ಬೆಂಗಳೂರು | ನಂದಿನಿ ಉತ್ಪನ್ನಗಳನ್ನಷ್ಟೇ ಬಳಸುವಂತೆ ಕರೆ ಕೊಟ್ಟ ಹೋಟೆಲ್ ಮಾಲೀಕರ ಸಂಘ

Date:

  • ನಂದಿನಿ ಉಳಿಸಿ ಮೈಸೂರಿನಲ್ಲಿ ಪ್ರತಿಭಟನೆಗೆ ಕರೆ
  • ಗುಜರಾತಿನ ಅಮುಲ್ ವಿರುದ್ಧ ಹೋಟೆಲ್ ಸಂಘದ ಕರೆ

ಅಮುಲ್ ವಿರುದ್ಧ ರಾಜ್ಯಾದ್ಯಂತ ವಿರೋಧ ವ್ಯಕ್ತವಾಗುತ್ತಿದೆ. ಈ ನಡುವೆ ಗುಜರಾತಿ ಕಂಪನಿಯ ಉತ್ಪನ್ನಗಳನ್ನು ಬಿಟ್ಟು ನಂದಿನಿ ಹಾಲಿನ ಉತ್ಪನ್ನಗಳನ್ನು ಬಳಸುವಂತೆ ಬೆಂಗಳೂರು ಹೋಟೆಲ್ ಮಾಲೀಕರ ಸಂಘ ಕರೆ ಕೊಟ್ಟಿದೆ.

ಗುಜರಾತ್ ಮೂಲದ ಅಮುಲ್ ಕಂಪನಿ ರಾಜ್ಯದಲ್ಲಿ ತನ್ನ ವ್ಯಾಪಾರ ವಿಸ್ತರಣೆ ನಡೆಸಿದೆ. ರಾಜ್ಯದ ಜನತೆಯ ಜೀವನಾಡಿಯಾದ ನಂದಿನಿ ಸಂಸ್ಥೆಯನ್ನೂ ಮುಗಿಸುವ ಹುನ್ನಾರದಿಂದಲೇ ಅಮುಲ್ ರಾಜ್ಯಕ್ಕೆ ಬರುತ್ತಿದೆ ಎನ್ನುವ ಆರೋಪಗಳು ವ್ಯಾಪಕವಾಗಿವೆ.

ಅಮುಲ್ ರಾಜ್ಯದಲ್ಲಿ ವ್ಯಾಪಾರ ಆರಂಭಿಸಲಿದೆ ಎನ್ನುವುದು ಘೋಷಣೆಯಾದ ಬೆನ್ನಲ್ಲೇ ರಾಜ್ಯಾದ್ಯಂತ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಬಳಸಬೇಕು. ಅಮುಲ್ ತಿರಸ್ಕರಿಸಬೇಕು ಎನ್ನುವ ಅಭಿಯಾನವೂ ಆರಂಭವಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಮುಲ್‌ಗೆ ಹಿನ್ನಡೆಯಾಗಿ ರಾಜ್ಯದ ರೈತರನ್ನು ಬೆಂಬಲಿಸಲು ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಬಳಸಲು ಹೋಟೆಲ್ ಮಾಲೀಕರು ನಿರ್ಧಾರ ಕೈಗೊಂಡಿದ್ದಾರೆ. “ರಾಜ್ಯದ ರೈತರು ಉತ್ಪಾದಿಸುವ ನಮ್ಮ ಹೆಮ್ಮೆಯ ನಂದಿನಿ ಹಾಲನ್ನೇ ಬಳಸುವ ಮೂಲಕ ನಾವೆಲ್ಲರೂ ಕೆಎಂಎಫ್ ಅನ್ನು ಪ್ರೋತ್ಸಾಹಿಸಬೇಕು” ಎಂದು ಸಂಘ ಮನವಿ ಮಾಡಿದೆ.

