ಬೆಂಗಳೂರು | ಮಹಿಳೆಯ ಕೈ-ಕಾಲು ಕಟ್ಟಿಹಾಕಿ ದರೋಡೆ; ಐವರ ಬಂಧನ

Date:

ಹಣದ ಆಸೆಗೆ ಬಿದ್ದು ಸ್ನೇಹಿತೆಯ ಮನೆಯಲ್ಲಿ ಹಗಲು ಹೊತ್ತಲ್ಲೇ ಮಹಿಳೆಯ ಕೈ-ಕಾಲು ಕಟ್ಟಿ ಹಾಕಿ, ದರೋಡೆ ಮಾಡಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಗುರು, ರುದ್ರೇಶ್, ಸಂದೀಪ್, ಪ್ರಭಾವತಿ ಹಾಗೂ ರೇಣುಕಾ ಬಂಧಿತರು. ಗುರು ಮತ್ತು ರೇಣುಕಾ ಇಬ್ಬರು ಪತಿ-ಪತ್ನಿಯರಾಗಿದ್ದಾರೆ. ಆರೋಪಿಗಳು ಅನುಶ್ರೀ ಎಂಬ ಮಹಿಳೆಯನ್ನು ಕಟ್ಟಿ ಹಾಕಿ, ಆಕೆಯ ಮನೆಯಲ್ಲಿ ದರೋಡೆ ಮಾಡಿದ್ದಾರೆ.

ಏನಿದು ಪ್ರಕರಣ?   

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಡಿದ ಸಾಲ ತೀರಿಸೋಕೆ ಅಡ್ಡ ದಾರಿ ಹಿಡಿದ ರೇಣುಕಾ ಹಣದ ಆಸೆಗೆ ಬಿದ್ದು ತನ್ನ ಸ್ನೇಹಿತೆ ಬಳಿಯೇ ಹಣ ದೋಚಲು ಸಂಚು ರೂಪಿಸಿದ್ದಾಳೆ.

ತನ್ನ ಗ್ಯಾಂಗ್​ನೊಂದಿಗೆ ಜನವರಿ‌ 14ರ ಬೆಳಗ್ಗೆ 9.20 ಗಂಟೆ ಸುಮಾರಿಗೆ ಕೊಡಿಗೆಹಳ್ಳಿ ಸಮೀಪದ ತಿಂಡ್ಲು ಸರ್ಕಲ್​ನಲ್ಲಿ ಇರುವ ಗಂಗಾ ಆಯುರ್ವೇದಿಕ್ ಮಸಾಜ್ ಸೆಂಟರ್​ಗೆ ಮಸಾಜ್ ಥೆರಪಿಗೆಂದು ಬಂದಿದ್ದರು. ಬಳಿಕ ಅನುಶ್ರೀ ಎಂಬ ಮಹಿಳೆಯ ಮುಖಕ್ಕೆ ಕೆಮಿಕಲ್ ಇದ್ದ ಕರ್ಚಿಫ್ ಇಟ್ಟು, ಕೈ-ಕಾಲು ಕಟ್ಟಿ ಹಾಕಿ ಮಹಿಳೆಯ ಮಾಂಗಲ್ಯ ಸರ ಸೇರಿದಂತೆ ಚಿನ್ನಾಭರಣ ಕಸಿದು ಪರಾರಿಯಾಗಿದ್ದರು.

ರೇಣುಕಾ ಮತ್ತು ಆಕೆಯ ಪತಿ ದರೋಡೆ ಮಾಡಲು ಹಿಂದಿನ ದಿನವೇ ಮಸಾಜ್ ಸೆಂಟರ್‌ಗೆ ಬಂದು ಹೊಂಚು ಹಾಕಿದ್ದರು. ಮಸಾಜ್ ಸೆಂಟರ್‌ನಲ್ಲಿ ಥೆರಫಿಸ್ಟ್ ಒಬ್ಬಳೇ ಇದ್ದಾಗ ದರೋಡೆ ಮಾಡಲು ಬೆಳಗ್ಗೆ 8:30ರ ಸುಮಾರಿಗೆ ಮಸಾಜ್ ಸೆಂಟರ್‌ಗೆ ಎರಡು ಪಲ್ಸರ್ ಬೈಕ್‌ನಲ್ಲಿ ಗ್ಯಾಂಗ್ ಬಂದಿತ್ತು. ಗುರು, ಪ್ರಭಾವತಿ, ರುದ್ರೇಶ್, ಸಂದೀಪ್ ಗಂಗಾ ಆಯುರ್ವೇದಿಕ್ ಮಸಾಜ್ ಸೆಂಟರ್ ಬಳಿ ಗಾಡಿ ನಿಲ್ಲಿಸಿದರು. ಬಳಿಕ ಥೆರಫಿಸ್ಟ್ ಅನುಶ್ರೀ ಒಬ್ಬರೇ ಇದ್ದದನ್ನು ಗಮನಿಸಿ ಒಳಗೆ ಬಂದು ಮಸಾಜ್ ಮಾಡಿಸಿಕೊಳ್ಳಲು ದರದ ಮಾಹಿತಿ ನೀಡಿ ಎಂದು ಚರ್ಚಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚುನಾವಣೆ ಸಮಯದಲ್ಲಿ ಕೋಮುಗಲಭೆ ಆಗದಂತೆ ನೋಡಿಕೊ‌ಳ್ಳಿ: ಸಿದ್ದರಾಮಯ್ಯ ಖಡಕ್‌ ಸೂಚನೆ

ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಡಿಗೆಹಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಸದ್ಯ ವಿಚಾರಣೆ ಮುಂದುವರೆದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...