ಬೆಂಗಳೂರು | ರಾಜಕಾಲುವೆಗೆ ತಡೆಗೋಡೆ ನಿರ್ಮಾಣ ; 39% ಕಾಮಗಾರಿ ಪೂರ್ಣ

Date:

  • ಸಂತ್ರಸ್ತ ನಿವಾಸಿಗಳು ₹10,000 ಧನ ಸಹಾಯ ಪಡೆಯಿರಿ ;ಬಿಬಿಎಂಪಿ
  • ಕಳೆದ ವರ್ಷ ಸಂಪೂರ್ಣ ಜಲಾವೃತವಾಗಿದ್ದ ಬೆಂಗಳೂರು ಪೂರ್ವ ಭಾಗ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಜನವರಿಯಲ್ಲಿ ರಾಜಕಾಲುವೆ ಚರಂಡಿಯ ಎರಡು ಬದಿಯಲ್ಲಿ ಕಾಂಕ್ರೀಟ್‌ ಗೋಡೆಗಳನ್ನು ಮರು ನಿರ್ಮಾಣ ಮಾಡುವ ಕಾಮಗಾರಿ ಆರಂಭಿಸಿದೆ. ಇದೀಗ 39ರಷ್ಟು ಕಾಮಗಾರಿ ಪೂರ್ಣವಾಗಿದೆ.

ಈ ವರ್ಷ ಮುಂಗಾರು ಮಳೆ ಆರಂಭಕ್ಕೂ ಮುನ್ನ ಮಳೆ ಆರಂಭವಾಗಿದ್ದು, ಬೆಂಗಳೂರಿನ ಹಲವು ಮನೆಗಳು ಮಳೆ ನೀರಿನಿಂದ ಜಲಾವೃತವಾಗಿವೆ. ಕಳೆದ ವರ್ಷ ಬೆಂಗಳೂರು ಪೂರ್ವ ಭಾಗ ಸಂಪೂರ್ಣ ಜಲಾವೃತವಾಗಿತ್ತು.

“ಕಳೆದ ವರ್ಷ ಮಳೆಯಿಂದ ಬೆಂಗಳೂರಿನ ಪೂರ್ವ ಭಾಗದಲ್ಲಿ ಪ್ರವಾಹ ಉಂಟಾಗಿತ್ತು. ನಂತರ ರಾಜ್ಯ ಸರ್ಕಾರವೂ ₹1500 ಕೋಟಿ ಯೋಜನೆಯನ್ನು ರೂಪಿಸಿತ್ತು. ಇದೀಗ ಮುಂದಿನ ಆರು ತಿಂಗಳಲ್ಲಿ ಈ ಕಾಮಗಾರಿ ಪೂರ್ಣಗೊಳ್ಳಲ್ಲಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾಲ್ಕು ದೊಡ್ಡ ಕಾಲುವೆಗಳನ್ನು ಒಳಗೊಂಡಿರುವ ನಗರವು 859 ಕಿಲೋಮೀಟರ್ ಪ್ರಾಥಮಿಕ ಚರಂಡಿಗಳನ್ನು ಹೊಂದಿದೆ. ಅದರಲ್ಲಿ 491 ಕಿಮೀ ಉದ್ದಕ್ಕೂ ಕೆಲಸ ಪೂರ್ಣಗೊಂಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ₹1,500 ಕೋಟಿಯಲ್ಲಿ 195 ಕಿಲೋಮೀಟರ್ ರಾಜಕಾಲುವೆಗಳನ್ನು ಪುನರ್‌ ಅಭಿವೃದ್ಧಿ ಮಾಡಲು ಸೂಚಿಸಿದೆ. ಅಂದಾಜಿನ ಪ್ರಕಾರ, 173 ಕಿಮೀ ದೊಡ್ಡ ಚರಂಡಿಗಳಿಗೆ ಅಡ್ಡಗೋಡೆಗಳಿಲ್ಲ” ಎಂದು ಹೇಳಿದರು.

ಪ್ರವಾಹದಿಂದ ಪೀಡಿತವಾಗಿರುವ ಪ್ರದೇಶದ ನಿವಾಸಿಗಳು ಈ ಮರು ನಿರ್ಮಾಣದ ಕಾಮಗಾರಿಯನ್ನು ಅನಗತ್ಯ ಹಾಗೂ ಅಪೂರ್ಣವಾಗಿ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

