ಬೆಂಗಳೂರು | ಜಿನೊಮಿಕ್ ಸೀಕ್ವೆನ್ಸ್​ಗೆ 45 ಸ್ಯಾಂಪಲ್ ಕಳಿಸಿದ ಆರೋಗ್ಯ ಇಲಾಖೆ

Date:

2019ರಲ್ಲಿ ಸಾವಿರಾರು ಜನರನ್ನು ಬಲಿ ಪಡೆದ ಕೊರೋನಾ ಕೆಲಕಾಲದ ವಿರಾಮದ ಬಳಿಕ ಮತ್ತೆ ಹೊಸ ರೂಪಾಂತರದೊಂದಿಗೆ ಆಗಮಿಸಿದೆ. ಮೊದಲಿಗೆ ಕಾಣಿಸಿಕೊಂಡಾಗಿನಿಂದ ಈವರೆಗೆ ಕೊರೋನಾ ವೈರಸ್‌ ರೂಪಾಂತರಗೊಳ್ಳುತ್ತಲೇ ಸಾಗಿದೆ. ಡೆಲ್ಟಾ, ಒಮೈಕ್ರಾನ್‌ ಇವು ಕೊರೋನಾ ವೈರಸ್‌ನ ರೂಪಾಂತರಗೊಂಡ ತಳಿಗಳು. ಇವುಗಳಲ್ಲಿ ಹಲವು ಉಪತಳಿಗಳು ರೂಪಗೊಂಡಿವೆ. ಬಿಎ.2.86 ಒಮೈಕ್ರಾನ್‌ನ ಒಂದು ಉಪತಳಿಯಾಗಿದೆ. ಇದರ ಉಪತಳಿಯೇ ಜೆಎನ್‌ 1 ಆಗಿದೆ. ಇದೀಗ ದೇಶದಲ್ಲಿ ಜೆಎನ್‌ 1 ಆತಂಕ ಹೆಚ್ಚಾಗಿದೆ.

ಸದ್ಯ ರಾಜ್ಯದಲ್ಲಿ ಸಕ್ರಿಯ ಕೊರೋನಾ ಪ್ರಕರಣಗಳ ಸಂಖ್ಯೆ 105ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಗುರುವಾರ 24 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ ಬೆಂಗಳೂರಿನಲ್ಲಿ 23 ಪ್ರಕರಣ ದಾಖಲಾಗಿವೆ. ನಗರದಲ್ಲಿಯೇ 93 ಕೋವಿಡ್‌ ಪ್ರಕರಣಗಳಿವೆ.

ಸದ್ಯ ಬೆಂಗಳೂರಿನಲ್ಲಿರುವ 93 ಕೋವಿಡ್ ಪ್ರಕರಣಗಳ ಪೈಕಿ 45 ಪ್ರಕರಣಗಳಲ್ಲಿ ಸೋಂಕಿನ ಲಕ್ಷಣ ಹೆಚ್ಚಾಗಿದೆ. ಈ ಹಿನ್ನೆಲೆ, 45 ಸ್ಯಾಂಪಲ್‌ಗಳನ್ನು ಜಿನೊಮಿಕ್‌ ಸೀಕ್ವೆನ್ಸ್‌ ನಡೆಸಲು ಆರೋಗ್ಯ ಇಲಾಖೆ ಕಳುಹಿಸಿದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿನೊಮಿಕ್ ಸೀಕ್ವೆನ್ಸ್‌ ವರದಿ ಬರುವವರೆಗೂ ಇದು ಜೆಎನ್ 1 ಅಥವಾ ಬೇರೆ ತಳಿಯಾ ಎಂಬುದು ಆತಂಕಕ್ಕೆ ಎಡೆ ಮಾಡಿದೆ.

ಸದ್ಯ ದೇಶದಲ್ಲಿ ಕೊರೋನಾದ ಉಪತಳಿ ಜೆಎನ್‌ 1 ಆತಂಕ ಹೆಚ್ಚಾಗಿದೆ. ನೆರೆಯ ರಾಜ್ಯಗಳಾದ ಗೋವಾ, ಕೇರಳ, ಮಹಾರಾಷ್ಟ್ರಗಳಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ.

