ಬೆಂಗಳೂರು | ಹೊಸ ಮದ್ಯದ ಅಂಗಡಿಗಳಿಗೆ ಪರವಾನಗಿ; ಸರ್ಕಾರ ಕ್ರಮ ವಿರೋಧಿಸಿ ಪ್ರತಿಭಟನೆ

Date:

‘ಸರ್ಕಾರದ ಆದಾಯಕ್ಕಿಂತ ಜನತೆಯ ಶಾಂತಿಯುತ ಜೀವನ ಮುಖ್ಯ’ ಎಂಬ ಟಿಪ್ಪು ಸುಲ್ತಾನ್ ಅವರ ಆದರ್ಶವನ್ನು ಸರ್ಕಾರ ಗಾಳಿಗೆ ತೂರಿದೆ. ರಾಜ್ಯದಲ್ಲಿ ಹೊಸದಾಗಿ 1,000ಕ್ಕೂ ಹೆಚ್ಚು ಮದ್ಯದ ಅಂಗಡಿಗಳಿಗೆ ಪರವಾನಗಿ ನೀಡಲು ಮುಂದಾಗಿದೆ. ಇದು ಜನವಿರೋಧಿ ನಿರ್ಧಾರ ಎಂದು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್‌ಎಸ್) ಮುಖಂಡೆ ಶಾಂತ ಎ ಅವರು ಕಿಡಿಕಾರಿದ್ದಾರೆ.

ಹೊಸ ಮದ್ಯದ ಅಂಗಡಿಗಳಿಗೆ ಪರವಾನಗಿ ನೀಡಲು ಅಬಕಾರಿ ಇಲಾಖೆ ಸಲ್ಲಿಸಿರುವ ಪ್ರಸ್ತಾವನೆಯನ್ನು ಖಂಡಿಸಿ ಎಐಎಂಎಸ್‌ಎಸ್ ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಶಾಂತ ಅವರು ಮಾತನಾಡಿದರು.

“ಈಗಾಗಲೇ ಮದ್ಯಪಾನದಂತಹ ದುಶ್ಚಟದಿಂದಾಗಿ ಲಕ್ಷಾಂತರ ಕುಟುಂಬಗಳು ಬೀದಿಗೆ ಬಿದ್ದಿವೆ. ಇಂತಹ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಗಳು ಹಾಗೂ ನಗರಗಳಲ್ಲಿನ ಸೂಪರ್ ಮಾರುಕಟ್ಟೆಗಳಲ್ಲಿ ಹೊಸ ಮತ್ತು ಬಳಕೆ ಇಲ್ಲದ ಪರವಾನಗಿಗಳಿಗೆ ಮರುಜೀವ ನೀಡುವಂತೆ ಅಬಕಾರಿ ಇಲಾಖೆ ಪ್ರಸ್ತಾವನೆ ನೀಡಿದೆ. ಇಲಾಖೆಯು ಸುಮಾರು 600ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಧ್ಯದ ಅಂಗಡಿಗಳು ಇಲ್ಲದಿರುವುದನ್ನು ಗುರುತಿಸಿ, ಮದ್ಯದ ಅಂಗಡಿಗಳಿಗೆ ಅನುಮತಿ ನೀಡಲು ಸಜ್ಜಾಗಿದೆ. ಸಮಾಜದಲ್ಲಿ ಹೆಣ್ಣುಮಕ್ಕಳ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ, ಕುಟುಂಬ ಕಲಹಗಳಿಗೆ ಸಮಾಜಘಾತಕ ಕೃತ್ಯಗಳಿಗೆ ಮದ್ಯಪಾನ ಎಡೆ ಮಾಡಿಕೊಡುವುದನ್ನ ಸರ್ಕಾರದ ಅಂಕಿಅಂಶಗಳೆ ಬಹಿರಂಗಪಡಿಸಿವೆ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಮಾಜದ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚು ವರಮಾನವನ್ನು ಸಂಗ್ರಹಿಸಲು ಬೇಕು ಎಂಬ ಕ್ಷುಲ್ಲಕ ಕಾರಣ ನೀಡಿ ಸಮಾಜವನ್ನು ಸಾಂಸ್ಕೃತಿಕ ಅಧಪತನಕ್ಕೆ ತಳ್ಳಲು ಸರ್ಕಾರವು ಈ ಮಾರ್ಗ ಹಿಡಿದಿರುವುದು ನಾಚಿಕೆಗೇಡಿನ ಸಂಗತಿ. ಸರ್ಕಾರದ ಈ ಪ್ರಸ್ತಾವನೆಯನ್ನು ಮಹಿಳಾ ಸಮುದಾಯವು ಒಕ್ಕೊರಳಿನಿಂದ ಖಂಡಿಸಬೇಕಿದೆ. ಟಿಪ್ಪುವನ್ನು ಎತ್ತಿಹಿಡಿಯುವ ಸರ್ಕಾರವುಸರ್ಕಾರದ ಆದಾಯಕ್ಕಿಂತ ಜನತೆಯ ಶಾಂತಿಯುತ ಜೀವನ ಮುಖ್ಯ’ ಎಂಬ ಅವರ ಆದರ್ಶವನ್ನು ಗಾಳಿಗೆ ತೂರಿದೆ. ಸರ್ಕಾರದ ಇಂತಹ ಜನ ವಿರೋಧಿ, ಮಹಿಳಾ ವಿರೋಧಿ ನೀತಿಗಳನ್ನು ಹಿಮ್ಮೆಟ್ಟಿಸಲು ಸಂಘಟಿತ ಹೋರಾಟ ಕಟ್ಟಬೇಕು” ಎಂದು ಕರೆ ನೀಡಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಎಐಡಿವೈಒ ಬೆಂಗಳೂರು ಅಧ್ಯಕ್ಷರಾದ ವಿನಯ್ ಸಾರಥಿ, “ಗ್ಯಾರಂಟಿಗಳ ಹೆಸರಿನಲ್ಲಿ ಜನಗಳ ಜೀವನ ಮಟ್ಟ ಸುಧಾರಿಸುತ್ತೇವೆಂದು ಹೇಳುತ್ತಿರುವ ಸರ್ಕಾರ, ಹಿಂಬಾಗಿಲಿನ ಮೂಲಕ ಜನಸಾಮಾನ್ಯರನ್ನು ಸುಲಿಗೆ ಮಾಡಲು ಹೊರಟಿದೆ. ಕುಡಿತದ ಚಟಕ್ಕೆ ಬಲಿಯಾಗಿ ಬಾಳಿ ಬದುಕ ಬೇಕಾದ ಯುವಕರು ಸಾವನಪುತ್ತಿದ್ದಾರೆ. ಅಪಘಾತಗಳು ಹೆಚ್ಚುತ್ತಿವೆ. ಯುವಜನರಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸುವುದನ್ನು ಬಿಟ್ಟು, ಅವರ ನೈತಿಕ ಬೆನ್ನೆಲುಬನ್ನು ಮುರಿಯಲು ಕಾರಣವಾಗುವ ಮದ್ಯಪಾನವನ್ನು ಪ್ರೋತ್ಸಾಹಿಸುತ್ತಿದೆ” ಎಂದು ಕಿಡಿಕಾರಿದರು.

