ಬೆಂಗಳೂರು | ಜನರ ಬಲಿಗಾಗಿ ಕಾದು ಕುಳಿತ ನರಭಕ್ಷಕ ರಸ್ತೆ ಗುಂಡಿಗಳು

Date:

  • ಕೋಲ್ಡ್ ಮಿಕ್ಸ್ ಡಾಂಬರು ಯಂತ್ರಗಳ ಬಳಕೆಯಿಲ್ಲದೆ ನಿರ್ವಹಿಸಬಹುದು
  • ಮೆಟ್ರೊ ಕಾಮಗಾರಿಯಿಂದ ರಸ್ತೆಗಳು ದೊಡ್ಡ ಗುಂಡಿಗಳಿಂದ ತುಂಬಿವೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಗಾಲಕ್ಕೂ ಮುನ್ನವೇ ಮಳೆ ಸುರಿಯುತ್ತಿದ್ದು, ನಗರದಲ್ಲಿ ಎಲ್ಲೆಂದರಲ್ಲಿ ಬಿದ್ದ ರಸ್ತೆಗುಂಡಿಗಳು ಜನರ ಬಲಿಗಾಗಿ ಕಾಯುತ್ತಿವೆ. ಕಳೆದ ಕೆಲವು ದಿನಗಳ ಹಿಂದೆ ರಸ್ತೆಗುಂಡಿ ಸಮಸ್ಯೆಯಿಂದ ಹಲವು ಜನ ಪ್ರಾಣ ಕಳೆದುಕೊಂಡಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಇದೀಗ ನಗರದಲ್ಲಿರುವ ರಸ್ತೆಗುಂಡಿಗಳನ್ನು ಮುಚ್ಚಲು ಹರಸಾಹಸ ಪಡುವಂತಾಗಿದೆ. ಮುಂಗಾರು ಸಮೀಪಿಸುತ್ತಿದ್ದು, ರಸ್ತೆಗುಂಡಿ ಮುಚ್ಚಲು ಸಮಯಾವಕಾಶ ಕಡಿಮೆಯಿದೆ. ಮಳೆ ಸಂದರ್ಭದಲ್ಲಿ ರಸ್ತೆಗುಂಡಿಗಳು ನೀರಿನಿಂದ ತುಂಬಿಕೊಂಡು ವಾಹನ ಸವಾರರಿಗೆ ಪ್ರಾಣಾಪಾಯ ತಂದೊಡ್ಡಬಹುದು ಅಥವಾ ಅಪಘಾತಗಳಿಗೆ ಕಾರಣವಾಗಬಹುದು.

ಬೆಂಗಳೂರಿನಲ್ಲಿ ಮೆಟ್ರೊ ಕಾಮಗಾರಿಯಿಂದ ಹಲವಾರು ಪ್ರಮುಖ ರಸ್ತೆಗಳು ದೊಡ್ಡ ಗುಂಡಿಗಳಿಂದ ತುಂಬಿವೆ. ಚರಂಡಿ ಕಾಮಗಾರಿಗಳಿಂದ ನಗರದ ಹಲವು ರಸ್ತೆಗಳು ಹಾಳಾಗಿವೆ. ಮಳೆಯಾದರೆ ಈ ಗುಂಡಿಗಳಲ್ಲಿ ಮಳೆ ನೀರು ತುಂಬಿ ಅಪಘಾತಗಳು ಸಂಭವಿಸುತ್ತವೆ. ಬಿಬಿಎಂಪಿ ಇವಾಗಲೇ ಕಾರ್ಯೋನ್ಮುಖವಾಗದಿದ್ದಲ್ಲಿ, ಅಪಘಾತಗಳು ಸಂಭವಿಸಲಿವೆ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೆಂಗಳೂರಿನ ಗೋವಿಂದರಾಜನಗರದ ಒಂದನೇ ಮುಖ್ಯ ರಸ್ತೆಯಲ್ಲಿ ಚುನಾವಣೆ ಸಂದರ್ಭದಲ್ಲಿ ಒಳಚರಂಡಿ ನಿರ್ಮಾಣಕ್ಕಾಗಿ ದೊಡ್ಡ ದೊಡ್ಡ ಪೈಪ್‌ಗಳನ್ನು ಹಾಕಿ, ಟಾರು ಹಾಕಿದ್ದಾರೆ. ಆದರೆ, ಕೇವಲ ಒಂದೇ ತಿಂಗಳಿಗೆ ರಸ್ತೆ ಮಧ್ಯೆ ದೊಡ್ಡ ಗುಂಡಿ ಬಿದ್ದಿದ್ದು, ವಾಹನ ಸಂಚಾರಕ್ಕೆ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಕಳೆದ ಒಂದು ವಾರದ ಹಿಂದೆ ರಸ್ತೆಯ ಮಧ್ಯೆ ಈ ಗುಂಡಿ ಬಿದ್ದಿದ್ದರೂ ಸಹ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ” ಎಂದು ಗೋವಿಂದರಾಜನಗರದ ನಿವಾಸಿ ರಂಗನಾಥ ಈ ದಿನ.ಕಾಮ್‌ಗೆ ಹೇಳಿದರು.  

