ಬೆಂಗಳೂರು | ಗಲಾಟೆಗೆ ಸಂಬಂಧವಿಲ್ಲದವ ಜಗಳದಲ್ಲಿ ಜೋಶ್‌ ಬೇಕೆಂದು ಚಾಕು ಇರಿದ: ಬಂಧನ

Date:

  • ಎರಡು ಗುಂಪುಗಳ ನಡುವೆ ಗಲಾಟೆ ವೇಳೆ ಕೊಲೆಯಾದ ವಿದ್ಯಾರ್ಥಿ
  • ರೇವಾ ಕಾಲೇಜಿನಲ್ಲಿ ವಾರ್ಷಿಕೋತ್ಸವದ ವೇಳೆ ಈ ಘಟನೆ ನಡೆದಿದೆ

ಬೆಂಗಳೂರಿನ ರೇವಾ ಕಾಲೇಜಿನಲ್ಲಿ ಚಾಕುವಿನಿಂದ ಇರಿದು ಮೆಕ್ಯಾನಿಕಲ್ ವಿದ್ಯಾರ್ಥಿಯ ಬರ್ಬರ ಹತ್ಯೆಯ ಪ್ರಕರಣಕ್ಕೆ ಸಂಬಂಧಿಸಿದಂತೆ, ಘಟನೆ ನಡೆದ ಮೂರು ದಿನಗಳ ಬಳಿಕ ಇಬ್ಬರು ಆರೋಪಿಗಳನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ.

ಭಾಸ್ಕರ್ ಜೆಟ್ಟಿ (22) ಮೃತ ವಿದ್ಯಾರ್ಥಿ. ಈತ ಮೂಲತಃ ಗುಜರಾತ್ ರಾಜ್ಯದವನು. ನಗರದ ರೇವಾ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದುತ್ತಿದ್ದನು. ಕಾಲೇಜು ಕಾರ್ಯಕ್ರಮದಲ್ಲಿ ಆರೋಪಿ ಭರತೇಶ್ ಮತ್ತು ಮೃತ ಭಾಸ್ಕರ್‌ ಜೆಟ್ಟಿ ನಡುವೆ ಗಲಾಟೆ ನಡೆದಿತ್ತು. ಪ್ರಕರಣ ಸಂಬಂಧ ಕಳೆದ ಭಾನುವಾರವೇ ಭರತೇಶ್‌ನನ್ನು ಬಂಧಿಸಲಾಗಿತ್ತು.

ದ್ವಿತೀಯ ವರ್ಷದ ಬಿಕಾಂ ಓದುತ್ತಿದ್ದ ಪ್ರಮುಖ ಆರೋಪಿ ಅನಿಲ್ ಮತ್ತು ಗಲಾಟೆ ಮಾಡಿದ್ದ ಮತ್ತೊಬ್ಬ ಆರೋಪಿ ಶೃಂಗ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರಿನ ರೇವಾ ಕಾಲೇಜಿನಲ್ಲಿ ಪ್ರತಿ ವರ್ಷದ ಆಚರಣೆಯಂತೆ ಈ ವರ್ಷವೂ ಕಾಲೇಜು ವಾರ್ಷಿಕೋತ್ಸವ ಹಮ್ಮಿಕೊಳ್ಳಲಾಗಿತ್ತು. ನಾನಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಈ ವೇಳೆ, ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿದೆ. ಎರಡು ಗುಂಪುಗಳು ಪರಸ್ಪರ ಹೊಡೆದಾಡಿಕೊಂಡಿವೆ. ಗಲಾಟೆ ವೇಳೆ ಕೊಲೆಯಾದ ವಿದ್ಯಾರ್ಥಿ ಕೂಡ ಒಂದು ಗುಂಪಿನಲ್ಲಿ ಭಾಗವಹಿಸಿದ್ದನು ಎಂದು ತಿಳಿದುಬಂದಿದೆ. ತೀವ್ರ ವಿಕೋಪಕ್ಕೆ ತಿರುಗಿದ ಗಲಾಟೆಯಲ್ಲಿ ಭಾಸ್ಕರ್ ಜೆಟ್ಟಿ ಎಂಬ ವಿದ್ಯಾರ್ಥಿಯನ್ನು ಭೀಕರವಾಗಿ ವಿದ್ಯಾರ್ಥಿಗಳು ಕೊಲೆ ಮಾಡಿದ್ದಾರೆ ಎಂದು ಮೊದಲ ಹಂತದಲ್ಲಿ ತಿಳಿದುಬಂದಿತ್ತು.