ಈ ಸುದ್ದಿ ಓದಿದ್ದೀರಾ? ಆರೋಪಿಗಳ ಖುಲಾಸೆ ನಮಗೆ ಮಾಡಿದ ಕಪಾಳಮೋಕ್ಷ: ಬುಡಕಟ್ಟು ಮಹಿಳೆಯರು

“ಇತ್ತೀಚೆಗೆ ಅನ್ಯ ರಾಜ್ಯದ ಹಾಲು ಕರ್ನಾಟಕಕ್ಕೆ ಲಗ್ಗೆ ಇಡುತ್ತಿರುವ ಬಗ್ಗೆ ಕೇಳಿ ಬರುತ್ತಿದೆ. ಆದರೆ ನಮ್ಮ ನಗರದಲ್ಲಿ ಶುಚಿ, ರುಚಿಯಾದ ಕಾಫಿ, ತಿಂಡಿಗಳು ಸಿಗಲು ಬಹುಕಾಲದಿಂದ ಬೆನ್ನೆಲುಬಾಗಿ ನಿಂತಿರುವುದು ನಮ್ಮ ನಂದಿನಿ ಹಾಲು” ಎಂದು ಸಂಘದ ಅಧ್ಯಕ್ಷ ಪಿ ಸಿ ರಾವ್‌ ಪ್ರಕಟಣೆ ಹೊರಡಿಸಿದ್ದಾರೆ.

“ಹೋಟೆಲ್‌ ಮಾಲೀಕರು ಪ್ರಮುಖವಾಗಿ ನಂದಿನಿ ಉತ್ಪನ್ನಗಳನ್ನೇ ಉಪಯೋಗಿಸುತ್ತಿದ್ದಾರೆ. ಇನ್ನು ಮುಂದೆಯೂ ನಮ್ಮ ನಂದಿನಿ ಹಾಲು ಮತ್ತು ಉತ್ಪನ್ನಗಳನ್ನೇ ಬಳಸಲಾಗುವುದು” ಎಂದು ಹೇಳಿದ್ದಾರೆ.

ಮೈಸೂರಿನಲ್ಲಿ ಪ್ರತಿಭಟನೆಗೆ ಕರೆ

“ನಮ್ಮ ನೆಲದಲ್ಲಿ ನಮ್ಮನ್ನೇ ಹೊಸಕುವ ಪ್ರಕ್ರಿಯೆಗಳು ನಡೆಯುತ್ತಿವೆ. ಇದರ ಮುಂದುವರೆದ ಭಾಗವಾಗಿ ಕನ್ನಡಿಗರ ಹೆಮ್ಮೆಯ ನಂದಿನಿಯನ್ನು ಮುಗಿಸಿ, ಗುಜರಾತಿನ ವಸಾಹತನ್ನಾಗಿ ಮಾಡುವ ಷಡ್ಯಂತ್ರ ಆರಂಭಗೊಂಡಿದೆ. ಹಾಗಾಗಿ ನಂದಿನಿ ಉಳಿಸಲು ಮೈಸೂರಿನಲ್ಲಿ ಸೋಮವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ” ಎಂದು ಪತ್ರಕರ್ತ ಟಿ ಗುರುರಾಜ್ ಹೇಳಿಕೆ ನೀಡಿದ್ದಾರೆ.

ಹೋರಾಟದ ಮೊದಲ ಹಂತವಾಗಿ ದಿನಾಂಕ 10ರ ಸೋಮವಾರ ಬೆಳಿಗ್ಗೆ 10.30 ಗಂಟೆಗೆ ಮೈಸೂರು ನಗರದ ವಿವಿ ಪುರಂನ ಲಾಯಲ್ ವರ್ಲ್ಡ್ ಬದಿಯಲ್ಲಿರುವ ಅಮುಲ್ ಮಳಿಗೆಯ ಮುಂದೆ ಸಮಾನಮನಸ್ಕ ಕನ್ನಡಿಗರು ಸಾಂಕೇತಿಕ ಪ್ರತಿಭಟನೆ ನಡೆಸಲಿದ್ದಾರೆ ಎಂದು ಪತ್ರಕರ್ತರಾದ ಟಿ ಗುರುರಾಜ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...