ಬೆಂಗಳೂರು | ಶಂಕಿತರಿಂದ ವಶಪಡಿಸಿಕೊಂಡ ಗ್ರೆನೇಡ್‌ಗಳು ಭಾರತದಲ್ಲಿ ತಯಾರಿಸಿಲ್ಲ: ಸಿಸಿಬಿ

Date:

ಬೆಂಗಳೂರಿನಲ್ಲಿ ಸ್ಪೋಟ ನಡೆಸಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರ ಮನೆಯಲ್ಲಿ ಪತ್ತೆಯಾದ ಗ್ರೆನೇಡ್‌ ಭಾರತದಲ್ಲಿ ತಯಾರಿಸಿದ್ದಲ್ಲ, ಬದಲಾಗಿ ಹೊರಗಡೆಯಿಂದ ಕಳ್ಳಸಾಗಣೆ ಮಾಡಲಾಗಿದೆ ಎಂದು ಬೆಂಗಳೂರು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ತಿಳಿಸಿದ್ದಾರೆ.

ಸೈಯದ್ ಸುಹೇಲ್ ಖಾನ್ (24), ಮೊಹಮ್ಮದ್ ಉಮರ್ (29), ಜಾಹಿದ್ ತಬ್ರೇಜ್ (25), ಸೈಯದ್ ಮುದಾಸೀರ್ ಪಾಷಾ (28) ಮತ್ತು ಮೊಹಮ್ಮದ್ ಫಿಜಲ್ ರಬ್ಬಾನಿ (30) ಅವರನ್ನು ಜುಲೈ 20ರಂದು ಸಿಸಿಬಿ ಪೊಲೀಸರು ಬಂಧಿಸಿದ್ದರು.

ಬಂಧಿತರಿಂದ ನಾಲ್ಕು ಜೀವಂತ ಗ್ರೆನೇಡ್‌ಗಳು, ಏಳು ದೇಶಿ ನಿರ್ಮಿತ ಪಿಸ್ತೂಲ್‌ಗಳು, 45 ಬುಲೆಟ್‌ಗಳು, ವಾಕಿ-ಟಾಕಿಗಳು ಹಾಗೂ ಇನ್ನಿತರ ವಸ್ತುಗಳು ಮತ್ತು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವರು ಬೆಂಗಳೂರಿನ 10 ಕಡೆ ಸ್ಪೋಟ ನಡೆಸಲು ಯೋಜನೆ ರೂಪಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಲ್ಲ (ಗ್ರೆನೇಡ್‌ಗಳು) ಶಂಕಿತ ಉಗ್ರರ ಮನೆಯಲ್ಲಿ ಪತ್ತೆಯಾಗಿದ್ದವು. ಸ್ಪೋಟ ನಡೆಸಲು ಸಿದ್ಧವಾಗಿದ್ದವು. ಈ ಗ್ರೆನೇಡ್‌ಗಳನ್ನು ಭಾರತದಲ್ಲಿ ತಯಾರಿಸಲಾಗಿಲ್ಲ. ತಯಾರಕರ ಹೆಸರು ಅಥವಾ ದೇಶದ ಹೆಸರು ಉಲ್ಲೇಖಿಸಲಾಗಿಲ್ಲ. ವಿದೇಶದಿಂದ ಕಳ್ಳಸಾಗಣೆ ಮಾಡಲಾಗಿದೆ” ಎಂದು ಹಿರಿಯ ಸಿಸಿಬಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಆಟೋ ಚಾಲಕ, ಮೆಕ್ಯಾನಿಕ್, ವೆಲ್ಡಿಂಗ್ ಅಂಗಡಿಗಳಲ್ಲಿ ಕೆಲಸ ಮಾಡುತ್ತಿದ್ದ ಆರೋಪಿಗಳು ಲಕ್ಷಾಂತರ ರೂಪಾಯಿ ಹಣ ಪಡೆದಿದ್ದಾರೆ. ಬಂಧನವಾಗಿರುವ ಐವರು ಭಯೋತ್ಪಾದನಾ ದಾಳಿ ಅಥವಾ ಗ್ರೆನೇಡ್ ಬಳಸಲು ತರಬೇತಿ ಹೊಂದಿಲ್ಲದ ಕಾರಣ ಅವರು ಅದನ್ನು ಕಾರ್ಯಗತಗೊಳಿಸುವವರಲ್ಲ. ಬದಲಾಗಿ ಇದರಲ್ಲಿ ಬೇರೆಯವರ ಕೈವಾಡ ಇರಬಹುದು” ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಜುನೈದ್ ಅಹ್ಮದ್ ಈ ಭಯೋತ್ಪಾದನಾ ಕೃತ್ಯ ನಡೆಸಲು ಸಂಚು ರೂಪಿಸಿದ್ದವನು. ಈತ ವೀಸಾದೊಂದಿಗೆ ಭಾರತವನ್ನು ತೊರೆದಿದ್ದಾನೆ. ಆರೋಪಿ ಎಲ್ಲಿ ತಲೆಮರೆಸಿಕೊಂಡಿದ್ದಾನೆ ಎಂಬ ಬಗ್ಗೆ ತಿಳಿದಿದೆ. ಆದರೆ, ಆತನ ಹೆಚ್ಚಿನ ಚಲನವಲನಗಳನ್ನು ಇನ್ನೂ ಟ್ರ್ಯಾಕ್ ಮಾಡಬೇಕಾಗಿದೆ” ಎಂದು ಪೊಲೀಸ್ ಅಧಿಕಾರಿ ಹೇಳಿದರು.

