ಬೆಂಗಳೂರು ಕರಗ ಶಕ್ತ್ಯೋತ್ಸವ | ತಾತ್ಕಾಲಿಕ ಸಂಚಾರ ನಿರ್ಬಂಧ ಎಲ್ಲೆಲ್ಲಿ? ಇಲ್ಲಿದೆ ನೋಡಿ

Date:

  • ಏ. 6ರಂದು ಮಧ್ಯರಾತ್ರಿ 12 ಗಂಟೆಗೆ ದೇವಸ್ಥಾನದಿಂದ ಹೊರಡಲಿರುವ ಕರಗ ಉತ್ಸವ
  • ಕರಗದಲ್ಲಿ ಅತ್ಯಧಿಕ ಭಕ್ತರು ಭಾಗವಹಿಸುವುದರಿಂದ ಕೆಲ ರಸ್ತೆಗಳಲ್ಲಿ ಸಂಚಾರ ನಿರ್ಬಂಧ

ಏ. 6ರಂದು ಮಧ್ಯರಾತ್ರಿ 12 ಗಂಟೆಗೆ ಹೊರಡಲಿರುವ ಕರಗ ಉತ್ಸವ ಇತಿಹಾಸ ಪ್ರಸಿದ್ಧ ಬೆಂಗಳೂರು ಕರಗದ ಹಿನ್ನೆಲೆಯಲ್ಲಿ ತಿಗಳರ ಪೇಟೆಯಲ್ಲಿರುವ ಧರ್ಮರಾಯಸ್ವಾಮಿ ದೇವಸ್ಥಾನದ ಸುತ್ತಮುತ್ತ ತಾತ್ಕಾಲಿಕವಾಗಿ ಸಂಚಾರ ನಿರ್ಬಂಧಿಸಿ ವಾಹನ ಸವಾರರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸ್ ಪ್ರಕಟಣೆ ಹೊರಡಿಸಿದೆ.

ಏ. 6ರಂದು ಮಧ್ಯರಾತ್ರಿ 12 ಗಂಟೆಗೆ ಕರಗ ಉತ್ಸವ ದೇವಸ್ಥಾನದಿಂದ ಹೊರಟು ನಗರದ ನಾನಾ ಬೀದಿಗಳಲ್ಲಿ ಸಂಚರಿಸಿ, ಮರುದಿನ ಏ.7ರ ಬೆಳಗಿನ ಜಾವ 6 ಗಂಟೆ ಸುಮಾರಿಗೆ ಧರ್ಮರಾಯಸ್ವಾಮಿ ದೇವಾಲಯಕ್ಕೆ ವಾಪಸಾಗುತ್ತದೆ.

ಕರಗ ಮೆರವಣಿಗೆಯೂ ನಗರ್ತಪೇಟೆ, ಕಬ್ಬನ್‌ಪೇಟೆ, ಗಾಣಿಗರಪೇಟೆ, ಅವೆನ್ಯೂರಸ್ತೆ ಮೂಲಕ ಕೆ.ಆರ್ ರಸ್ತೆಯಲ್ಲಿರುವ ಕೋಟೆ ಆಂಜನೇಯ ದೇವಾಲಯಕ್ಕೆ ಬಂದು ಸಿಟಿ ಮಾರ್ಕೆಟ್ ಪೊಲೀಸ್ ಠಾಣೆ ರಸ್ತೆಯ ಮೂಲಕ ಎ.ಎಸ್.ಆರ್. ಜಂಕ್ಷನ್, ಕೆ.ಎಸ್.ಆರ್ ರಸ್ತೆ ಮೂಲಕ ಪೊಲೀಸ್ ರಸ್ತೆಯ ಮಾರ್ಗವಾಗಿ ಕಾಟನ್‌ಪೇಟೆ ಪೊಲೀಸ್ ಠಾಣೆಯ ಜಂಕ್ಷನ್ ಮಾರ್ಗವಾಗಿ ಕಾಟನ್‌ ಪೇಟೆ ಮುಖ್ಯರಸ್ತೆಯ ಮಾರ್ಗವಾಗಿ ಒಟಿಸಿ ರಸ್ತೆ, ಮಸ್ತಾನ್ ಸಾಬ್ ದರ್ಗಾ, ಬಳೇಪೇಟೆ ಮುಖ್ಯ ರಸ್ತೆ, ಕೆ.ಜಿ.ರಸ್ತೆ, ಎಸ್.ಪಿ.ರಸ್ತೆ ಮೂಲಕ ಅಣ್ಣಮ್ಮ ದೇವಾಲಯಕ್ಕೆ ಬರುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಾಪಸ್ ಅದೇ ಮಾರ್ಗವಾಗಿ ಸಂಚರಿಸಿ, ಕಿಲಾರಿ ರಸ್ತೆ, ಮೈಸೂರು ಬ್ಯಾಂಕ್ ವೃತ್ತ, ಅವೆನ್ಯೂ ರಸ್ತೆ ಕ್ರಾಸ್, ಆರ್.ಟಿ.ಸ್ಟ್ರೀಟ್ ಕುಂಬಾರಪೇಟೆ, ಗೊಲ್ಲರಪೇಟೆ, ತಿಗಳರಪೇಟೆ, ಸುಣಕಲ್‌ ಪೇಟೆ ಮೂಲಕ ಕರಗ ಏ.7 ರಂದು ಬೆಳಗ್ಗೆ 6 ಗಂಟೆಗೆ ಧರ್ಮರಾಯಸ್ವಾಮಿ ದೇವಾಲಯಕ್ಕೆ ಬರುತ್ತದೆ.