ಈ ಸುದ್ದಿ ಓದಿದ್ದೀರಾ? ಮಗುವಿಗೆ ಕೊರೋನಾ ದೃಢ; ರಾಜ್ಯದಲ್ಲಿ 105 ಮಂದಿಗೆ ಕೋವಿಡ್-19

ರಾಜ್ಯದಲ್ಲಿ ದಾಖಲಾಗುವ ಒಟ್ಟಾರೆ ಕೇಸ್​ಗಳ ಪೈಕಿ ಬೆಂಗಳೂರಿನಲ್ಲಿ ಶೇ.90 ರಷ್ಟು ಪ್ರಕರಣಗಳು ಪತ್ತೆಯಾಗುತ್ತಿವೆ. ಹೀಗಾಗಿ ನಗರದ ಜನರಲ್ಲಿ ಆತಂಕ ಸೃಷ್ಟಿಯಾಗಿದ್ದು, ಆರೋಗ್ಯ ಇಲಾಖೆ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೂಡ ಕೊರೋನಾ ವೈರಸ್ ತಡೆಗೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.

ಆರೋಗ್ಯ ಇಲಾಖೆ ಈಗಾಗಲೇ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, 60 ವರ್ಷ ಮೇಲಪಟ್ಟವರು ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು ಎಂದು ಸೂಚನೆ ನೀಡಿದೆ. ಜತೆಗೆ ಜನಸಂದಣಿ ಇರುವ ಪ್ರದೇಶಗಳಿಗೆ ತೆರಳದಂತೆ ಸೂಚಿಸಿದೆ.

ಅಲ್ಲದೇ, ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸಂಚರಿಸುವಾಗ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್‌ ಧರಿಸುವಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಸೂಚಿಸಿದ್ದರು. ಇನ್ನು ಮಕ್ಕಳ ಆರೋಗ್ಯ ಹಿತದೃಷ್ಟಿಯಿಂದ ಬೆಂಗಳೂರಿನ ಕೆಲವು ಖಾಸಗಿ ಶಾಲೆಗಳಲ್ಲಿ ಮಾಸ್ಕ್ ಕಡ್ಡಾಯ ಮಾಡಲು ಚಿಂತನೆ ನಡೆದಿದೆ.

ಮತ್ತೊಮ್ಮೆ ಚಳಿಗಾಲ ಬಂದಿದೆ. ಕ್ರಿಸ್‌ಮಸ್‌, ಹೊಸ ವರ್ಷಾಚರಣೆ ಕೂಡ ಮುಂದೆ ಇದೆ. ಈ ಸಮಯದಲ್ಲಿ ಕೊರೋನಾ ವೈರಸ್‌ನ ಹೊಸದೊಂದು ರೂಪ ಜೆಎನ್‌ 1 ಕಾಣಿಸಿಕೊಂಡಿದೆ. ಜೆಎನ್‌ 1 ವೈರಾಣು ಮೊದಲು ಅಮೆರಿಕದಲ್ಲಿ ಕಾಣಿಸಿಕೊಂಡಿದೆ. ಈ ಉಪತಳಿ ಈಗ ಇತರ ಕೆಲವು ದೇಶಗಳಿಗೂ ಹಬ್ಬಿದೆ.

ಕೊರೋನಾ ವೈರಾಣು ಕಾಲ ಕಾಲಕ್ಕೆ ರೂಪಾಂತರಗೊಳ್ಳುತ್ತಿದೆ. ಹಾಗಾಗಿ, ರೂಪಾಂತರಗೊಂಡು ಸೃಷ್ಟಿಯಾಗುವ ಉಪತಳಿಗಳ ಕುರಿತು ಅಧ್ಯಯನ ಮಾಡುವುದಕ್ಕೆ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಅಧ್ಯಯನ ಆಗದ ಹೊರತು ಉಪತಳಿಯ ಗುಣಲಕ್ಷಣಗಳು ಮತ್ತು ಪ್ರಭಾವವನ್ನು ತಿಳಿಯಲು ಸಾಧ್ಯವಿಲ್ಲ. ಸದ್ಯ ಜೆಎನ್‌ 1 ಉಪತಳಿಯ ಅಧ್ಯಯನವು ಈಗ ಮೊದಲ ಹಂತದಲ್ಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...