ಬೆಂಗಳೂರು | ಸ್ನೇಹಿತನ ಪ್ರೀತಿಗೆ ಹತ್ಯೆಯಾದ ಮಾರ್ವೇಶ್

Date:

  • ಬೆಂಗಳೂರಿನ ಹೆಣ್ಣೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು
  • ಮಾರ್ವೇಶ್‌ನಿಗೆ ಮನಬಂದಂತೆ ಥಳಿಸಿ ಹಲ್ಲೆ ಮಾಡಿದ್ದ ಆರೋಪಿಗಳು

ಬೆಂಗಳೂರಿನ ಪೆಲ್ಲೋಟಿ ಕಾಲೇಜಿನ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಗೆಳೆಯನ ಪ್ರೀತಿಗೆ ಅಮಾಯಕ ಮಾರ್ವೇಶ್ ಬಲಿಯಾಗಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.

ಹೆಣ್ಣೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಾರ್ತಿಕ್, ಅಭಿಷೇಕ್, ನೆಲ್ಸನ್, ರಾಕಿ, ಡ್ಯಾನಿಯಲ್, ಶ್ರೀಕಾಂತ್ ಸೇರಿ ಒಟ್ಟು ಆರು ಆರೋಪಿಗಳನ್ನು ಬಂಧಿಸಿದ್ದಾರೆ.

ಮಾರ್ವೇಶ್ ಬೆಂಗಳೂರಿನ ಬಾಣಸವಾಡಿ ಸಮೀಪದ ವಿನ್ಸೆಂಟ್‌ ಪೆಲ್ಲೋಟಿ ಕಾಲೇಜಿನಲ್ಲಿ ಬಿಕಾಂ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದನು. ಈತನ ಸ್ನೇಹಿತ ಕಾಲೇಜಿನಲ್ಲಿ ಓರ್ವ ಯುವತಿಯನ್ನು ಪ್ರೀತಿ ಮಾಡುತ್ತಿದ್ದನು. ಆದರೆ, ಹುಡುಗಿ ಈತನ ಪ್ರೀತಿಯನ್ನು ಒಪ್ಪಿಕೊಂಡಿರಲಿಲ್ಲ. ಯುವತಿ ಬೇರೊಂದು ಹುಡುಗನನ್ನು ಪ್ರೀತಿ ಮಾಡುತ್ತಿದ್ದಳು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೂ ಬಿಡದ ಮಾರ್ವೇಶ್ ಸ್ನೇಹಿತ ಯುವತಿಗೆ ಪ್ರೀತಿಸುವಂತೆ ಸತಾಯಿಸುತ್ತಿದ್ದನು. ಅಲ್ಲದೇ ಆಕೆಗೆ ಕೆಟ್ಟ ಕೆಟ್ಟದಾಗಿ ಮೆಸೇಜ್ ಕಳುಹಿಸುತ್ತಿದ್ದನು. ಯುವತಿ ತನ್ನ ಪ್ರಿಯಕರನಿಗೆ ಈ ಬಗ್ಗೆ ಹೇಳಿಕೊಂಡಿದ್ದಾಳೆ. ಇದರಿಂದ ಕೋಪಗೊಂಡ ಯುವತಿಯ ಪ್ರಿಯಕರ ಮಾರ್ವೇಶ್‌ನ ಸ್ನೇಹಿತನಿಗೆ ಕರೆ ಮಾಡಿದ್ದಾನೆ. ಆತ ಕರೆ ಸ್ವೀಕರಿಸದ ಕಾರಣ ಮಾರ್ವೇಶ್‌ನಿಗೆ ಕರೆ ಮಾಡಿ ಮಾತಾಡಿದ್ದಾನೆ.

