ಬೆಂಗಳೂರು | ಬೆಳಿಗ್ಗೆ ಕೆಲಸಕ್ಕೆ ಸೇರಿ, ಮಧ್ಯಾಹ್ನ ಮಾಲೀಕನ ಮಗುವಿನ ಅಪಹರಣ

Date:

ಬೆಳಿಗ್ಗೆ ಕೆಲಸಕ್ಕೆ ಸೇರಿಕೊಂಡು ಮಧ್ಯಾಹ್ನದ ವೇಳೆಗೆ ಮಾಲೀಕನ ಮಗುವನ್ನೇ ಅಪಹರಿಸಿದ ಪ್ರಕರಣವೊಂದು ಬೆಂಗಳೂರಿನ ಕಾವೇರಿಪುರದಲ್ಲಿ ಡಿ.28ರಂದು ನಡೆದಿದೆ. ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಆರೋಪಿ ವಸೀಂ ಎಂಬಾತ ಕಳೆದ ಗುರುವಾರ ಶಫೀವುಲ್ಲಾ ಎಂಬವರ ಅಂಗಡಿಯಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದಾನೆ. ಮಧ್ಯಾಹ್ನದ ವೇಳೆಗೆ ಅವರ ಮಗುವನ್ನು ಅಪಹರಿಸಿ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ. ಶಫೀವುಲ್ಲಾ ಬನಶಂಕರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪ್ರಕರಣದ ಹಿನ್ನೆಲೆ:

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಫೀವುಲ್ಲಾ ಪತ್ನಿಯಿಂದ ವಿಚ್ಛೇದನ ಪಡೆದು ಮಗಳೊಂದಿಗೆ ಬೆಂಗಳೂರಿನ ಬನಶಂಕರಿ ಠಾಣೆ ವ್ಯಾಪ್ತಿಯ ಕಾವೇರಿಪುರದಲ್ಲಿ ವಾಸವಾಗಿದ್ದರು. ಶಫೀವುಲ್ಲ ಅವರು ಫರ್ನಿಚರ್‌ ಶಾಪ್‌ ಇಟ್ಟುಕೊಂಡಿದ್ದರು. ಈ ಹಿಂದೆ ಈತ ಶಫೀವುಲ್ಲ ಅವರ ಫರ್ನೀಚರ್‌ ಶಾಪ್‌ನಲ್ಲಿ ಕೆಲಸಕ್ಕೆ ಸೇರಿದ್ದ ವಸೀಂ ಎಂಬಾತ ಕೇಲವೇ ದಿನಗಳಲ್ಲಿ ಕೆಲಸ ಬಿಟ್ಟಿದ್ದನು.

ಮತ್ತೆ ಮಾಲೀಕನಿಗೆ ಕೆಲಸ ಕೊಡಿ ಎಂದು ಅಂಗಲಾಚಿ ಕಣ್ಣೀರು ಹಾಕಿದ್ದನು. ಹೀಗಾಗಿ, ಮಾಲೀಕ ಆತನಿಗೆ ಮತ್ತೆ ಕೆಲಸ ಕೊಟ್ಟಿದ್ದರು. ಕೆಲಸಕ್ಕಾಗಿ ಆರೋಪಿ ವಸೀಂ ಎಂಬಾತ ಡಿಸೆಂಬರ್ 28ರ ಬೆಳಿಗ್ಗೆ ಕೆಲಸಕ್ಕೆ ಸೇರಿದ್ದನು. ಮಧ್ಯಾಹ್ನ ಶಫೀವುಲ್ಲ್ ಅವರ ನಾಲ್ಕು ವರ್ಷದ ಮಗುವಿಗೆ ಚಾಕಲೇಟ್‌ ಕೊಡಿಸುವುದಾಗಿ ಹೇಳಿ ಕರೆದುಕೊಂಡು ಹೋಗಿದ್ದಾನೆ.

ಈ ಸುದ್ದಿ ಓದಿದ್ದೀರಾ? 60 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಅರಣ್ಯ ಒತ್ತುವರಿ ತೆರವು

“ಕೆಲಸಕ್ಕೆ ಸೇರಿದ ದಿನವೇ ಮಗುವಿಗೆ ಚಾಕಲೇಟ್‌ ಕೊಡಿಸುವುದಾಗಿ ಪುಸಲಾಯಿಸಿ ಕರೆದುಕೊಂಡು ಹೋಗಿದ್ದಾನೆ” ಎಂದು ಶಫೀವುಲ್ಲಾ ಆರೋಪಿಸಿದ್ದಾರೆ.

ಸದ್ಯ ಘಟನೆಗೆ ಸಂಬಂಧಿಸಿದಂತೆ ಶಫೀವುಲ್ಲಾ ಬನಶಂಕರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಪತ್ತೆಗಾಗಿ ಶೋಧ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...