“ಮಳೆಯಿಂದಾಗಿ ರಸ್ತೆ ಗುಂಡಿಗಳು ನಿರ್ಮಾಣವಾಗಿದ್ದು, ನಾಲ್ಕು ಚಕ್ರದ ವಾಹನಗಳು ಸಹ ಈ ರಸ್ತೆಗಳಲ್ಲಿ ಸಂಚರಿಸಲು ಕಷ್ಟವಾಗುತ್ತಿದೆ. ವಿಪರ್ಯಾಸವೆಂದರೆ ಈ ರಸ್ತೆಯು ಬೆಂಗಳೂರು ದಕ್ಷಿಣ ಸಂಸದ (ಲೋಕಸಭೆ) ತೇಜಸ್ವಿ ಸೂರ್ಯ ಅವರ ಕಚೇರಿಯ ಸಮೀಪದಲ್ಲಿದೆ. ಆದರೆ, ಮುಂಗಾರು ಪೂರ್ವ ಮಳೆಯಿಂದಾಗಿ ರಸ್ತೆಗಳನ್ನು ಡಾಂಬರೀಕರಣಗೊಳಿಸಲು ಬಿಬಿಎಂಪಿ ವಿಳಂಬ ಮಾಡುತ್ತಿದೆ. ದೊಡ್ಡ ಸಿಮೆಂಟ್ ಪೈಪುಗಳನ್ನು ಅಳವಡಿಸಲು ರಸ್ತೆಗಳನ್ನು ಅಗೆದು ನಂತರ ರಸ್ತೆಗಳಿಗೆ ಡಾಂಬರೀಕರಣ ಮಾಡಿಲ್ಲ” ಎಂದು ಜಯನಗರ 5ನೇ ಬ್ಲಾಕ್ ನಿವಾಸಿ ರಾಜಗೋಪಾಲ್ ಎ. ಹೇಳಿದರು.

“ಹೆಮ್ಮಿಗೆಪುರ ವಾರ್ಡ್‌ನ ವಸತಿ ಬಡಾವಣೆಗಳ ಒಳಗಿನ ರಸ್ತೆಗಳ ಡಾಂಬರೀಕರಣ ಕಾಮಗಾರಿ ಇನ್ನೂ ಆರಂಭವಾಗಿಲ್ಲ. ರಸ್ತೆಗಳ ಗುಣಮಟ್ಟ ತೀರಾ ಕಳಪೆಯಾಗಿದ್ದು, ಮಳೆಯನ್ನು ತಡೆದುಕೊಳ್ಳಲು ಶಕ್ತಿ ಕೂಡ ರಸ್ತೆಗಳಿಗಿಲ್ಲ” ಎಂದು ಬನಶಂಕರಿ 6ನೇ ಹಂತದ ನಿವಾಸಿ ವಾಜಪೇಯಂ ಶ್ರೀವತ್ಸ ಆರೋಪಿಸಿದರು.

“ಮಾನ್ಸೂನ್ ಸಮಯದಲ್ಲಿ ರಸ್ತೆ ಗುಂಡಿಗಳು ನೀರಿನಿಂದ ತುಂಬುತ್ತವೆ. ಬಿಬಿಎಂಪಿ ಅಧಿಕಾರಿಗಳು ಬಿಡಿಎ ಕಡೆಗೆ ಬೆರಳು ಮಾಡಿ ತೋರಿಸುತ್ತಾರೆ. ಲೇಔಟ್ ಅಭಿವೃದ್ಧಿಯಾಗುತ್ತಿದ್ದಂತೆ ಹೊಸದಾಗಿ ಡಾಂಬರೀಕರಣ ಮಾಡುವಾಗ ಗುಂಡಿಗಳನ್ನು ಸರಿಪಡಿಸಲಾಗುವುದು ಎಂದು ಬಿಡಿಎ ಅಧಿಕಾರಿಗಳು ಸಮರ್ಥಿಸಿಕೊಂಡಿದ್ದಾರೆ. ಆದರೆ, ಅಧಿಕಾರಿಗಳ ನಿರ್ಲಕ್ಷ್ಯದಿಂದ ನಿವಾಸಿಗಳು ತೊಂದರೆ ಅನುಭವಿಸಬೇಕಾಗಿದೆ” ಎಂದರು.