“ಜನರ ಆರ್ಥಿಕತೆಯ ಸಬಲೀಕರಣಕ್ಕೆ ಕೆಲವು ಗ್ಯಾರಂಟಿಗಳನ್ನು ಘೋಷಿಸಿರುವ ಸರಕಾರವು, ಸಮಾಜದ ಸ್ವಾಸ್ಥ್ಯದ ಗ್ಯಾರಂಟಿಯನ್ನು ಖಾತ್ರಿಪಡಿಸುವ ತನ್ನ ಕನಿಷ್ಠ ಜವಬ್ದಾರಿಯನ್ನು ಮರೆಯಬಾರದು. ಸರ್ಕಾರಕ್ಕೆ ನಿಜವಾಗಿಯೂ ಆದಾಯದ ಕೊರತೆ ಇದ್ದರೆ ರಾಜ್ಯದ ದೊಡ್ಡ ದೊಡ್ಡ ಕಾರ್ಪೋರೇಟ್ ವಲಯದವರ ಸಂಪತ್ತಿನ ಮೇಲೆ ತೆರಿಗೆಗಳನ್ನು ಹಾಕಲಿ, ಆ ಧೈರ್ಯ ಸರ್ಕಾರಕ್ಕೆ ಇದೆಯೇ? ಅದು ಬಿಟ್ಟು ಮತ್ತೆ ಹೆಚ್ಚಿನ ಮದ್ಯದ ಅಂಗಡಿಗಳಿಗೆ ಅನುಮತಿ ನೀಡಿ ಜನಸಾಮಾನ್ಯರನ್ನು ಸುಲಿಗೆ ಮಾಡಿ, ಅದರಲ್ಲೂ ಮುಖ್ಯವಾಗಿ ಯುವಜನರನ್ನು ನೈತಿಕ ಅಧಪತನಕ್ಕೆ ತಳ್ಳುತ್ತಿರುವ ಸರ್ಕಾರದ ಈ ನಿರ್ಧಾರವನ್ನು ನಾಡಿನ ಪ್ರಜ್ಞಾವಂತ ಜನತೆ ತೀವ್ರವಾಗಿ ಖಂಡಿಸಬೇಕು” ಎಂದರು.

ಎಐಎಂಎಸ್‌ಎಸ್‌ನ ಜಿಲ್ಲಾ ಉಪಾಧ್ಯಕ್ಷೆ ನಿರ್ಮಲ ಹೆಚ್.ಎಲ್ ಮಾತನಾಡಿ, “ಇಂದು ಬೆಲೆಏರಿಕೆ, ಬಡತನ, ನಿರುದ್ಯೋಗದಿಂದ ಜನಸಾಮಾನ್ಯರ ಜೀವನ ತತ್ತರಿಸಿದೆ. ಹೀಗಿರುವಾಗ ಹಸಿದ ಹೊಟ್ಟೆಗೆ ಮದ್ಯಪಾನವನ್ನು ಉಣಿಸಲು ಮುಂದಾಗಿರುವ ಸರ್ಕಾರದ ಈ ನಿಲುವು ಖಂಡನೀಯ. ಸರ್ಕಾರವು ಈ ನಡೆಯನ್ನು ಕೂಡಲೇ ಕೈಬಿಡಬೇಕೆಂದು ಅಗ್ರಹಿಸಲು ನಾಡಿನ ಮಹಿಳಾ ಸಮುದಾಯ, ಪ್ರಜ್ಞಾವಂತ ಜನತೆ ಮುಂಬರಬೇಕು.” ಎಂದು ಕರೆ ನೀಡಿದರು.

ಪ್ರತಿಭಟನೆಯಲ್ಲಿ ವಿವಿಧ ಭಾಗಗಳ ಮಹಿಳೆಯರು, ವಿದ್ಯಾರ್ಥಿಗಳು, ಯುವಜನರು, ಜನಸಾಮಾನ್ಯರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...