ಬೆಂಗಳೂರು | ಕಸ ಸುರಿವ ‘ತೊಟ್ಟಿ’ಯಾದ ಚಿಕ್ಕಪೇಟೆ ಮುಖ್ಯ ರಸ್ತೆ!

Date:

ಬೆಂಗಳೂರಿನ ಅತಿ ಹೆಚ್ಚು ಜನನಿಬಿಡ ಪ್ರದೇಶಗಳಲ್ಲಿ ಒಂದಾದ, ವ್ಯಾಪಾರ ಚಟುವಟಿಕೆ ತಾಣವಾಗಿರುವ ಚಿಕ್ಕಪೇಟೆಯಲ್ಲಿ ರಾಶಿ ರಾಶಿ ಕಸ ಬಿದ್ದಿದೆ. ಚಿಕ್ಕಪೇಟೆಯ ಮುಖ್ಯರಸ್ತೆಯು ಕಸ ಹಾಕುವ ‘ಡಂಪಿಂಗ್ ಯಾರ್ಡ್‌’ಆಗಿ ಬದಲಾಗಿದೆ.

ಚಿಕ್ಕಪೇಟೆ ಮುಖ್ಯರಸ್ತೆಯನ್ನು ದುರಸ್ತಿ ಮಾಡಲು, ಒಂದು ಬದಿಯ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಸುಮಾರು ಮೂರು ತಿಂಗಳೇ ಕಳೆದಿವೆ. ರಸ್ತೆಯನ್ನು ಕಿತ್ತು, ಸಮತಟ್ಟು ಮಾಡಲಾಗಿದೆ. ಈ ನಡುವೆ ಕಾಮಗಾರಿ ಸ್ಥಗಿತಗೊಂಡಿದ್ದು, ಕೆಲಸಗಳು ನಡೆಯುತ್ತಿಲ್ಲ.

ಇದೇ ಸಮಯದಲ್ಲಿ ಮಳೆಯೂ ಸುರಿಯುತ್ತಿದ್ದು, ವ್ಯಾಪಾರಿಗಳಿಗೆ ರಸ್ತೆಯೇ ಕಸದ ಸುರಿಯುವ ತಾಣವಾಗಿದೆ. ಹಲವಾರು ದಿನಗಳಿಂದ ರಸ್ತೆಯಲ್ಲಿ ಕಸ ಸುರಿಯಲಾಗಿದ್ದು, ಈಗ ರಸ್ತೆ ಕಸದ ತೊಟ್ಟಿಯಾಗಿ ಮಾರ್ಪಟ್ಟಿದೆ. ಮಳೆನೀರಿನಲ್ಲಿ ತ್ಯಾಜ್ಯ ಕೊಳೆದು ವಾಸನೆ ಹರಡಲಾರಂಭಿಸಿದ. ಜೊತೆಗೆ, ಸೊಳ್ಳೆಗಳ ಹಾವಳಿಯೂ ಹೆಚ್ಚುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈಗಾಗಲೇ, ಡೆಂಗ್ಯೂ ಜ್ವರದ ಹಾವಳಿ ಬೆಂಗಳೂರಿನಲ್ಲಿ ಹೆಚ್ಚಾಗಿದ್ದು, ಜನರಲ್ಲಿ ಆತಂಕ ಹೆಚ್ಚಿಸಿದೆ. ಇಂತಹ ಸಮಯದಲ್ಲಿ ಹೆಚ್ಚು ಜನರು ಓಡಾಡುವ ಸ್ಥಳದಲ್ಲಿ ರಾಶಿ-ರಾಶಿ ಕಸ ಬಿದ್ದಿದ್ದರೂ ಅಧಿಕಾರಿಗಳು ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ಧೋರಣೆ ತಳೆದಿದ್ದಾರೆ.

ಚಿಕ್ಕಪೇಟೆಯಲ್ಲಿ ಕಸದ ರಾಶಿ ಬಿದ್ದಿರುವ ವಿಡಿಯೋವನ್ನು ಆಮ್ ಆದ್ಮಿ ಪಕ್ಷ (ಎಎಪಿ) ಹಂಚಿಕೊಂಡಿದೆ. “ಬೆಂಗಳೂರಿನ ಜನನಿಬಿಡ ಪ್ರದೇಶವಾದ ಚಿಕ್ಕಪೇಟೆಯಲ್ಲಿ ಕಸದ ರಾಶಿ ಹೀಗೆ ರಸ್ತೆ ಮೇಲೆ ಹರಡಿರುವುದಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಮತ್ತು ಬಿಬಿಎಂಪಿಗೆ ಧನ್ಯವಾದಗಳು. ಮಾನ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರೇ ಚಿಕ್ಕಪೇಟೆ ಖಾಯಿಲೆಗಳ ಗೂಡಾಗುವುದರಲ್ಲಿದೆ, ಬಿಜೆಪಿ ಎಂಎಲ್‌ಎ ಉದಯ್ ಗರುಡಾಚಾರ್ ಅವರೇ ಮನೆ ಬಿಟ್ಟು ಹೊರಗೆ ಬನ್ನಿ ಇನ್ನಾದರು ಕಾರ್ಯಪ್ರವೃತ್ತರಾಗಿ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...