ಬೆಂಗಳೂರು | ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆ; ಗಡುವು ವಿಸ್ತರಣೆ ಸಾಧ್ಯತೆ

Date:

2019ರ ಏಪ್ರಿಲ್‌ಗಿಂತ ಮೊದಲು ನೋಂದಣಿಯಾದ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ (ಎಚ್‌ಎಸ್‌ಆರ್‌ಪಿ) ಅಳವಡಿಸಲು ನೀಡಿದ್ದ ಗಡುವು (ನವೆಂಬರ್ 17) ಸಮೀಪಿಸುತ್ತಿದ್ದರೂ, ಸಾರ್ವಜನಿಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. 2 ಕೋಟಿಯಷ್ಟು ಹಳೆಯ ವಾಹನಗಳ ಪೈಕಿ ಕೇವಲ 1.75 ಲಕ್ಷ (ಶೇ.10 ಕ್ಕಿಂತ ಕಡಿಮೆ) ವಾಹನಗಳು ಮಾತ್ರ ತಮ್ಮ ಫಲಕಗಳನ್ನು ನವೀಕರಿಸಿವೆ ಎನ್ನಲಾಗಿದೆ.

ಎಚ್‌ಎಸ್‌ಆರ್‌ಪಿ ಅಳವಡಿಕೆಯ ಗಡುವನ್ನು ರಾಜ್ಯ ಸರ್ಕಾರ ವಿಸ್ತರಿಸುವ ಸಾಧ್ಯತೆಯಿದ್ದು, ನಂಬರ್‌ ಪ್ಲೇಟ್ ಅಳವಡಿಕೆಗೆ ಜನರನ್ನು ಉತ್ತೇಜಿಸಲು ವ್ಯಾಪಕ ಪ್ರಚಾರ ನೀಡುವ ಸಾಧ್ಯತೆಯಿದೆ ಎಂದು ಹಿರಿಯ ಸಾರಿಗೆ ಅಧಿಕಾರಿಗಳು‌ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.

“ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (ಎಂಒಆರ್‌ಟಿಎಚ್) ಭದ್ರತೆ ಸೇರಿದಂತೆ ಹಲವು ಕಾರಣಗಳಿಗಾಗಿ ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ ಅಂಟಿಸುವುದನ್ನು ಕಡ್ಡಾಯಗೊಳಿಸಿದೆ. ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ಗಳನ್ನು ಒಮ್ಮೆ ಅಳವಡಿಸಿದ ಬಳಿಕ ತೆಗೆದುಹಾಕಲು ಸಾಧ್ಯವಿಲ್ಲ. ಅವುಗಳನ್ನು ರಿವಿಟ್‌ಗಳನ್ನು ಬಳಸಿ ಅಳವಡಿಸುವುದರಿಂದ ಪ್ಲೇಟನ್ನು ಮುರಿಯಬೇಕಾಗುತ್ತದೆ. ಇದರಿಂದಾಗಿ ನಂಬರ್ ಪ್ಲೇಟ್‌ಗಳ ವಿನಿಮಯಕ್ಕೆ ಯಾವುದೇ ಅವಕಾಶ ಇರುವುದಿಲ್ಲ. 2019ರ ಏಪ್ರಿಲ್ 1ಕ್ಕಿಂತ ಮೊದಲು ರಾಜ್ಯದಲ್ಲಿ ಸುಮಾರು 2 ಕೋಟಿ ವಾಹನಗಳು ನೋಂದಣಿಯಾಗಿವೆ. ಏಪ್ರಿಲ್ 2019 ರ ನಂತರ ನೋಂದಾಯಿಸಿರುವ ಎಲ್ಲ ವಾಹನಗಳಿಗೂ ಕಡ್ಡಾಯವಾಗಿ ಎಚ್‌ಎಸ್‌ಆರ್‌ಪಿ ಅಳವಡಿಸಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅ.31ರಂದು ಮಲೆನಾಡು-ಕರಾವಳಿ ಸಮಸ್ಯೆಗಳ ಸಮಾಲೋಚನೆ ಸಭೆ

“ರಾಜ್ಯ ಸರ್ಕಾರದ ಅಧಿಸೂಚನೆಯು ಹಳೆಯ ವಾಹನಗಳು ಸಾಲಿನಲ್ಲಿ ಬರಲು ನವೆಂಬರ್ 17 ರವರೆಗೆ ಗಡುವು ನೀಡಿದ್ದರೂ, ಪ್ರತಿಕ್ರಿಯೆ ನೀರಸವಾಗಿದೆ. ಜನರನ್ನು ಉತ್ತೇಜಿಸಲು ನಾವು ಅಧಿಸೂಚನೆಯ ವ್ಯಾಪಕ ಪ್ರಚಾರವನ್ನು ಯೋಜಿಸುತ್ತಿದ್ದೇವೆ. ಆದರೆ ಕೆಲವರು ಈ ವಿಷಯವನ್ನು ನ್ಯಾಯಾಲಯಕ್ಕೆ ತೆಗೆದುಕೊಂಡು ಹೋಗಿದ್ದರಿಂದ, ನೋಂದಣಿ ಫಲಕಗಳನ್ನು ಸರಿಪಡಿಸಲು ಮೂಲ ಉಪಕರಣ ತಯಾರಕರಿಂದ (ಒಇಎಂ) ಅಧಿಕಾರ ಪಡೆದ ಎಚ್‌ಎಸ್‌ಆರ್‌ಪಿ ತಯಾರಕರಿಗೆ ಮಾತ್ರ ಅನುಮತಿ ನೀಡುವುದರ ವಿರುದ್ಧ ವಾದಿಸಿದ್ದರಿಂದ ಅದನ್ನು ತಾತ್ಕಾಲಿಕವಾಗಿ ನಿಲ್ಲಿಸಬೇಕಾಯಿತು. ಹಾಗಾಗಿ ಸರ್ಕಾರವು ಪುನಃ ನಂಬರ್‌ ಪ್ಲೇಟ್‌ ಅಳವಡಿಕೆಯ ಗಡುವನ್ನು ವಿಸ್ತರಿಸಬಹುದು” ಎಂದು ಅಧಿಕಾರಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...