ಬೆಂಗಳೂರು | ಕಲುಷಿತ ನೀರು ಪೂರೈಕೆ; ಶುದ್ಧ ನೀರಿಗಾಗಿ ಮೈಕಲ್ ಪಾಳ್ಯ ನಿವಾಸಿಗಳ ಪರದಾಟ

Date:

  • ನೀರು ಕಲುಷಿತವಾಗುತ್ತಿರುವ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳದ ಬಿಡಬ್ಲೂಎಸ್‌ಎಸ್‌ಬಿ
  • ಇನ್ನೆರಡು ದಿನಗಳಲ್ಲಿ ಕಲುಷಿತ ನೀರಿನ ಸಮಸ್ಯೆ ಪರಿಹರಿಸಲಾಗುವುದು ಎಂದ ಅಧಿಕಾರಿ

ರಾಜ್ಯ ರಾಜಧಾನಿ ಬೆಂಗಳೂರಿನ ಇಂದಿರಾನಗರದ ಮೈಕೆಲ್ ಪಾಳ್ಯದ ನಿವಾಸಿಗಳಿಗೆ ಕಳೆದ ಮೂರು ತಿಂಗಳಿನಿಂದ ಕಲುಷಿತ ನೀರು ಸರಬರಾಜು ಆಗುತ್ತಿದ್ದು, ಈ ನೀರು ಸೇವನೆಯಿಂದ ಹಲವು ಜನರು ಅನಾರೋಗ್ಯಕ್ಕೀಡಾಗಿದ್ದಾರೆ.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲೂಎಸ್‌ಎಸ್‌ಬಿ) ನೀರು ಕಲುಷಿತವಾಗುತ್ತಿರುವ ಸಮಸ್ಯೆ ಪರಿಹರಿಸಲು ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ನಿವಾಸಿಗಳು ಆರೋಪಿಸಿದ್ದಾರೆ.

“ಸುಮಾರು 200 ಮನೆಗಳ ಮೇಲೆ ಈ ಕಲುಷಿತ ನೀರು ಪರಿಣಾಮ ಬೀರಿದೆ. ಈ ನೀರು ಕುಡಿದು ಕೆಲವು ನಿವಾಸಿಗಳು ಅನಾರೋಗ್ಯಕ್ಕೀಡಾಗಿದ್ದಾರೆ. ಈ ಬಗ್ಗೆ ಬಿಡಬ್ಲೂಎಸ್‌ಎಸ್‌ಬಿಗೆ ಪ್ರತಿ ಬಾರಿ ದೂರು ನೀಡಿದಾಗ, ಅಧಿಕಾರಿಗಳು ಬಂದು ಸಮಸ್ಯೆಯನ್ನು ಪರಿಹರಿಸಲಾಗಿದೆ ಎನ್ನುತ್ತಾರೆ. ಆದರೆ, ಮುಂದಿನ ಮೂರು ದಿನಗಳಲ್ಲಿ ಮತ್ತೆ ಸಮಸ್ಯೆ ಮರುಕಳಿಸುತ್ತದೆ. ನಿವಾಸಿಗಳು ಮತ್ತೆ ಸಂಪ್ ಮತ್ತು ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸಬೇಕಾಗಿದೆ. ಸಮಸ್ಯೆ ಬಗೆಹರಿದಿದೆ ಎಂದು ಭಾವಿಸಿ ಹಲವರು ನೀರು ಸೇವಿಸಿ ಅಸ್ವಸ್ಥರಾಗಿದ್ದಾರೆ” ಎಂದು ಸ್ಥಳೀಯ ನಿವಾಸಿ ಅಲೆಕ್ಸಾಂಡರ್ ಪಿಜೆ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಎಬ್ಲೂಎಸ್‌ಎಸ್‌ಬಿ ಕೇವಲ ತಾತ್ಕಾಲಿಕ ಕ್ರಮಗಳನ್ನು ತೆಗೆದುಕೊಂಡಿದೆ. ಮಾಲಿನ್ಯದ ಮೂಲವನ್ನು ಗುರುತಿಸಲು ವಿಫಲವಾಗಿದೆ. ಆದರೆ, ಬಿಡಬ್ಲ್ಯುಎಸ್‌ಎಸ್‌ಬಿ ಅಧಿಕಾರಿಗಳು ಈ ಬಗ್ಗೆ ಪರಿಶೀಲನೆ ನಡೆಸುತ್ತಿದ್ದು, ಎರಡು ದಿನಗಳಲ್ಲಿ ಸಮಸ್ಯೆ ಬಗೆಹರಿಸಲಾಗುವುದು ಎಂದು ತಿಳಿಸಿದ್ದಾರೆ” ಎಂದು ಮತ್ತೊಬ್ಬ ನಿವಾಸಿ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ | ಜುಲೈನಿಂದ ದ್ವಿಚಕ್ರ ವಾಹನ, ಆಟೋ ಸಂಚಾರ ನಿಷೇಧ!

“ಕಳೆದ ಮೂರು ತಿಂಗಳ ಹಿಂದೆ ಒಮ್ಮೆ ಮಾತ್ರ ಕಲುಷಿತ ನೀರು ಸರಬರಾಜು ಆಗುತ್ತಿರುವ ಬಗ್ಗೆ ವರದಿಯಾಗಿದೆ. ನಾವು ಅದನ್ನು ಸರಿಪಡಿಸಿದ್ದೇವೆ. ಇದು ಎರಡನೇ ಬಾರಿಗೆ ಸಂಭವಿಸಿದೆ. ನಾವು ಸಮಸ್ಯೆಯ ಮೂಲವನ್ನು ಗುರುತಿಸಲು ಪ್ರಯತ್ನಿಸುತ್ತಿದ್ದೇವೆ. ಇನ್ನೆರಡು ದಿನಗಳಲ್ಲಿ ಶುದ್ಧ ನೀರು ಪೂರೈಕೆಯಾಗಲಿದೆ” ಎಂದು ಬಿಡಬ್ಲ್ಯುಎಸ್‌ಎಸ್‌ಬಿ ಎಂಜಿನಿಯರ್ ಕುಮಾರ್ ನಾಯಕ್ ಎಲ್ ಹೇಳಿದರು.

“ನಿವಾಸಿಗಳಿಗೆ ಅನಾನುಕೂಲವಾಗದಂತೆ ನೋಡಿಕೊಳ್ಳಲು ಬಿಡಬ್ಲ್ಯುಎಸ್‌ಎಸ್‌ಬಿ ಟ್ಯಾಂಕರ್‌ಗಳಲ್ಲಿ ನೀರು ಸರಬರಾಜು ಮಾಡಲಾಗುತ್ತಿದೆ” ಎಂದು ಅವರು ಹೇಳಿದರು.

ಕಳೆದ ವಾರ ಇಂದಿರಾನಗರ 1ನೇ ಹಂತದಿಂದ ಇದೇ ರೀತಿಯ ಕಲುಷಿತ ನೀರಿನ ಘಟನೆಗಳು ವರದಿಯಾಗಿದ್ದವು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...