ಈ ಸುದ್ದಿ ಓದಿದ್ದೀರಾ? ಏಪ್ರಿಲ್ 10ರವರೆಗೆ ರಾಜ್ಯದಲ್ಲಿ ಜೋರು ಮಳೆ ಸಾಧ್ಯತೆ : ಹವಾಮಾನ ಇಲಾಖೆ

ಕರಗದಲ್ಲಿ ಅತ್ಯಧಿಕ ಭಕ್ತರು ಭಾಗವಹಿಸುವುದರಿಂದ ಈ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಪರ್ಯಾಯ ಮಾರ್ಗ ವ್ಯವಸ್ಥೆ ಮಾಡಲಾಗಿದೆ.

  • ಕರಗ ಮರಳಿ ಬರುವವರೆಗೆ ಸಿಟಿ ಮಾರುಕಟ್ಟೆ ವೃತ್ತದಿಂದ ಅವೆನ್ಯೂರಸ್ತೆಯ ಮೂಲಕ ಮೈಸೂರು ಬ್ಯಾಂಕ್ ವೃತ್ತದವರೆಗೆ ಎಲ್ಲ ಮಾದರಿಯ ವಾಹನಗಳ ಸಂಚಾರ ನಿಷೇಧಿಸಲಾಗಿದೆ.
  • ಎಸ್‌ ಜೆಪಿ ರಸ್ತೆ-ಟೌನ್‌ಹಾಲ್, ಕೆಂಪೇಗೌಡರಸ್ತೆ ಮಾರ್ಗವಾಗಿ ಪರ್ಯಾಯವಾಗಿ ಸಂಚರಿಸಬಹುದು.
  • ಮೆರವಣಿಗೆ ಅವೆನ್ಯೂ ರಸ್ತೆ ಪ್ರವೇಶಿಸುತ್ತಿದ್ದಂತೆ, ಎ.ಎಸ್.ಚಾರ್ ರಸ್ತೆಯಿಂದ ಸಿಟಿ ಮಾರುಕಟ್ಟೆ ವೃತ್ತದ ಕಡೆ ಸಂಚರಿಸುವ ವಾಹನಗಳು ಮೈಸೂರು ರಸ್ತೆಯ ಎ.ಎಸ್.ಚಾರ್ ರಸ್ತೆಯಲ್ಲಿ ಬಲ ತಿರುವು ಪಡೆದು ಬ್ರಿಯಾಂಡ್ ವೃತ್ತ-ರಾಯನ್ ವೃತ್ತದ ಮೂಲಕ ಸಂಚರಿಸಬಹುದು.
  • ಮೆರವಣಿಗೆ ಸಿಟಿ ಮಾರುಕಟ್ಟೆ ವೃತ್ತದಿಂದ ಮಾರ್ಕೆಟ್ ಮೂಲಕ ಹಾದು ಪೊಲೀಸ್ ರಸ್ತೆ ಮೂಲಕ ಅರಳೆಪೇಟೆಗೆ ಬರುವಾಗ, ಪೊಲೀಸ್‌ ರಸ್ತೆ ಪ್ರವೇಶಿಸುವವರೆಗೆ, ಬಿವಿಕೆ ಅಯ್ಯಂಗಾರ್ ರಸ್ತೆ ಮೂಲಕ ಮೈಸೂರುರಸ್ತೆ ಕಡೆಗೆ ಸಂಚರಿಸುವ ವಾಹನಗಳನ್ನು ಚಿಕ್ಕಪೇಟೆ ವೃತ್ತದಲ್ಲಿ ತಾತ್ಕಾಲಿಕವಾಗಿ ನಿರ್ಬಂಧಿಸಲಾಗದು. ಮೆರವಣಿಗೆ ಪೊಲೀಸ್‌ ರಸ್ತೆಯಲ್ಲಿ ಮುಂದೆ ಸಾಗಿದ ನಂತರ ಎ.ಎಸ್.ಚಾರ್‌ ರಸ್ತೆಯಲ್ಲಿ ಸಂಚರಿಸಬಹುದು.
  • ಕಾಟನ್‌ ಪೇಟೆ ಮುಖ್ಯರಸ್ತೆಯಲ್ಲಿ ಸಂಚರಿಸುವ ಎಲ್ಲ ವಾಹನಗಳನ್ನು ಶಾಂತಲಾ ವೃತ್ತದಲ್ಲಿ ದಿಕ್ಕು ಬದಲಾಯಿಸಿ, ಜಿ.ಟಿ ರಸ್ತೆಯ ಮೂಲಕ ದೇವರಾಜ್‌ ಅರಸ್ ವೃತ್ತ (ಖೋಡೆ ವೃತ್ತ)-ವಾಟಾಳ್ ನಾಗರಾಜ್‌ ರಸ್ತೆ, ಬಿನ್ನಿಮಿಲ್ ರಸ್ತೆ ಮೂಲಕ ಮೈಸೂರು ರಸ್ತೆ ಮೂಲಕ ತೆರಳಬಹುದು.
