ಬೆಂಗಳೂರು | ಮೀನುಗಳ ಸಾವಿನ ನಂತರವೂ ಮಡಿವಾಳ ಕೆರೆಗೆ ಹರಿದು ಬರುತ್ತಿದೆ ಕೊಳಚೆ ನೀರು

Date:

  • ಕೆರೆಗಳ ಉಸ್ತುವಾರಿ ಬಿಬಿಎಂಪಿಯ ಜವಾಬ್ದಾರಿ
  • ಅಧಿಕಾರಿಗಳ ನಿರಾಸಕ್ತಿಗೆ ಹೋರಾಟಗಾರರ ಅಸಮಾಧಾನ

ಕಳೆದ ವಾರ ಮಡಿವಾಳ ಕೆರೆಯಲ್ಲಿ ಮೀನುಗಳ ಮಾರಣಹೋಮ ನಡೆದಿದ್ದರೂ ನೀರಿನ ಗುಣಮಟ್ಟವನ್ನು ಇನ್ನೂ ಸುಧಾರಿಸಲಾಗಿಲ್ಲ. ಮಂಗಳವಾರ ಬೆಳಗ್ಗೆಯೂ ಕೆರೆಯ ದಡದಲ್ಲಿ ನೂರಾರು ಮೀನುಗಳು ಸತ್ತು ತೇಲಾಡಿವೆ. ಇಷ್ಟಾದರೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹಾಗೂ ಅರಣ್ಯ ಇಲಾಖೆ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರಿನ ಕೆರೆಗಳಿಗೆ ಕೊಳಚೆ ನೀರು ಸೇರುವುದನ್ನು ತಡೆಯುವಲ್ಲಿ ಬಿಬಿಎಂಪಿ ಹಾಗೂ ಅರಣ್ಯ ಇಲಾಖೆ ವಿಫಲವಾಗಿವೆ ಎಂದು ಕೆರೆ ಹೋರಾಟಗಾರರು ವಾಗ್ದಾಳಿ ನಡೆಸಿದ್ದಾರೆ.

ಕೆರೆಗಳ ರಕ್ಷಣೆಯಲ್ಲಿ ಅಧಿಕಾರಿಗಳ ನಿರಾಸಕ್ತಿ ಕಂಡು ಕೆರೆ ಹೋರಾಟಗಾರರು ಅಸಮಾಧಾನಗೊಂಡಿದ್ದಾರೆ. ಮಡಿವಾಳ ಕೆರೆಯ ಸುತ್ತಮುತ್ತಲಿನ ನಾಗರಿಕರೆ ಕೆರೆ ರಕ್ಷಣೆಗೆ ಮುಂದಾಗಿದ್ದಾರೆ. ಅವರೆಲ್ಲರೂ, ಮೇ 25 ರಂದು ಹಾನಿಗೊಳಗಾಗಿದ್ದ ಮಳೆನೀರು ಚರಂಡಿಯನ್ನು ಸರಿಪಡಿಸುವ ಕೆಲಸ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಮಾತನಾಡಿದ ‘ಬೆಂಗಳೂರು ಲೇಕ್ಸ್’ ಸಂಘಟನೆಯ ಮಂಜುನಾಥ್, “ಕೆರೆಗಳಲ್ಲಿ ಕೇವಲ ಮೀನು ಮಾತ್ರವಲ್ಲದೆ, ಹಲವಾರು ಜಲಚರಗಳೂ ಸಾಯುತ್ತಿವೆ. ಕೆರೆಗೆ ಸೇರುತ್ತಿರುವ ಕೊಳಚೆ ನೀರು, ಜಲಚರಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿವೆ. ಈ ಕೆರೆಗೆ ಕಾಯಕಲ್ಪ ನೀಡಲು ಕನಿಷ್ಠ ಒಂದು ವರ್ಷ ಬೇಕು” ಎಂದು ಹೇಳಿದರು.

“ಇದು ಕೇವಲ ಅರಣ್ಯ ಇಲಾಖೆಯ ಜವಾಬ್ದಾರಿಯಲ್ಲ. ಎಲ್ಲ ಅಧಿಕಾರಿಗಳು ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಹಾನಿಗೊಳಗಾದ ಚರಂಡಿಗಳ ಗೋಡೆಯನ್ನು ಸರಿಪಡಿಸಲು ಬಿಬಿಎಂಪಿಗೆ ತಿಳಿಸಲಾಗಿದೆ” ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಚಕ್ರಪಾಣಿ ವೈ ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 41 ಅಂಡರ್‌ಪಾಸ್‌ಗಳ ಸ್ಥಿತಿಗತಿ ವರದಿ ಸಿದ್ಧಪಡಿಸಿದ ಬಿಬಿಎಂಪಿ

“ಅರಣ್ಯ ಇಲಾಖೆಯು ಕೆರೆಗಳ ಒಳಹರಿವನ್ನು ನಿರ್ವಹಿಸುವುದಿಲ್ಲ. ಕೆರೆಗಳನ್ನು ನೋಡಿಕೊಳ್ಳುವುದು ಬಿಬಿಎಂಪಿಯ ಜವಾಬ್ದಾರಿಯಾಗಿದೆ” ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...