ಬೆಂಗಳೂರು | ಮದ್ಯಪಾನ ಮಾಡಿ ಶಾಲಾ ವಾಹನ ಓಡಿಸಿದ ಚಾಲಕರು; ಡಿಎಲ್ ಅಮಾನತಿಗೆ ಸೂಚನೆ

Date:

ಮಕ್ಕಳನ್ನು ಸುರಕ್ಷಿತವಾಗಿ ಶಾಲೆಯಿಂದ ಮನೆಗೆ, ಮನೆಯಿಂದ ಶಾಲೆಗೆ ತಲುಪಿಸಬೇಕಾದ ಶಾಲಾ ಬಸ್‌ ಚಾಲಕರು ವಾಹನ ಚಾಲನೆ ಮಾಡುವಾಗ ಮದ್ಯಪಾನ ಮಾಡಿ ಸಿಕ್ಕಿಬಿದ್ದ ಘಟನೆ ಮಂಗಳವಾರ ಬೆಂಗಳೂರಿನಲ್ಲಿ ನಡೆದಿದೆ.

ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ-2024 ರ ಅಂಗವಾಗಿ ಶಾಲಾ ವಾಹನ ಚಾಲಕರ ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಬೆಳಗ್ಗೆ 7ರಿಂದ 9.30ರವರೆಗೆ ಶಾಲಾ ವಾಹನಗಳ ತಪಾಸಣೆ ನಡೆಸಿದ್ದು, ಮದ್ಯಪಾನ ಮಾಡಿ ಶಾಲಾ ವಾಹನ ಓಡಿಸುತ್ತಿದ್ದ ಚಾಲಕರು ಸಂಚಾರ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಇದೀಗ ಮದ್ಯಪಾನ ಮಾಡಿ ಶಾಲಾ ವಾಹನ ಚಲಾಯಿಸುತ್ತಿದ್ದವರ ವಿರುದ್ಧ ದೂರು ದಾಖಲಾಗಿದೆ.


“ಶಾಲಾ ವಾಹನ ಚಾಲಕರ ವಿರುದ್ಧ ಬೆಳಗ್ಗೆ 7 ರಿಂದ ಬೆಳಿಗ್ಗೆ 9:30ರ ನಡುವೆ ವಿಶೇಷ ಕಾರ್ಯಾಚರಣೆ ನಡೆಸಲಾಯಿತು. ಒಟ್ಟು 3,414 ವಾಹನ ತಪಾಸಣೆ ನಡೆಸಲಾಗಿದ್ದು, 16 ಚಾಲಕರು ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿರುವುದು ಪತ್ತೆಯಾಗಿದೆ. ಅಂತಹ ಚಾಲಕರ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದೆ. ಅವರ ಡಿಎಲ್ ಅನ್ನು ಅಮಾನತುಗೊಳಿಸಲು ಆರ್‌ಟಿಒಗೆ ಕಳುಹಿಸಲಾಗಿದೆ” ಎಂದು ಬೆಂಗಳೂರು ಜಂಟಿ ಪೊಲೀಸ್ ಆಯುಕ್ತ ಎಂಎನ್ ಅನುಚೇತ್ ಅವರು ಟ್ವೀಟ್ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ | 2024-25ನೇ ಸಾಲಿನ ಆಯವ್ಯಯಕ್ಕೆ ಸಾರ್ವಜನಿಕರು ಸಲಹೆ, ಸೂಚನೆ ಸಲ್ಲಿಸಲು ಅವಕಾಶ

ಇತ್ತೀಚೆಗೆ, ಶಿಕ್ಷಣ ಇಲಾಖೆ ಶಾಲಾ ಮಕ್ಕಳನ್ನು ಕರೆತರುವ ಎಲ್ಲ ಬಗೆಯ ವಾಹನಗಳ ಚಾಲಕರು ಮತ್ತು ಸಹಾಯಕರು ಪೊಲೀಸರಿಂದ ಪಡೆದ ಸನ್ನಡತೆಯ ಪ್ರಮಾಣಪತ್ರವನ್ನು ಶಾಲಾ ಆಡಳಿತ ಮಂಡಳಿಗಳಿಗೆ ಸಲ್ಲಿಸುವುದು ಕಡ್ಡಾಯ ಎಂದು ಹೇಳಿತ್ತು.

ಹಾಗೆಯೇ, ಶಾಲಾ ಆಡಳಿತ ಮಂಡಳಿ ಮತ್ತು ಮುಖ್ಯಸ್ಥರಿಗೆ ಮಕ್ಕಳ ಸುರಕ್ಷತೆಯ ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮಕ್ಕೆ ಹಿಂದೆ ಶಿಕ್ಷಣ ಇಲಾಖೆ ಮಕ್ಕಳ ಸುರಕ್ಷತೆ ನಿಟ್ಟಿನಲ್ಲಿ ಹೊಸ ಸುತ್ತೋಲೆ ಹೊರಡಿಸಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...