  • ಡಾ.ಟಿ.ಸಿ.ಎಂ. ರಾಯನ್ ರಸ್ತೆ, ಮಿಲ್ ರಸ್ತೆ ಜಂಕ್ಷನ್‌ನಲ್ಲಿ ಕಾಟನ್‌ಪೇಟೆ ಮುಖ್ಯ ರಸ್ತೆ ಕಡೆಗೆ ಬರುವಂತ ವಾಹನಗಳ ಪ್ರವೇಶ/ಸಂಚಾರ ನಿರ್ಬಧಿಸಿ ಡಾ.ಟಿ.ಸಿ.ಎಂ. ರಾಯನ್ ರಸ್ತೆ ಮೂಲಕ ಶಾಂತಲಾ ವೃತ್ತದ ಕಡೆಗೆ ಸಂಚರಿಸಬಹುದು.
  • ಕರಗ ಉತ್ಸವಕ್ಕೆ ಬರುವ ಸಾರ್ವಜನಿಕರು ತಮ್ಮ ವಾಹನಗಳನ್ನು ಬನ್ನಪ್ಪ ಪಾರ್ಕ ಹಾಗೂ ಪುರಭವನದಲ್ಲಿ ವಾಹನ ನಿಲುಗಡೆ ಮಾಡಬಹುದು ಎಂದು ತಿಳಿಸಿದೆ.
  • ಏ. 7ರಂದು ಧರ್ಮರಾಯಸ್ವಾಮಿ ರಥ ಮತ್ತು ಏ.6ರಂದು ಕರಗ ಉತ್ಸವದಲ್ಲಿ ಭಾಗವಹಿಸಿದ ರಥಗಳು ಏ.7 ರಂದು ರಾತ್ರಿ 08.00 ಗಂಟೆಯವರೆಗೆ ಅವೆನ್ಯೂ ರಸ್ತೆ ಹಾಗೂ ಪೊಲೀಸ್‌ ರಸ್ತೆಯಲ್ಲಿ ಹಾಗೂ ಕಾಟನ್‌ ಪೇಟೆ ಮುಖ್ಯರಸ್ತೆಯಲ್ಲಿ ನಿಲ್ಲುವುದರಿಂದ ಸಿಟಿ ಮಾರ್ಕೆಟ್ ವೃತ್ತದಿಂದ ಅವೆನ್ಯೂ ರಸ್ತೆ ಮೂಲಕ ಮೈಸೂರು ಬ್ಯಾಂಕ್ ವೃತ್ತದ ವರೆಗೂ ಪೊಲೀಸ್ ರಸ್ತೆಯಲ್ಲಿ ಕಾಟನ್‌ ಪೇಟೆ ಹಾಗೂ ಮುಖ್ಯರಸ್ತೆಯಲ್ಲಿ ಏ.6 ರಾತ್ರಿ 12.00 ರಿಂದ ಏ.7ರ ಸಂಜೆ 8 ರವರೆಗೆ ಎಲ್ಲ ವಾಹನಗಳ ಸಂಚಾರವನ್ನು ನಿರ್ಬಂಧಿಸಿದೆ.
  • ಪರ್ಯಾಯವಾಗಿ ಸಿಟಿ ಮಾರ್ಕೆಟ್ ವೃತ್ತದಿಂದ ಎಸ್.ಜೆ.ಪಿ ರಸ್ತೆ, ಟೌನ್‌ಹಾಲ್ ಕೆಂಪೇಗೌಡ ರಸ್ತೆ ಮಾರ್ಗವಾಗಿ ಸಂಚರಿಸಬಹುದು.
  • ಅಥವಾ ಪರ್ಯಾಯವಾಗಿ ಕಾಟನ್‌ ಪೇಟೆ ಮುಖ್ಯರಸ್ತೆಯಲ್ಲಿ ಸಂಚರಿಸುವ ಎಲ್ಲ ವಾಹನಗಳನ್ನು ಶಾಂತಲಾ ವೃತ್ತದಲ್ಲಿ ಬಲತಿರುವು ಪಡೆದು ಜಿ.ಟಿ ರಸ್ತೆಯ ಮೂಲಕ ದೇವರಾಜ್ ಅರಸು ವೃತ್ತ(ಖೋಡೆ ವೃತ್ತ)-ವಾಟಾಳ್ ನಾಗರಾಜ್ ರಸ್ತೆ, ಬಿನ್ನಿಮಿಲ್ ರಸ್ತೆ ಮೂಲಕ ಮೈಸೂರು ರಸ್ತೆ ಮೂಲಕ ತೆರಳಬಹುದು.

ಸಂಚಾರ ಮಾರ್ಪಾಡುಗಳಿಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಬೆಂಗಳೂರು ಸಂಚಾರ ಪೊಲೀಸ್ ಕೋರಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...