ಬೆಂಗಳೂರು | ಟ್ರಾಫಿಕ್ ಸಮಸ್ಯೆಗೆ ‘ದಟ್ಟಣೆ ಶುಲ್ಕ’ ನಿಗದಿ ಮಾಡಲು ತಜ್ಞರ ಸಲಹೆ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಹನ ಸಂಚಾರ ದಟ್ಟಣೆ ಸಮಸ್ಯೆಯು ಅಂತಾರಾಷ್ಟೀಯ ಮಟ್ಟದಲ್ಲಿ ಸದ್ದು ಮಾಡಿದೆ. ನಿತ್ಯ ಕೆಲಸಕ್ಕೆ ತೆರಳುವವರು, ಶಾಲಾ-ಕಾಲೇಜುಗಳಿಗೆ ತೆರಳುವವರು ಈ ಟ್ರಾಫಿಕ್ ಸಮಸ್ಯೆಯಿಂದ ಹೈರಾಣಾಗಿದ್ದಾರೆ. ಇದೀಗ, ಈ ಸಮಸ್ಯೆಯನ್ನು ಪರಿಹರಿಸಲು ವಾಹನಗಳ ಮೇಲೆ ‘ದಟ್ಟಣೆ ಶುಲ್ಕ’ ವಿಧಿಸುವ ಕಲ್ಪನೆಯನ್ನು ಮೊಬಿಲಿಟಿ ತಜ್ಞರು ಮುಂದಿಟ್ಟಿದ್ದಾರೆ.

ಸಾರ್ವಜನಿಕರ ಮೇಲೆ ಹೇರುವ ಶುಲ್ಕವನ್ನು ಸಾರ್ವಜನಿಕ ಸಾರಿಗೆಯನ್ನು ಒದಗಿಸಲು ಮತ್ತು ಸುಧಾರಿಸಲು ಬಳಸಬೇಕು ಎಂದು ಸಲಹೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಕೇವಲ 10 ಕಿಲೋ ಮೀಟರ್ ಪ್ರಯಾಣ ಮಾಡುವುದಕ್ಕೆ ಗಂಟೆಗಟ್ಟಲೆ ಸಮಯ ತೆಗೆದುಕ್ಕೊಳ್ಳುತ್ತಿದೆ. ಇತ್ತೀಚೆಗೆ ಸಾಲು ಸಾಲು ರಜೆಗಳು ಇರುವ ಹಿನ್ನೆಲೆ, ಲಕ್ಷಾಂತರ ಜನ ತಮ್ಮ ಊರುಗಳಿಗೆ ತೆರಳಲು ಒಮ್ಮೆಲೆ ರಸ್ತೆಗೆ ಇಳಿದಿದ್ದರು. ಈ ವೇಳೆ 8 ಕಿ.ಮೀ ಕ್ರಮಿಸಲು ಬರೋಬ್ಬರಿ 3 ಗಂಟೆಗೂ ಹೆಚ್ಚು ಸಮಯ ಟ್ರಾಫಿಕ್‌ನಲ್ಲಿ ಸಿಲುಕಿದ್ದರು. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೋವಿಡ್ ಕಾಲದಲ್ಲಿ ಹಲವಾರು ಐಟಿ ಕಂಪನಿಗಳು ವರ್ಕ್‌ ಫ್ರಂ ಹೋಮ್ ನೀಡಿದ್ದವು. ಈಗ ಸಾಂಕ್ರಾಮಿಕ ರೋಗ ಹತೋಟಿಗೆ ಬಂದ ಕಾರಣ ಇತ್ತೀಚಿನ ದಿನಗಳಲ್ಲಿ ಟೆಕ್ ಕಂಪನಿಗಳು ವರ್ಕ್‌ ಫ್ರಂ ಹೋಂ ಪರಿಪಾಠ ಮುಗಿಸಿವೆ. ಇದರಿಂದ ಸಾಮಾನ್ಯವಾಗಿ ಜನರು ತಮ್ಮ ಕೆಲಸಗಳಿಗೆ ತೆರಳಲು ಸ್ವಂತ ವಾಹನದಲ್ಲಿ ರಸ್ತೆಗೆ ಇಳಿಯುತ್ತಿದ್ದಾರೆ. ಇದರಿಂದ ಸಾಮಾನ್ಯವಾಗಿ ಟ್ರಾಫಿಕ್ ಹೆಚ್ಚಳವಾಗುತ್ತಿದೆ.