ಮಹಾಲಕ್ಷ್ಮಿ ಲೇಔಟ್ ನಿವಾಸಿ ಸತೀಶ್ ಮಾತನಾಡಿ, “ಈ ಹಿಂದೆ ನಮ್ಮ ಮನೆಗೆ ಒಂದು ಹನಿ ನೀರು ಕೂಡ ಬಂದಿರಲಿಲ್ಲ. ಬಿಬಿಎಂಪಿ ಇತ್ತೀಚೆಗೆ ಕಲ್ಲುಗಳಿಂದ ನಿರ್ಮಿಸಿದ ಚರಂಡಿಯನ್ನು ಒಡೆದು ಕಾಂಕ್ರೀಟ್ ಸಿಮೆಂಟ್ ಬಳಸಿ ಗೋಡೆ ನಿರ್ಮಿಸಲು ಆರಂಭಿಸಿದೆ. ಮುಂಗಾರು ಮಳೆ ಆರಂಭ ಆಗುವ ಮುನ್ನ ಈ ಕಾಮಗಾರಿ ಪೂರ್ಣಗೊಳಿಸಬೇಕಿತ್ತು. ಆದರೆ, ಇನ್ನೂ ಕಾಮಗಾರಿ ಪೂರ್ಣಗೊಳ್ಳದ ಕಾರಣ ನಮ್ಮ ಮನೆಯೊಳಗೆ ಪ್ರವಾಹದ ನೀರು ನುಗ್ಗಿ ತೊಂದರೆ ಅನುಭವಿಸಿದೇವು” ಎಂದು ಹೇಳಿದರು.

“ಬಿಬಿಎಂಪಿ ಚರಂಡಿ ನಿರ್ಮಿಸುವಾಗ ರಾಜಕಾಲುವೆಗಳ ಅಗಲವನ್ನು ಕಿರಿದುಗೊಳಿಸುತ್ತಿದೆ. ಬಿಬಿಎಂಪಿ ಎಂಜಿನಿಯರ್‌ಗಳು ಯೋಜನೆಯನ್ನು ಮೇಲ್ವಿಚಾರಣೆ ಮಾಡುತ್ತಿಲ್ಲ” ಎಂದು ಮಹದೇವಪುರ, ಕೆಆರ್ ಪುರಂ ಮತ್ತು ಹೆಣ್ಣೂರಿನ ನಿವಾಸಿಗಳು ಆರೋಪಿಸಿದರು.

ಮಂಗಳವಾರ ನಡೆದ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಚರಂಡಿಗಳನ್ನು ವ್ಯವಸ್ಥಿತವಾಗಿ ನಿರ್ವಹಣೆ ಮಾಡದಿದ್ದರೆ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

ಧರೆಗುರುಳಿದ 350 ಮರಗಳು

ಕಳೆದ ಮೂರು ದಿನಗಳಲ್ಲಿ ಕಬ್ಬನ್ ಪಾರ್ಕ್ ಸೇರಿದಂತೆ ಹಲವು ಪ್ರದೇಶಗಳಲ್ಲಿ 350 ಮರಗಳು ಧರೆಗುರುಳಿವೆ.

“ಭಾರೀ ಮಳೆಯಿಂದ ಬಿದ್ದಿರುವ ಮರ ಹಾಗೂ ಮರದ ಕೊಂಬೆಗಳನ್ನು ಪಾಲಿಕೆಯ ಅರಣ್ಯ ಇಲಾಖೆ ವತಿಯಿಂದ ತಂಡ ರಚಿಸಿ ಕ್ರೇನ್‌ಗಳ ಮೂಲಕ ತೆರವು ಕಾರ್ಯ ನಡೆಸಲಾಗುತ್ತಿದೆ. ಮರದ ಕೊಂಬೆಗಳನ್ನು ತ್ವರಿತಗತಿಯಲ್ಲಿ ತೆರವುಗೊಳಿಸಲು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ” ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು.

“ಕಳೆದ 5 ದಿನಗಳಿಂದ ಗಾಳಿ ಮಳೆಗೆ ಅಂದಾಜು ಒಟ್ಟಾರೆ 255 ಮರಗಳು ಹಾಗೂ ಸುಮಾರು 1050 ರೆಂಬೆ, ಕೊಂಬೆಗಳು ಬಿದ್ದಿದ್ದು, ಅವುಗಳನ್ನು ಈಗಾಗಲೇ ತೆರವುಗೊಳಿಸಲಾಗಿದೆ. ಉಳಿದಿರುವ ಸ್ವಲ್ಪ ಪ್ರಮಾಣದ ಕೊಂಬೆಗಳನ್ನು ತೆರವುಗೊಳಿಸಲಾಗುವುದು” ಎಂದರು.

“ಬೆಂಗಳೂರಿನ ಬೊಮ್ಮನಹಳ್ಳಿ, ಬಿಟಿಎಂ ಲೇಔಟ್, ಸಂಜಯ್ ನಗರ, ಮಹಾಲಕ್ಷ್ಮಿ ಲೇಔಟ್, ಡಿ.ಜಿ.ಹಳ್ಳಿ ಸೇರಿದಂತೆ ನಗರದೆಲ್ಲೆಡೆ ಹಲವು ಮನೆಗಳಿಗೆ ನೀರು ನುಗ್ಗಿದ್ದು, ಸುಮಾರು 73 ಕುಟುಂಬಗಳು ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಸಂತ್ರಸ್ತ ನಿವಾಸಿಗಳು ₹10,000 ಪರಿಹಾರ ಧನವನ್ನು ಪಡೆಯಬಹುದು” ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...