ಬೆಂಗಳೂರು | ಸಹಾಯ ಕೇಳುವ ನೆಪದಲ್ಲಿ ಮಕ್ಕಳ ಅಪಹರಣ; ಆರೋಪಿ ಮಹಿಳೆ ಬಂಧನ

Date:

  • ರಾತ್ರಿ ವೇಳೆ ಚಾಕು, ಚೂರಿ ತೋರಿಸಿ ದರೋಡೆ ಮಾಡುತ್ತಿದ್ದ ಆರೋಪಿ
  • ಮಾ. 29ರಂದು ಸ್ಕ್ರಾಪ್​ ಕಾರೊಂದರಲ್ಲಿ ಅನುಮಾನಸ್ಪಾದ ವ್ಯಕ್ತಿಯ ಮೃತದೇಹ ಪತ್ತೆ

ಮನೆಯಲ್ಲಿದ್ದ ಮಕ್ಕಳನ್ನು ಕದ್ದೊಯುತ್ತಿದ್ದ ಆರೋಪಿ ನಂದಿನಿ ಅಲಿಯಾಸ್ ಆಯೇಷಾಳನ್ನು ಕಲಾಸಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ನಂದಿನಿ ಯಾವುದೋ ಒಂದು ಸಂಸ್ಥೆಯ ಬ್ರೋಷರ್ ಹಿಡಿದುಕೊಂಡು ಈ ಸಂಸ್ಥೆಗೆ ಧನ ಸಹಾಯ ಮಾಡಿ ಎಂದು ಜನರ ಮನೆ ಬಾಗಿಲಿಗೆ ತೆರಳಿ ಪರಿಪರಿಯಾಗಿ ಬೇಡಿಕೊಳ್ಳುತ್ತಿದ್ದಳು. ಈ ವೇಳೆ, ಮನೆಯವರು ಹಣ ತೆಗೆದುಕೊಂಡು ಬರಲು ಮನೆ ಒಳಗೆ ಹೋದಾಗ, ಮಗು ಅಥವಾ ಮನೆಯಲ್ಲಿರುವ ವಸ್ತುಗಳನ್ನು ಎತ್ತಿಕೊಂಡು ಪರಾರಿಯಾಗುತ್ತಿದ್ದಳು.

ಈ ಹಿಂದೆ, ಸಣ್ಣ ಪುಟ್ಟ ಪ್ರಕರಣಗಳಲ್ಲಿ ನಂದಿನಿ ಅಲಿಯಾಸ್ ಆಯೇಷಾ ಪೊಲೀಸರ ಅತಿಥಿಯಾಗಿದ್ದಳು. ಈಕೆ ಹೆಚ್ಚಾಗಿ ಬುರ್ಖಾ ಧರಿಸಿ ಮನೆಗಳಿಗೆ ತೆರಳುತ್ತಿದ್ದರಿಂದ ಸಿಸಿಟಿವಿಯಲ್ಲೂ ಈಕೆ ಯಾರು ಎಂಬ ಗುರುತುಗಳೂ ಸರಿಯಾಗಿ ಪತ್ತೆಯಾಗುತ್ತಿರಲಿಲ್ಲ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೊಬೈಲ್, ಹಣ ಕದಿಯುತ್ತಿದ್ದ ಈಕೆ, ಇತ್ತೀಚೆಗೆ ರಾತ್ರಿ ವೇಳೆ ಚಾಕು, ಚೂರಿ ತೋರಿಸಿ ದರೋಡೆ ಕೂಡ ಮಾಡುತ್ತಿದ್ದಳು. ಮಕ್ಕಳನ್ನೂ ಕದಿಯುತ್ತಿದ್ದಳು ಎಂದು ಆರೋಪಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಶಿವರಾಮ ಕಾರಂತರ ಆಪ್ತ ಸಹಾಯಕಿ ಮಾಲಿನಿ ಮಲ್ಯ ಇನ್ನಿಲ್ಲ

ಕೆಲವು ದಿನಗಳ ಹಿಂದೆ, ಈಕೆ ಒಂದು ಮಗುವನ್ನು ಕಳ್ಳತನ ಮಾಡಿದ್ದಳು. ಆ ಮಗುವನ್ನು ತನ್ನ ಮನೆಯಲ್ಲಿಯೇ ಇಟ್ಟುಕೊಂಡಿದ್ದಳು. ಒಂದು ತಿಂಗಳ ಮಗುವಿಗೆ ಹಾಲು ಉಣಿಸದೇ ಮಗುವಿಗೆ ಉಪ್ಪಿಟ್ಟು ಕೊಟ್ಟಿದ್ದಳು. ಈ ವೇಳೆ, ಮಗು ಅಳುವುದನ್ನು ಕೇಳಿಸಿಕೊಂಡ ಅಕ್ಕಪಕ್ಕದವರು ಅನುಮಾನಗೊಂಡು ಮನೆಗೆ ನುಗ್ಗಿ ಮಗುವನ್ನು ರಕ್ಷಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕದ್ದ ಮಕ್ಕಳನ್ನು ಯಾರಿಗೆ ಕೊಡುತ್ತಿದ್ದಳು ಅಥವಾ ಏನು ಮಾಡುತ್ತಿದ್ದಳು ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸ್ಕ್ರಾಪ್​ ಕಾರಿನಲ್ಲಿ ಅನುಮಾನಾಸ್ಪದ ವ್ಯಕ್ತಿಯ ಮೃತದೇಹ ಪತ್ತೆ

ಮಾರ್ಚ್‌ 29ರಂದು ಬೆಳಗ್ಗೆ ಸ್ಕ್ರಾಪ್​ ಕಾರೊಂದರಲ್ಲಿ ಅನುಮಾನಾಸ್ಪದವಾಗಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.

ಸ್ಥಳೀಯರು ಸುಟ್ಟು ಕರಕಲಾಗಿರುವ ಕಾರೊಂದರಲ್ಲಿ ವ್ಯಕ್ತಿಯ ಶವ ಇರುವುದು ತಿಳಿದ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಕೊಡಿಗೇಹಳ್ಳಿ ​ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...