ಕೆಂಗೇರಿ ಸ್ಯಾಟಲೈಟ್‌ ಟೌನ್‌ನ ಬಂಡೆ ಮಠದ ನಿವಾಸಿ ಪವಿತ್ರಾ ಪವಾರ್‌ ಮಾತನಾಡಿ, “ಅಭಿವೃದ್ಧಿಯಾಗದ ಬಡಾವಣೆಯಲ್ಲಿ ಗುಂಡಿಗಳು ತುಂಬಿವೆ. ಸೈಕ್ಲಿಂಗ್ ಮಾಡುವ ಮಕ್ಕಳು ಆಗಾಗ್ಗೆ ಸ್ಕಿಡ್ ಆಗಿ ಬೀಳುತ್ತಾರೆ. ಹಲವು ವರ್ಷಗಳಿಂದ ರಸ್ತೆಯ ಸ್ಥಿತಿ ಇದೇ ರೀತಿ ಇದ್ದು, ಈ ಜಾಗವನ್ನು ಬಿಬಿಎಂಪಿಗೆ ಹಸ್ತಾಂತರಿಸಿದರೂ ಪರಿಸ್ಥಿತಿ ಬದಲಾಗಿಲ್ಲ. ಮಳೆಯ ಸಮಯದಲ್ಲಿ, ಅನೇಕ ರಸ್ತೆಗಳಲ್ಲಿ ವಾಹನ ಚಾಲನೆ ಮಾಡುವುದು ಸಾಧ್ಯವಾಗುವುದಿಲ್ಲ. ನಿವಾಸಿಗಳು ತಮ್ಮ ವಾಹನಗಳನ್ನು ಈ ರಸ್ತೆಗಳಲ್ಲಿ ಬಳಸುವ ಮೊದಲು ಎರಡು ಬಾರಿ ಯೋಚಿಸಿ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರಿಗೆ ಅಗತ್ಯವಿದೆ 658 ಕಿ.ಮೀ ಒಳಚರಂಡಿ

ಕಳೆದ ವರ್ಷ ರಸ್ತೆ ಗುಂಡಿಗಳಿಂದ ನಗರದಲ್ಲಿ ಮೂವರು ಸಾವನ್ನಪ್ಪಿದ್ದರು. ಬಳಿಕ ಬಿಬಿಎಂಪಿಯನ್ನು ಸರ್ಕಾರ ತರಾಟೆಗೆ ತೆಗೆದುಕೊಂಡಿತ್ತು. ಬಳಿಕ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ಪೌರಕಾರ್ಮಿಕರು ಗುಂಡಿಗಳಿಗೆ ತೇಪೆ ಕಾರ್ಯ ಆರಂಭಿಸಿದರು. ಗುಂಡಿ ಸರಿಪಡಿಸುವುದು ನಿರಂತರ ಪ್ರಕ್ರಿಯೆ ಎಂದು ಬಿಬಿಎಂಪಿ ಹೇಳುತ್ತಿದ್ದು, ಫಿಕ್ಸ್‌ ಮೈ ಸ್ಟ್ರೀಟ್ ಆಪ್‌ನಲ್ಲಿ ದೂರು ಬಂದಾಗ, ಕಾರ್ಮಿಕರು ಗುಂಡಿಗಳನ್ನು ತುಂಬುತ್ತಾರೆ.

ಬಿಬಿಎಂಪಿಯ ಮುಖ್ಯ ಇಂಜಿನಿಯರ್ (ರಸ್ತೆ ಮೂಲಸೌಕರ್ಯ) ಬಿ.ಎಸ್. ಪ್ರಹ್ಲಾದ್ ಮಾತನಾಡಿ, “ರಸ್ತೆಗುಂಡಿ ಮುಚ್ಚುವುದು ವರ್ಷಪೂರ್ತಿ ಮಾಡುವಂತಹ ಸಾಮಾನ್ಯ ಕೆಲಸವಾಗಿದೆ. ಪಾಲಿಕೆಯೂ ಕೋಲ್ಡ್ ಮಿಕ್ಸ್ ಡಾಂಬರೀಕರಣ ತಂತ್ರಜ್ಞಾನದೊಂದಿಗೆ ಬಂದಿದೆ. ಕೋಲ್ಡ್ ಮಿಕ್ಸ್ ಡಾಂಬರು ಯಂತ್ರಗಳ ಬಳಕೆಯಿಲ್ಲದೆ ನಿರ್ವಹಿಸಬಹುದು. ಬಿಬಿಎಂಪಿಯು ಕೋಲ್ಡ್ ಮಿಕ್ಸ್ ಪ್ಲಾಂಟ್ ಅನ್ನು ಸಹ ಸ್ಥಾಪಿಸಿದ್ದು, ಮಳೆ ಮತ್ತು ಗಾಳಿಯಿಂದ ರಕ್ಷಿಸಲು ಶೀಘ್ರದಲ್ಲೇ ಶೆಲ್ಟರ್ ನಿರ್ಮಿಸಲಾಗುವುದು” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...