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‌ಸಿ)ಯ ಸಸ್ಟೈನಬಲ್ ಟ್ರಾನ್ಸ್‌ಪೋರ್ಟೇಶನ್ ಲ್ಯಾಬ್‌ನ ಸಂಚಾಲಕ ಪ್ರೊ. ಆಶಿಶ್ ವರ್ಮಾ ಅವರು ‘ಎಜಿಲ್ & ಸಸ್ಟೈನಬಲ್ ಮೊಬಿಲಿಟಿ ಫಾರ್ ಆಲ್’ ವರದಿಯನ್ನು ‘ಬ್ರ್ಯಾಂಡ್ ಬೆಂಗಳೂರು’ ಅಭಿಯಾನದ ‘ಮೊಬಿಲಿಟಿ ವರ್ಟಿಕಲ್’ ಅಡಿಯಲ್ಲಿ ಸಲ್ಲಿಸಿದ್ದಾರೆ.

ಸಂಚಾರ ದಟ್ಟಣೆಯ ಬಗ್ಗೆ ಮಾತನಾಡಿದ ಅವರು, “ಕಳೆದ ವಾರ ಹೊರ ವರ್ತುಲ ರಸ್ತೆಯಲ್ಲಿ ಸಂಚಾರ ದಟ್ಟಣೆ, ಜನದಟ್ಟಣೆ ಉಂಟಾಗಿತ್ತು. ಪ್ರಯಾಣದ ಬೇಡಿಕೆ, ಲಭ್ಯವಿರುವ ಮೂಲಸೌಕರ್ಯ ಮತ್ತು ಸೇವಾ ಪೂರೈಕೆಯ ನಡುವಿನ ವ್ಯಾಪಕ ಅಂತರ, ಏಕರೂಪದ ರಸ್ತೆ, ಅವೈಜ್ಞಾನಿಕ ಸಂಚಾರ ನಿರ್ವಹಣೆ, ಕಾರು ಮತ್ತು ದ್ವಿಚಕ್ರ ವಾಹನ ಬಳಕೆದಾರರ ಪ್ರಾಬಲ್ಯ ಇವೆಲ್ಲವೂ ಸಂಚಾರ ದಟ್ಟಣೆಗೆ ಕಾರಣವಾಗಿದೆ” ಎಂದು ಹೇಳಿದರು. 

“ದಟ್ಟಣೆಯ ಸಮಯದಲ್ಲಿ ಅಥವಾ ದಟ್ಟಣೆಯ ಪ್ರದೇಶಗಳಲ್ಲಿ ಪ್ರಯಾಣಿಸುವ ರಸ್ತೆ ಬಳಕೆದಾರರಿಗೆ ‘ದಟ್ಟಣೆ ಬೆಲೆ’ ನಿಗದಿ ಮಾಡಬೇಕು. ಇದರಿಂದ ವೈಯಕ್ತಿಕ ವಾಹನಗಳ ಬಳಕೆ ಕಡಿಮೆಯಾಗಬಹುದು. ಮೂಲಸೌಕರ್ಯ ಮತ್ತು ಸೇವೆಗಳನ್ನು ಸಮಾನಾಂತರವಾಗಿ ಸುಧಾರಿಸುವುದು. ದಟ್ಟಣೆ ಶುಲ್ಕವು ವೈಯಕ್ತಿಕ ವಾಹನಗಳ ಬಳಕೆಯನ್ನು ಕಡಿಮೆಗೊಳಿಸುವ ಪ್ರಮುಖ ಕಾರ್ಯತಂತ್ರವಾಗಿದೆ. ಸಾರ್ವಜನಿಕ ಸಾರಿಗೆ, ವಾಕಿಂಗ್, ಸೈಕ್ಲಿಂಗ್ ಮೂಲಸೌಕರ್ಯವನ್ನು ಸುಧಾರಿಸುವಾಗ ಶುಲ್ಕಗಳನ್ನು ಏಕಕಾಲದಲ್ಲಿ ಜಾರಿಗೊಳಿಸಬೇಕು” ಎಂದು ವರ್ಮಾ ಹೇಳಿದರು.

