ಬೆಂಗಳೂರು | ಚಲ್ಕೆರೆ ಕೆರೆಯಲ್ಲಿ ಮೀನುಗಳ ಮಾರಣಹೋಮ

Date:

  • ಕೊತ್ತನೂರು, ಸೀತಾರಾಮಪಾಳ್ಯ ಕೆರೆಗಳಲ್ಲಿ ಮೀನು ಸಾವನ್ನಪ್ಪುತ್ತಿರುವ ವರದಿ
  • ಒಳಚರಂಡಿಯ ನೀರು ಕೆರೆಗೆ ಹರಿಯುತ್ತಿರುವುದನ್ನು ತಡೆಯಬೇಕು: ನಡಿಗೆದಾರರು

ಬೆಂಗಳೂರಿನ ಔಟರ್ ರಿಂಗ್ ರೋಡ್ (ಒಆರ್‌ಆರ್) ಬಳಿಯ ಚಲ್ಕೆರೆ ಕೆರೆಯಲ್ಲಿ ಬುಧವಾರ ಸುಮಾರು 50 ಮೀನುಗಳು ಸಾವನ್ನಪ್ಪಿದ್ದು, ಆತಂಕ ಮೂಡಿಸಿದೆ.

ಚಲ್ಕೆರೆ ಕೆರೆಗೆ ಕೊಳಚೆ ನೀರು ಹರಿದು ಹೋಗುತ್ತಿರುವುದರಿಂದ ಮೀನುಗಳ ಸಾವನ್ನಪ್ಪುತ್ತಿವೆ. ಈ ತಿಂಗಳಲ್ಲಿ ಕೊಳಚೆ ನೀರಿನಿಂದ ಮೀನುಗಳು ಸಾವನ್ನಪ್ಪತ್ತಿರುವ ಪಟ್ಟಿಯಲ್ಲಿ ಈ ಕೆರೆ ಆರನೇ ಸ್ಥಾನದಲ್ಲಿದೆ.

ಚಲ್ಕೆರೆ ಕೆರೆಯಲ್ಲಿ ಅಲ್ಲಲ್ಲಿ ಸತ್ತ ಮೀನುಗಳು ಪತ್ತೆಯಾಗಿವೆ. ಕೆರೆಯ ನೀರಿನ ಬಣ್ಣವೂ ಕಪ್ಪು ಬಣ್ಣಕ್ಕೆ ತಿರುಗಿದ್ದು, ಮಾಲಿನ್ಯದ ಪ್ರಮಾಣವನ್ನು ಸೂಚಿಸುತ್ತಿದೆ. ಕೆರೆಯ ಸುತ್ತಮುತ್ತ ಪ್ರದೇಶಗಳನ್ನು ಸರಿಯಾಗಿ ನಿರ್ವಹಿಸದ ಕಾರಣ ಅತಿಯಾದ ಕಳೆ ಬೆಳೆದಿದೆ. ಆದರೂ, ಇಲ್ಲಿನ ವಿಹಾರಿಗಳು ಕೊಳಚೆನೀರಿನ ಹರಿವಿನ ಸಮಸ್ಯೆಯನ್ನು ಹೊರತುಪಡಿಸಿ, ಕೆರೆಯ ಸ್ಥಿತಿಯ ಬಗ್ಗೆ ಯಾವುದೇ ದೂರು ನೀಡಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೊಳಚೆ ನೀರು ಸಾಮಾನ್ಯವಾಗಿ ಕೆರೆಗೆ ಸೇರುವುದಿಲ್ಲ. ಬಿಬಿಎಂಪಿ ಡೈವರ್ಶನ್ ಚಾನೆಲ್‌ಗಳನ್ನು ಒದಗಿಸಿದೆ. ಆದರೆ, ಭಾರೀ ಮಳೆಯಾದಾಗಲೆಲ್ಲಾ ಮಳೆನೀರಿನೊಂದಿಗೆ ಕೊಳಚೆ ನೀರು ಕೆರೆಗೆ ಹರಿಯುತ್ತದೆ. ಇದು ಮೀನುಗಳ ಸಾವಿಗೆ ಕಾರಣವಾಗಬಹುದು” ಎಂದು ಕೆರೆಗೆ ನಿಯೋಜಿಸಲಾದ ಸಿಬ್ಬಂದಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

ಕಳೆದ ಒಂದು ತಿಂಗಳಿನಿಂದ ಕೊತ್ತನೂರು, ಸೀತಾರಾಮಪಾಳ್ಯ ಸೇರಿದಂತೆ ನಾನಾ ಕಡೆಗಳಲ್ಲಿ ಮೀನು ಸಾವನ್ನಪ್ಪುತ್ತಿರುವ ವರದಿ ಕಂಡುಬಂದಿದೆ.

ಕೆರೆಗಳ ಎಂಜಿನಿಯರ್ ವಿಜಯ್ ಕುಮಾರ್ ಹರಿದಾಸ್ ಮಾತನಾಡಿ, “ಈ ಕೆರೆಗಳಲ್ಲಿ ಮೀನುಗಾರಿಕೆ ವಾರ್ಷಿಕ ವಿದ್ಯಮಾನವಾಗಿದೆ. ಪ್ರತಿ ಮಳೆಗಾಲದ ಆರಂಭದಲ್ಲಿ ಕೆರೆಗಳಿಗೆ ಕೊಳಚೆ ನೀರು ಹರಿದು ಬರುತ್ತದೆ. ಇದರಿಂದ ಮೀನು ಸಾವನ್ನಪ್ಪುತ್ತಿವೆ. ಇದು ನೀರಿನ ಗುಣಮಟ್ಟದಲ್ಲಿ ಬದಲಾವಣೆಗೆ ಕಾರಣವಾಗುತ್ತದೆ” ಎಂದರು.

ಬಿಬಿಎಂಪಿಯು ಮಳೆನೀರು ಚರಂಡಿಗಳನ್ನು ಸರಿಪಡಿಸುವ ಮೂಲಕ ಒಳಚರಂಡಿಯ ನೀರು ಕೆರೆಗೆ ಪೋಲಾಗುವುದನ್ನು ತಡೆಯಬೇಕು. ಪ್ರತಿ ವರ್ಷ ಮೀನುಗಳು ಸಾಯುತ್ತಿದ್ದು, ಈ ರೀತಿ ಮುಂದೆ ಆಗದಂತೆ ಗಮನಹರಿಸಬೇಕು ಎಂದು ನಡಿಗೆದಾರರು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...