“ಬೆಂಗಳೂರಿನ ಸುಲ್ತಾನಪಾಳ್ಯದಲ್ಲಿ ಕುರಿ ವ್ಯಾಪಾರಿಯಾಗಿದ್ದ ಅಹ್ಮದ್ ಅವರನ್ನು ಅಕ್ಟೋಬರ್ 2017 ರಲ್ಲಿ ಬಂಧಿಸಲಾಯಿತು. ಅವರು ಮತ್ತು ಅವರ ಸಹಚರರು ಮತ್ತೊಬ್ಬ ವ್ಯಾಪಾರಿ ನೂರ್ ಅಹಮದ್ ಅವರನ್ನು ಕೊಲೆ ಮಾಡಿದ್ದರು. 2008ರ ಬೆಂಗಳೂರು ಸರಣಿ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಟಿ ನಾಸಿರ್ ಅವರನ್ನು ಭೇಟಿಯಾದ ಅವರು ಬೆಂಗಳೂರಿನ ಸೆಂಟ್ರಲ್ ಜೈಲಿನಲ್ಲಿ 18 ತಿಂಗಳು ಕಳೆದಿದ್ದರು” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನಕಲಿ ನೋಟು ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳ ಬಂಧನ

“ಬಂಧನದ ಬಳಿಕ ನಾಸಿರ್ ಅವರನ್ನು ಪ್ರಶ್ನಿಸಿದ್ದೇವೆ. ಆದರೆ ಅವರು ಯಾವುದೇ ಉತ್ತರ ನೀಡುತ್ತಿಲ್ಲ. ಪೊಲೀಸರನ್ನು ಹೇಗೆ ಮೋಸಗೊಳಿಸಬೇಕು ಎಂದು ಉತ್ತಮ ತರಬೇತಿ ಪಡೆದಿದ್ದಾರೆ. ಅಹ್ಮದ್ ಅವರ ಮನೆಯಿಂದ 502 ಕೆ.ಜಿ ಕೆಂಪು ಮರಳುಗಳನ್ನು ಪೊಲೀಸರು ವಶಪಡಿಸಿಕೊಂಡ ನಂತರ ಡಿಸೆಂಬರ್ 2020ರಲ್ಲಿ ಅವರನ್ನು ಬಂಧಿಸಲಾಯಿತು.

“ಇದು ದೇಶದಾದ್ಯಂತ ಇತರ ಭಯೋತ್ಪಾದಕ ಸಂಚು ರೂಪಿಸುವವರೊಂದಿಗೆ ಪರಸ್ಪರ ಸಂಪರ್ಕ ಹೊಂದಿರಬಹುದು. ದಾಖಲೆಗಳನ್ನು ಪಡೆದಿರುವ ಕಾರಣ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತೆಗೆದುಕೊಳ್ಳಲು ಇದು ಸೂಕ್ತವಾದ ಪ್ರಕರಣವಾಗಿದೆ ಮತ್ತು ನಾವು ಪ್ರಕರಣದ ವಿವರಗಳನ್ನು ಹಂಚಿಕೊಂಡಿದ್ದೇವೆ” ಎಂದು ಅಧಿಕಾರಿ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...