ಬೆಂಗಳೂರು ಕೇಂದ್ರ | ಕ್ರೈಸ್ತರಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಿ; ಕ್ರೈಸ್ತರ ಕನ್ನಡ ಸಂಘ ಒತ್ತಾಯ

Date:

ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರಿನ ಕೇಂದ್ರ ಲೋಕಸಭಾ ಕ್ಷೇತ್ರದಿಂದ ಸ್ವರ್ಧಿಸಲು ಕ್ರೈಸ್ತ ಧರ್ಮದವರಾದ ಬರ್ತಲೋಮಿಯೊ ಅವರಿಗೆ ಟಿಕೆಟ್ ನೀಡಬೇಕೆಂಬುದು ಅಖಿಲ ಕರ್ನಾಟಕ ಕೆಥೋಲಿಕ್‌ ಕ್ರೈಸ್ತರ ಕನ್ನಡ ಸಂಘದ ಅಧ್ಯಕ್ಷ ರಪಾಯಲ್ ರಾಜ್ ಕಾಂಗ್ರೆಸ್ ಪಕ್ಷವನ್ನು ಒತ್ತಾಯಿಸಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “ಬರ್ತಲೋಮಿಯೊ 30 ವರ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇವರ ಪಕ್ಷ ನಿಷ್ಠೆ ಮತ್ತು ಸಮಾಜ ಸೇವೆಯನ್ನು ಪರಿಗಣಿಸಬೇಕು ಹಾಗೂ ಕ್ರೈಸ್ತರಿಗೆ ಬೆಂಗಳೂರಿನ ಕೇಂದ್ರ ಲೋಕಸಭಾ ಕ್ಷೇತ್ರದಿಂದ  ಟಿಕೆಟ್ ನೀಡಬೇಕು” ಎಂದು ಆಗ್ರಹಪಡಿಸಿದರು.
“ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದಲೂ ಕ್ರೈಸ್ತರು ಕಾಂಗ್ರೆಸ್ ಪರವಾಗಿ ಎಲ್ಲಾ ಚುನಾವಣೆಗಳಲ್ಲೂ ಮತ ನೀಡಿದ್ದಾರೆ. ಅಲ್ಪ ಸಂಖ್ಯಾತರಾದ ಕ್ರೈಸ್ತರು ಅಂದಿನಿಂದಲೂ ರಾಜಕೀಯ ಪ್ರಾತಿನಿಧ್ಯದಿಂದ ವಂಚಿತರಾಗಿದ್ದಾರೆಂದು ವಿಷಾದದಿಂದ ನಮ್ಮ ಸಂಘಟನೆ ಹೇಳಬಯಸುತ್ತಿದೆ. ಆದರೂ ಶಾಂತಿ ಪ್ರಿಯರಾದ ನಮ್ಮ ಧರ್ಮಿಯರು ಯಾವುದೇ ರೀತಿಯ ಒತ್ತಡವನ್ನು ಕಾಂಗ್ರೆಸ್ ಪಕ್ಷದ ಮೇಲಾಗಲಿ ಅಥವಾ ರಾಜಕಾರಣಿಗಳ ಮೇಲಾಗಲಿ ಹೇರಿಲ್ಲ. ಶಾಂತಿಯುತವಾಗಿ ಎಲ್ಲ ಚುನಾವಣೆಗಳಲ್ಲೂ ಕ್ರೈಸ್ತ ಧರ್ಮಿಯರಿಗೆ ಸೂಕ್ತ ಸಂಖ್ಯೆಯ ಟಿಕೆಟ್ ನೀಡುವಂತೆ ಮನವಿ ಮಾಡುತ್ತಲೇ ಬಂದಿದ್ದಾರೆ. ಆದಾಗ್ಯೂ ಕಾಂಗ್ರೆಸ್ ಪಕ್ಷ ಸೂಕ್ತ ಅವಕಾಶಗಳನ್ನು ನೀಡಿಲ್ಲ ಎಂಬುದು ದುರಾದೃಷ್ಟಕರ ಸಂಗತಿ” ಎಂದರು.
“ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕ್ರೈಸ್ತ ಧರ್ಮಿಯರು ಬಹು ಸಂಖ್ಯಾತರಿದ್ದಾರೆ.  ಅಷ್ಟೇ ಅಲ್ಲ ಮುಸ್ಲಿಂರಷ್ಟೆ ಸಂಖ್ಯೆಯ ಮತದಾರರಿದ್ದಾರೆ. ಈ ಕ್ಷೇತ್ರದಿಂದ ಕ್ರೈಸ್ತ ಧರ್ಮಿಯರಿಗೆ ಲೋಕ ಸಭಾ ಟಿಕೆಟ್ ನೀಡಿದರೆ ಈ ಕ್ಷೇತ್ರದಿಂದ ಬರ್ತಲೋಮಿಯೊ ಜಯಗಳಿಸುವುದರಲ್ಲಿ ಯಾವುದೇ ಸಂಶಯವಿಲ್ಲ.  ಕಾಂಗ್ರೆಸ್ ಪಕ್ಷಕ್ಕೆ ಕ್ರೈಸ್ತರು ನೀಡಿರುವ ನಿರಂತರವಾದ ಬೆಂಬಲ ಮತ್ತು ರಾಜ್ಯಕ್ಕೆ ಕ್ರೈಸ್ತ ಮಿಷನರಿಗಳು ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ನೀಡಿರುವ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಕ್ರೈಸ್ತ ಧರ್ಮದವರಾದ ಬರ್ತಲೋಮಿಯೊ ಅವರಿಗೆ ಬೆಂಗಳೂರಿನ ಕೇಂದ್ರ ಲೋಕಸಭಾ ಕ್ಷೇತ್ರದಿಂದ ಸ್ವರ್ಧಿಸುವಂತೆ ಕಾಂಗ್ರೆಸ್ ಟಿಕೆಟ್ ನೀಡಬೇಕೆಂದರು. ಪತ್ರಿಕಾ ಗೋಷ್ಠಿಯಲ್ಲಿ ಅಖಿಲ ಕರ್ನಾಟಕ ಕಥೋಲಿಕ ಕ್ರೈಸ್ತರ ಕನ್ನಡ ಸಂಘ ಉಪಾಧ್ಯಕ್ಷ ಜಾನ್ ಬ್ರಿಟೋ ಸಂಘದ ಪದಾಧಿಕಾರಿಗಳಾದ ಮರಿಜಾನ್, ಥಾಮಸ್, ಭಾಗವಹಿಸಿದ್ದರು.
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...