ಮಾರ್ವೇಶ್‌ನನ್ನು ಜುಲೈ 26ರಂದು ಹುಡುಗಿಯ ಪ್ರಿಯಕರ ಹಾಗೂ ಆತನ ಸಹಚರರು ರೂಮ್​ವೊಂದಕ್ಕೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಮಾರ್ವೇಶ್‌ನಿಗೆ ಸ್ನೇಹಿತನಿಗೆ ಕರೆ ಮಾಡುವಂತೆ ತಿಳಿಸಿದ್ದಾರೆ. ಎಷ್ಟೇ ಕರೆ ಮಾಡಿದರೂ ಆತ ಉತ್ತರಿಸಿದ ಕಾರಣ ಕೋಪಗೊಂಡ ಹುಡುಗಿಯ ಪ್ರಿಯಕರ ಹಾಗೂ ಸಹಚರರು ಮಾರ್ವೇಶ್‌ನಿಗೆ ಮನಬಂದಂತೆ ಥಳಿಸಿ ಹಲ್ಲೆ ಮಾಡಿದ್ದಾರೆ.

ಬಳಿಕ ಆರೋಪಿಗಳು ಮಾರ್ವೇಶ್‌ನನ್ನು ಆತನ ಸ್ನೇಹಿತ ಸುನೀಲ್ ಎಂಬಾತನಿಗೆ ಒಪ್ಪಿಸಿದ್ದಾರೆ. ಈ ಘಟನೆ ನಂತರ ಮಾರ್ವೇಶ್ ವಾಂತಿ ಮಾಡಿಕೊಂಡಿದ್ದನು. ಹಾಗಾಗಿ, ಸುನೀಲ್ ಮತ್ತು ಇನ್ನಿತರ ಸ್ನೇಹಿತರು ಮಾರ್ವೇಶ್‌ನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ, ಅಷ್ಟರಾಗಲೇ ಮಾರ್ವೇಶ್ ಮೃತಪಟ್ಟಿದ್ದಾನೆ ಎಂದು ವೈದ್ಯರು ದೃಢಪಡಿಸಿದರು.

ಈ ಸುದ್ದಿ ಓದಿದ್ದೀರಾ? ಬಿಎಂಟಿಸಿ | ಎಲೆಕ್ಟ್ರಿಕ್ ಪ್ರೊಟೊಟೈಪ್ ಬಸ್‌ಗೆ ಚಾಲನೆ ನೀಡಿದ ಸಚಿವ ರಾಮಲಿಂಗಾರೆಡ್ಡಿ

“ಎರಡು ದಿನದ ಹಿಂದೆ ಮಾರ್ವೇಶ್ ಹತ್ಯೆ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಬಂಧಿಸಲಾಗಿದೆ. ಬಂಧಿತರೆಲ್ಲರು 20 ರಿಂದ 21 ವರ್ಷದ ಯುವಕರಾಗಿದ್ದು, ಇವರಲ್ಲಿ ಕಾರ್ತಿಕ್, ಅಭಿಷೇಕ್ ಹಾಗೂ ನೆಲ್ಸನ್ ಈ ಮೂವರು ಕಾಲೇಜಿನಿಂದ ಡ್ರಾಪೌಟ್ ಆಗಿದ್ದಾರೆ. ಹಾಗೆಯೇ ಇವರ ವಿರುದ್ಧ ಅಪರಾಧ ಪ್ರಕರಣಗಳು ಇವೆ” ಎಂದು ಪೂರ್ವ ವಿಭಾಗದ ಡಿಸಿಪಿ ಭೀಮಾಶಂಕರ್ ಗುಳೇದ್ ತಿಳಿಸಿದರು.

“ಕಾರ್ತಿಕ್ ವಿರುದ್ಧ ರಾಮಮೂರ್ತಿನಗರದಲ್ಲಿ ರೌಡಿ ಪಟ್ಟಿ ಇದೆ. ಈ ಕೊಲೆಯಲ್ಲಿ ಭಾಗಿಯಾದ ಅಭಿ, ನೆಲ್ಸನ್ ವಿರುದ್ಧ ಮುಂದಿನ ದಿನಗಳಲ್ಲಿ ರೌಡಿ ಶೀಟ್ ತೆರೆಯಲಾಗುವುದು” ಎಂದರು.

ಸದ್ಯ ಮರಣೋತ್ತರ ಪರಿಕ್ಷಾ ವರದಿಗಾಗಿ ಹೆಣ್ಣೂರು ಪೊಲೀಸರು ಕಾಯುತ್ತಿದ್ದು, ವರದಿ ಆಧರಿಸಿ ಮುಂದಿನ ಕ್ರಮಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...