ಬೆಂಗಳೂರು | ಶಂಕಿತ ಉಗ್ರರಿಗೆ ವಿದೇಶದಿಂದ ಬಂದ ಗ್ರೆನೇಡ್ ; ಸಿಸಿಬಿ ತನಿಖೆ

Date:

  • ಪತ್ತೆಯಾದ ಗ್ರೆನೇಡ್‌ ಪರಿಶೀಲನೆ ನಡೆಸುತ್ತಿರುವ ಬಿಡಿಟಿಎಸ್‌ ಹಾಗೂ ಎಫ್‌ಎಸ್‌ಎಲ್ ತಜ್ಞರು
  • ಐವರು ಶಂಕಿತ ಉಗ್ರರ ಪೈಕಿ ಮುದಾಸಿರ್ ಮತ್ತು ಉಮರ್ ಬೆಂಗಳೂರಿನಲ್ಲಿ ಡ್ರಗ್ಸ್ ಮಾರಾಟ

ರಾಜಧಾನಿ ಬೆಂಗಳೂರಿನ 10 ಕಡೆ ಸ್ಪೋಟ ನಡೆಸಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರ ಬಂಧನಕ್ಕೆ ಸಂಬಂಧಿಸಿದಂತೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ದಿನಕ್ಕೊಂದು ಮಾಹಿತಿ ಹೊರಬೀಳುತ್ತಿದೆ. ಇದೀಗ, ಶಂಕಿತ ಉಗ್ರರ ಮನೆಯಲ್ಲಿ ಪತ್ತೆಯಾದ ಗ್ರೆನೇಡ್ ವಿದೇಶದಿಂದ ಬಂದಿರುವುದು ತನಿಖೆಯಿಂದ ತಿಳಿದುಬಂದಿದೆ.

ಶಂಕಿತ ಉಗ್ರರ ಮನೆಯಲ್ಲಿ ಪತ್ತೆಯಾದ ಗ್ರೆನೇಡ್‌ಗಳನ್ನು ಬಿಡಿಟಿಎಸ್‌ ಹಾಗೂ ಎಫ್‌ಎಸ್‌ಎಲ್ ತಜ್ಞರು ಪರಿಶೀಲನೆ ನಡೆಸುತ್ತಿದ್ದಾರೆ. ಗ್ರೆನೇಡ್‌ ಮತ್ತು ಪಿಸ್ತೂಲ್‌ಗಳು ಶಂಕಿತ ಉಗ್ರರಿಗೆ ಕೊರಿಯರ್ ಮೂಲಕ ಬಂದು ಸೇರುತ್ತಿದ್ದವು.

ಪ್ರಮುಖ ಆರೋಪಿಗಳಾದ ನಜೀರ್​ ಮತ್ತು ಜುನೈದ್ ಗ್ರೆನೇಡ್ ಮತ್ತು ಪಿಸ್ತೂಲ್ ಬಗ್ಗೆ ಯಾರಿಗೂ ತಿಳಿಸದಂತೆ ಹಾಗೂ ಕೊರಿಯರ್ ಬಂದದನ್ನು ಪ್ಯಾಕ್ ತೆರೆಯದೆ ಹಾಗೇ ಸಂಗ್ರಹಿಸಿಡಲು ಶಂಕಿತ ಉಗ್ರರಿಂದ ಪ್ರಮಾಣ ಮಾಡಿಸಿಕೊಂಡಿದ್ದರೆಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಮುಖ ಆರೋಪಿಗಳಾದ ನಜೀರ್ ಮತ್ತು ಜುಲೈದ್ ಮಾತಿನಂತೆ ಶಂಕಿತ ಐವರು ಉಗ್ರರು ಗ್ರೆನೇಡ್ ಮತ್ತು ಪಿಸ್ತೂಲ್‌ಗಳ ಪಾರ್ಸೆಲ್‌ಗಳನ್ನು ಹಾಗೆಯೇ ಸಂಗ್ರಹಿಸಿಡುತ್ತಿದ್ದರು. ಆದರೆ, ಕೃತ್ಯದ ಯೋಜನೆ, ಸಂಚನ್ನು ಬೇರೆ ತಂಡ ರೂಪಿಸುತ್ತಿದ್ದ ಅಂಶ ತನಿಖೆಯಲ್ಲಿ ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಚಾಕುವಿನಿಂದ ಇರಿದು ಅಡುಗೆ ಭಟ್ಟನ ಕೊಲೆ

ಐವರು ಶಂಕಿತ ಉಗ್ರರ ಪೈಕಿ ಮುದಾಸಿರ್ ಮತ್ತು ಉಮರ್ ಬೆಂಗಳೂರಿನಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದರು ಎಂದು ಸಿಸಿಬಿ ತನಿಖೆ ವೇಳೆ ತಿಳಿದುಬಂದಿದೆ.

ಸಿಸಿಬಿ ಪೊಲೀಸರು ಹಲವು ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ. ಶಂಕಿತ ಉಗ್ರ ಮುದಾಸಿರನ ಪ್ರಿಯತಮೆಯನ್ನು ವಿಚಾರಣೆಗೆ ಒಳಪಡಿಸಿದಾಗ ಡ್ರಗ್ಸ್‌ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.  

ಮುದಾಸಿರ್​ ತಾನು ಹೇಳಿದವರಿಗೆ ಡ್ರಗ್ಸ್‌ ನೀಡಬೇಕು ಎಂದು ತನ್ನ ಪ್ರಿಯತಮೆಗೆ ಹೇಳುತ್ತಿದ್ದನು. ಪ್ರಿಯತಮ ಮುದಾಸಿರ್​ ಹೇಳಿದವರಿಗೆ ಯುವತಿ ಡ್ರಗ್ಸ್​ ನೀಡುತ್ತಿದ್ದಳು.

ಮುದಾಸಿರ್​ ಬಂಧನವಾದ ದಿನ ಗೆಳತಿಗೆ ಡ್ರಗ್ಸ್​​ ಕೊಟ್ಟು ಮಾರಾಟ ಮಾಡಲು ಹೇಳಿದ್ದನು ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...