ಬೆಂಗಳೂರು | ಟ್ರಾಫಿಕ್ ಪೊಲೀಸರಿಂದ ಬೀದಿಬದಿ ವ್ಯಾಪಾರಿಗಳ ತೆರವು; ಆಕ್ರೋಶ

Date:

  • 2017ರಲ್ಲಿ ನಡೆದಿದ್ದ ಬೀದಿಬದಿ ವ್ಯಾಪಾರಿಗಳ ಸಮೀಕ್ಷೆ
  • ಬೀದಿ ವ್ಯಾಪಾರಿಗಳ ಕಾಯ್ದೆ ಉಲ್ಲಂಘಿಸಿ ವ್ಯಾಪಾರಿಗಳ ತೆರವು

ರಾಜ್ಯ ರಾಜಧಾನಿ ಬೆಂಗಳೂರಿನ ಫುಟ್‌ಪಾತ್‌ಗಳನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡ ಹಿನ್ನೆಲೆ, ‘ಮುಕ್ತ ಕಾಲುದಾರಿ’ ಅಭಿಯಾನದಡಿ ನಗರ ಸಂಚಾರ ಪೊಲೀಸರು ಸೋಮವಾರ ತೆರುವು ಕಾರ್ಯಾಚರಣೆ ನಡೆಸಿದ್ದರು. ಇದೀಗ, ಕೆಲವು ಬೀದಿಬದಿ ವ್ಯಾಪಾರಿಗಳನ್ನು ತೆಗೆದುಹಾಕಿದ್ದು, ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೋಮವಾರ ನಗರದ 48 ಸಂಚಾರ ಪೊಲೀಸ್ ಠಾಣೆಗಳು ತಮ್ಮ ವ್ಯಾಪ್ತಿಯ ಮುಖ್ಯ ರಸ್ತೆ ಹಾಗೂ ಸರ್ವಿಸ್‌ ರಸ್ತೆ ಸೇರಿದಂತೆ ಅಕ್ರಮವಾಗಿ ಫುಟ್‌ಪಾತ್‌ ಒತ್ತುವರಿ ಮಾಡಿಕೊಂಡಿದ್ದನ್ನು ತೆರವುಗೊಳಿಸಿದ್ದಾರೆ. ಹಾಗೆಯೇ, ಅಕ್ರಮವಾಗಿ ವಾಹನ ನಿಲುಗಡೆ ಮಾಡಿದನ್ನು ತೆರವು ಮಾಡಿದ್ದಾರೆ. ಇದಕ್ಕೆ ಬೀದಿಬದಿ ವ್ಯಾಪಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ಬೀದಿ ವ್ಯಾಪಾರಿಗಳ ಕಾಯ್ದೆ ಉಲ್ಲಂಘಿಸಿ ಕೆಲವು ಸ್ಥಳಗಳಿಂದ ವ್ಯಾಪಾರಿಗಳನ್ನು ತೆರವುಗೊಳಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಟೌನ್ ವೆಂಡಿಂಗ್ ಕಮಿಟಿ (ಟಿವಿಸಿ) ಸದಸ್ಯ ಹಾಗೂ ಕೆಪಿಸಿಸಿ ಬೀದಿಬದಿ ವ್ಯಾಪಾರಿಗಳ ಸಮಿತಿ ರಾಜ್ಯಾಧ್ಯಕ್ಷ ರಂಗಸ್ವಾಮಿ ಮಾತನಾಡಿ, “ಈ ಅಭಿಯಾನ ಆರಂಭಿಸುವ ಮುನ್ನ ಬೀದಿಬದಿ ವ್ಯಾಪಾರಿಗಳೊಂದಿಗೆ ಸಂಪರ್ಕಿಸಿ ತಿರ್ಮಾನಿಸಬೇಕಿತ್ತು. ಮಾರಾಟ ಸಮಿತಿಯನ್ನು ಸಂಪರ್ಕಿಸದೇ ಈ ರೀತಿ ಮಾಡುವುದು ತಪ್ಪು. ಇದು ಮುಂದುವರೆದರೆ ನಾವು ಎದುರಿಸಲು ಸಿದ್ಧರಿದ್ದೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರು ಜಿಲ್ಲಾ ಬೀದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಸದಸ್ಯ ವಿನಯ್ ಶ್ರೀನಿವಾಸ ಮಾತನಾಡಿ, “ಇದು ಕಾನೂನು ನಿಯಮದ ಉಲ್ಲಂಘನೆ. ಬಿಬಿಎಂಪಿ ಸಮೀಕ್ಷೆ ನಡೆಸದೆ ಮಾರಾಟಗಾರರನ್ನು ಹೊರಹಾಕುವುದು. ಮಾರಾಟ ವಲಯಗಳನ್ನು ರಚಿಸುವುದು ಸರಿಯಲ್ಲ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮುಂದಿನ ಐದು ದಿನ ಸಾಧಾರಣ ಮಳೆ ಸಾಧ್ಯತೆ : ಹವಾಮಾನ ಇಲಾಖೆ

“ಬೀದಿ ಬದಿ ವ್ಯಾಪಾರಿಗಳ ಕೊನೆಯ ಸಮೀಕ್ಷೆಯನ್ನು 2017ರಲ್ಲಿ ನಡೆಸಲಾಗಿತ್ತು. ಇಷ್ಟು ವರ್ಷ ಕಳೆದರೂ ಬಿಬಿಎಂಪಿ ಇನ್ನೂ ಸಮೀಕ್ಷೆ ಆರಂಭಿಸುತ್ತಿಲ್ಲ. ಯಾವುದೇ ಸೂಚನೆ ನೀಡದೆ ಬೀದಿಬದಿ ವ್ಯಾಪಾರಿಗಳನ್ನು ಹೊರಹಾಕಲು ಸಂಚಾರ ಪೊಲೀಸರು ಸೇರಿದಂತೆ ಯಾರಿಗೂ ಅವಕಾಶವಿಲ್ಲ” ಎಂದು ಹೇಳಿದರು.

ಜಂಟಿ ಪೊಲೀಸ್ ಆಯುಕ್ತ (ಸಂಚಾರ) ಎಂ.ಎನ್.ಅನುಚೇತ್ ಮಾತನಾಡಿ, “ಅಕ್ರಮವಾಗಿ ನಿಲುಗಡೆ ಮಾಡಿರುವ ವಾಹನಗಳು ಮತ್ತು ಫುಟ್‌ಪಾತ್‌ಗಳನ್ನು ಅತಿಕ್ರಮಿಸಿರುವವರನ್ನು ಮಾತ್ರ ತೆಗೆದುಹಾಕುತ್ತಿದ್ದೇವೆ. ಡ್ರೈವ್ ಸಮಯದಲ್ಲಿ ನಾವು ಎಲ್ಲೆಲ್ಲಿ ಮಾರಾಟಗಾರರನ್ನು ಕಂಡುಕೊಂಡಿದ್ದೇವೆ. ಅವರನ್ನು ಬಿಬಿಎಂಪಿಯ ಅನುಮತಿಯೊಂದಿಗೆ ಬೇರೆ ಸ್ಥಳಕ್ಕೆ ಸ್ಥಳಾಂತರಿಸಿದ್ದೇವೆ. ಆದ್ದರಿಂದ ಪಾದಚಾರಿಗಳ ಚಲನೆಗೆ ತೊಂದರೆಯಾಗುವುದಿಲ್ಲ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...