ಬೆಂಗಳೂರು | ಮಧ್ಯರಾತ್ರಿ ಬೈಕ್‌ಗೆ ಡಿಕ್ಕಿ ಹೊಡೆದು ದರೋಡೆಗೈದ ದುಷ್ಕರ್ಮಿಗಳು

Date:

  • ಪುಲಕೇಶಿನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು
  • ಸಂತ್ರಸ್ತ ಬೈಕ್‌ನಲ್ಲಿ ಮನೆಗೆ ಹಿಂತಿರುಗುತ್ತಿದ್ದಾಗ ನಡೆದ ಘಟನೆ

ಮಧ್ಯರಾತ್ರಿ ಚಲಿಸುತ್ತಿದ್ದ ಬೈಕ್‌ಗೆ ದುಷ್ಕರ್ಮಿಗಳು ಡಿಕ್ಕಿ ಹೊಡೆದು ದರೋಡೆ ಮಾಡಿರುವ ಘಟನೆ ಬೆಂಗಳೂರಿನ ಬಾಣಸವಾಡಿ ಮುಖ್ಯರಸ್ತೆಯಲ್ಲಿ ನಡೆದಿದೆ.

ಆರ್ ಟಿ ನಗರದ ಕಾವಲ್‌ ಭೈರಸಂದ್ರದ ನಿವಾಸಿ ರಾಹುಲ್ ಕನಿಕನ್(26) ಸಂತ್ರಸ್ತ. ಐಟಿಸಿ ಕಂಪನಿ ಎದುರು ಬುಧವಾರ(ಜುಲೈ 26) ಮಧ್ಯರಾತ್ರಿ 12.30ರಿಂದ 1ರ ನಡುವೆ ಈ ಘಟನೆ ನಡೆದಿದೆ.

ಆನ್‌ಲೈನ್ ಕೋರ್ಸ್ ಓದುತ್ತಿರುವ ಸಂತ್ರಸ್ತ ರಾಹುಲ್ ಸಂಜೆ 4 ಗಂಟೆ ಸುಮಾರಿಗೆ ದೊಡ್ಡ ಬಾಣಸವಾಡಿ ಮುಖ್ಯರಸ್ತೆಯ ಮುಕುಂದ ಥಿಯೇಟರ್ ಬಳಿಯಿರುವ ತನ್ನ ಸ್ನೇಹಿತರ ಮನೆಗೆ ಅಧ್ಯಯನಕ್ಕೆ ತೆರಳಿದ್ದರು. ಬೈಕ್‌ನಲ್ಲಿ ಮನೆಗೆ ಹಿಂತಿರುಗುತ್ತಿದ್ದಾಗ ಸ್ಕೂಟರ್‌ನಲ್ಲಿ ಬಂದ ಮೂವರು ಆರೋಪಿಗಳು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಬೈಕ್ ಬೀಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೈಕ್‌ನಿಂದ ಕೆಳಗೆ ಬಿದ್ದ ರಾಹುಲ್‌ನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಆಗ ಆರೋಪಿಗಳು ಹಣ ಕೊಡುವಂತೆ ಚಾಕು ತೋರಿಸಿ ಬೆದರಿಸಿದ್ದಾರೆ. ಈ ವೇಳೆ ಭಯಗೊಂಡ ಸಂತ್ರಸ್ತ ದರೋಡೆಕೋರರಿಂದ ತಪ್ಪಿಸಿಕೊಳ್ಳಲು ಅಪಾರ್ಟ್‌ಮೆಂಟ್‌ನ ಸಮುಚ್ಚಯವೊಂದಕ್ಕೆ ಓಡಿ ಹೋಗಿದ್ದಾರೆ. ರಸ್ತೆಯಲ್ಲಿ ಬಿದ್ದಿದ್ದ ರಾಹುಲ್‌ನ ಬೈಕ್ ಹಾಗೂ ಜೇಬಿನಿಂದ ಬಿದ್ದಿದ್ದ ಮೊಬೈಲ್‌ನೊಂದಿಗೆ ದರೋಡೆಕೋರರು ಪರಾರಿಯಾಗಿದ್ದಾರೆ.

ಸ್ವಲ್ಪ ದೂರದವರೆಗೆ ಬೈಕ್ ತೆಗೆದುಕೊಂಡು ಹೋದ ಆರೋಪಿಗಳು ಅದನ್ನು ಮೇಲ್ಸೇತುವೆ ಬಳಿಯ ಪಾದಚಾರಿ ಮಾರ್ಗದಲ್ಲಿ ಬಿಟ್ಟು ಹೋಗಿದ್ದರು. ಬೆಳಗ್ಗೆ ಕೃತ್ಯ ನಡೆದ ಸ್ಥಳಕ್ಕೆ ಸಂತ್ರಸ್ತ ಮತ್ತು ಆತನ ತಂದೆ ಬಂದು ನೋಡಿದಾಗ ಬೈಕ್‌ ಪತ್ತೆಯಾಗಿದೆ.

“ಘಟನೆಯಿಂದಾಗಿ ನನ್ನ ಮಗ ತೀವ್ರವಾಗಿ ಮಾನಸಿಕ ಆಘಾತಕ್ಕೊಳಗಾಗಿದ್ದಾನೆ. ಚಲಿಸುತ್ತಿದ್ದ ಬೈಕ್‌ನಿಂದ ಬಿದ್ದು ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ದೊಡ್ಡ ಅನಾಹುತ ನಡೆದಿಲ್ಲ. ಇಂತಹ ಘಟನೆಯನ್ನು ನಾವು ಎದುರಿಸುತ್ತಿರುವುದು ಇದೇ ಮೊದಲು” ಎಂದು ರಾಹುಲ್ ತಂದೆ ಮುರಳಿ ಕನಿಕನ್ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹೊಸದಾಗಿ ನಿರ್ಮಿಸಿರುವ ರಸ್ತೆಗಳಲ್ಲಿ ಗುಂಡಿಗಳು; ನಿವಾಸಿಗಳ ಆಕ್ರೋಶ

“ಆರೋಪಿಗಳು ಹಿಂದಿಯಲ್ಲಿ ಮಾತನಾಡುತ್ತಿದ್ದರು. ಅವರಲ್ಲಿ ಒಬ್ಬ ಚಾಕು ಹಿಡಿದುಕೊಂಡಿದ್ದ ಹಾಗೂ ಅವರೆಲ್ಲರೂ 20 ರಿಂದ 22 ವರ್ಷ ವಯಸ್ಸಿನವರು ಎಂದು ಸಂತ್ರಸ್ತ ಮಾಹಿತಿ ನೀಡಿದ್ದಾರೆ. ಆರೋಪಿಗಳ ಪತ್ತೆಗೆ ತನಿಖೆ ನಡೆಸಲಾಗುತ್ತಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

ಪುಲಕೇಶಿನಗರ ಪೊಲೀಸರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 392ರ ಅಡಿಯಲ್ಲಿ ದರೋಡೆ ಪ್ರಕರಣ ದಾಖಲಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...