ಗಲಾಟೆ ನಡೆದು ವಿದ್ಯಾರ್ಥಿ ಸಾವನ್ನಪ್ಪಿದ ಬೆನ್ನಲ್ಲೇ ಕಾಲೇಜು ಮಂಡಳಿ ಪೊಲೀಸರಿಗೆ ಮಾಹಿತಿ ನೀಡಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಕಾಲೇಜು ಸಮಾರಂಭವನ್ನು ಸ್ಥಗಿತಗೊಳಿಸಿ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿದ್ದರು. ಕೊಲೆಯ ಘಟನೆಯ ಬಗ್ಗೆ ಕಾಲೇಜು ಆವರಣದೊಳಗಿನ ಎಲ್ಲ ಸಿಸಿಟಿವಿ ಫೂಟೇಜ್‌ಗಳನ್ನು ಬಾಗಲೂರು ಪೊಲೀಸರು ಪರಿಶೀಲನೆ ಮಾಡಿದ್ದರು. ಅನುಮಾನಾಸ್ಪದ ಯುವಕರನ್ನು ವಶಕ್ಕೆ ಪಡೆದಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರಿಗೆ ಪ್ರಧಾನಿ ಮೋದಿ: ಎಲ್ಲೆಲ್ಲಿ ಸಂಚಾರ ನಿರ್ಬಂಧ? ಇಲ್ಲಿದೆ ನೋಡಿ!

ಪೊಲೀಸ್‌ ವಿಚಾರಣೆಯ ಬಳಿಕ ಹೊರಬಂದ ಸತ್ಯ

ಕಾಲೇಜು ಕಾರ್ಯಕ್ರಮದಲ್ಲಿ ಆರೋಪಿ ಭರತೇಶ್ ಮತ್ತು ಮೃತ ಭಾಸ್ಕರ್‌ ಜೆಟ್ಟಿ ನಡುವೆ ಗಲಾಟೆ ನಡೆದಿತ್ತು. ಆದರೆ, ಆರೋಪಿ ಅನಿಲ್ ಎಂಬಾತನಿಗೂ ಈ ಗಲಾಟೆಗೂ ಸಂಬಂಧವಿಲ್ಲದಿದ್ದರೂ, ಜಗಳದಲ್ಲಿ ಹೆಚ್ಚಿನ ಜೋಶ್‌ ಬರಬೇಕು ಎಂದು ಇಂಜಿನಿಯರಿಂಗ್ ವಿದ್ಯಾರ್ಥಿ ಭರತ್‌ ಜೆಟ್ಟಿ ಎದೆಗೆ ಬಿಕಾಂ ಓದುತ್ತಿದ್ದ ಅನಿಲ್‌ ಎಂಬಾತ ಚಾಕುವನ್ನು ಚುಚ್ಚಿದ್ದಾನೆ.

ದುರದೃಷ್ಟಕರ ಸಂಗತಿ ಎಂದರೆ, ಯುವಕನ ಎದೆಗೆ ಚುಚ್ಚಿದ ಚಾಕು ಜೆಟ್ಟಿಯ ಎದೆಯೊಳಗೆ ಇಳಿದು, ತೀವ್ರ ರಕ್ತಸ್ರಾವವಾಗಿ ಭಾಸ್ಕರ್‌ ಕುಸಿದು ಬೀಳುತ್ತಿದ್ದಂತೆ, ಆತ ಸಾವನ್ನಪ್ಪಿದ್ದಾನೆ. ಈ ಘಟನೆಯ ಬೆನ್ನಲ್ಲೇ ಕೊಲೆ ಆರೋಪಿಗಳು ಕಾರಿನಲ್ಲಿ ಮೂಡಿಗೆರೆಗೆ ಪರಾರಿಯಾಗಿದ್ದಾರೆ. ಅರಣ್ಯದ ತಗ್ಗು ಪ್ರದೇಶವೊಂದರಲ್ಲಿ ತಲೆಮರೆಸಿಕೊಂಡಿದ್ದರು.

ಆರೋಪಿಗಳ ಸ್ನೇಹಿತನ ಫೋನ್ ಜಾಡು ಹಿಡಿದ ಬಾಗಲೂರು ಪೊಲೀಸರು, ಮೂಡಿಗೆರೆಯ ಅರಣ್ಯದ ತಗ್ಗು ಪ್ರದೇಶದಲ್ಲಿ ತಲೆಮರೆಸಿಕೊಂಡಿದ್ದ ಅನಿಲ್‌ ಮತ್ತು ಶೃಂಗ ಎಂಬಾತನನ್ನು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...