“ಹಣ ಪಾವತಿಸಲು ಸಿದ್ಧರಿರುವವರು ತಾವು ತಲುಪಬೇಕಾದ ಸ್ಥಳವನ್ನು ತಲುಪಲು ಸಂಚಾರ ಮುಕ್ತ ರಸ್ತೆಯನ್ನು ಪಡೆಯುತ್ತಾರೆ. ಟ್ರಾಫಿಕ್ ಮುಕ್ತ ರಸ್ತೆಗಳು ತ್ವರಿತ ಬಸ್ ಸೇವೆಗಳಿಗೆ ದಾರಿ ಮಾಡಿಕೊಡುತ್ತವೆ. ಇಷ್ಟವಿಲ್ಲದವರಿಗೆ ಅಥವಾ ಪಾವತಿಸಲು ಸಾಧ್ಯವಾಗದವರಿಗೆ ವಿಶ್ವಾಸಾರ್ಹ ಪರ್ಯಾಯವನ್ನು ನೀಡುತ್ತದೆ” ಎಂದು ಅರ್ಬನ್ ಮೊಬಿಲಿಟಿ ತಜ್ಞೆ ಶ್ರೇಯಾ ಗಡೇಪಲ್ಲಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ನಾಯಿಗಳ ಸಮೀಕ್ಷೆ ನಡೆಸಿರುವ ವರದಿ ಬಿಡುಗಡೆ ಮಾಡಿದ ಬಿಬಿಎಂಪಿ

“ಲಂಡನ್‌ನಲ್ಲಿ ದಟ್ಟಣೆಯ ಬೆಲೆ ವಲಯಕ್ಕೆ ಪ್ರವೇಶಿಸುವ ಕಾರುಗಳ ಸಂಖ್ಯೆಯು ಶೇಕಡಾ 33ರಷ್ಟು ಕಡಿಮೆಯಾಗಿದೆ. ಬಸ್ ಸವಾರರ ಸಂಖ್ಯೆ ಶೇಕಡಾ 38ರಷ್ಟು ಹೆಚ್ಚಾಗಿದೆ. ಸಿಂಗಾಪುರ ನಗರದ ರಸ್ತೆಗಳಲ್ಲಿ ಸರಾಸರಿ ಟ್ರಾಫಿಕ್ ವೇಗವನ್ನು ಗಂಟೆಗೆ 20-30 ಕಿಲೋಮೀಟರ್‌ನಲ್ಲಿ ಇರಿಸುವಲ್ಲಿ ಯಶಸ್ವಿಯಾಗಿದೆ. ಇದು ಭಾರತೀಯ ಮಹಾನಗರಗಳಾದ ಮುಂಬೈ, ದೆಹಲಿ, ಬೆಂಗಳೂರು, ಚೆನ್ನೈ ಮತ್ತು ಹೈದರಾಬಾದ್‌ನಲ್ಲಿ ದಟ್ಟಣೆ ಬೆಲೆಯನ್ನು ಜಾರಿಗೆ ತರಲು ಇದು ಸೂಕ್ತ ಸಮಯವಾಗಿದೆ” ಎಂದು ಹೇಳಿದರು.

ಮಾಜಿ ಅಧಿಕಾರಿ ಕೆ.ಜೈರಾಜ್ ಮಾತನಾಡಿ, “ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗಳನ್ನು ಗಮನಿಸಿದರೆ ದಟ್ಟಣೆ ಶುಲ್ಕ ವಿಧಿಸುವುದು ಅನಿವಾರ್ಯವಾಗಿದೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...