್ಲ. ನೋಡಿ ಕಣ್ತುಂಬಿಸಿಕೊಳ್ಳುತ್ತೇನೆ” ಎಂದು ವಿಜಯನಗರ ನಿವಾಸಿ ಲತಾ ಈ ದಿನ.ಕಾಮ್‌ಗೆ ಹೇಳಿದರು.

ಚಿತ್ರಸಂತೆ

“ನಾನು ಹುಬ್ಬಳ್ಳಿ ಮೂಲದವಳು. ಬೆಂಗಳೂರಿಗೆ ಬಂದು ಸುಮಾರು ವರ್ಷಗಳೇ ಕಳೆದಿವೆ. ಕಳೆದ 15 ವರ್ಷದಿಂದ ಚಿತ್ರಸಂತೆ ವೀಕ್ಷಣೆಗೆ ಬರುತ್ತಿದ್ದೇನೆ. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಚಿತ್ರಸಂತೆ ನೋಡುವುದಕ್ಕೆ ಸೊಗಸಾಗಿದೆ. ನನಗೆ ಬೇಕಾದ ಮತ್ತು ಇಷ್ಟವಾದ ಕೆಲವೇ ಪೇಂಟಿಂಗ್‌ಗಳನ್ನು ಕೊಂಡುಕೊಂಡೆ” ಎಂದು ಕಮಲಾ ಅವರು ಸಂತಸ ವ್ಯಕ್ತಡಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...